• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮುಂದಿನ ದಿನಗಳಲ್ಲಿ ನೀರಿಗಾಗಿ ಯುದ್ದಗಳು ನಡೆದರೇ ಆಶ್ಚರ್ಯ ಪಡಬೇಕಾಗಿಲ್ಲ – ತಹಶಿಲ್ದಾರ್ ಕೆಜಿ ರತ್ನಾಕರ

March 25, 2019 by Yogaraj SK Leave a Comment

vishwa JALA DINACHARANE

ಹಳಿಯಾಳ : ಮುಂದಿನ ದಿನಗಳಲ್ಲಿ ಶುದ್ದ ನೀರಿಗಾಗಿ ಯುದ್ದಗಳು ನಡೆದರೇ ಅದನ್ನು ನೋಡುವಂತಹ ಅನಿವಾರ್ಯತೆ ಉಂಟಾಗಬಹುದಾಗಿದೆ. ನೀರಿನ ಮೂಲಗಳನ್ನು ರಕ್ಷಿಸುವುದರ ಮೂಲಕ ನೀರನ್ನು ಉಳಿತಾಯ ಮಾಡಿದರೇ ಮಾತ್ರ ಮುಂದಿನ ಜನಾಂಗ ಸುಖವಾಗಿ ಇರಲು ಸಾಧ್ಯವಾಗುತ್ತದೆ ಎಂದು ತಹಶೀಲದಾರ ಕೆ.ಜಿ.ರತ್ನಾಕರ ಹೇಳಿದರು.
ಪಟ್ಟಣದ ಮಿನಿವಿಧಾನಸೌಧದ ಆವರಣದಲ್ಲಿ ಜಿಪಂ ಮತ್ತು ತಾಲೂಕಾ ಪಂಚಾಯತರವರ ಸಂಯುಕ್ತಾಶ್ರಯದಲ್ಲಿ ಆಯೋಜನೆ ಮಾಡಿದ್ದ ವಿಶ್ವ ನೀರು ದಿನಾಚರಣೆಯನ್ನು ಸಸಿಗೆ ನೀರುಣಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ನೀರು ಅಮೃತಕ್ಕೆ ಸಮಾನವಾಗಿದೆ. ಅದನ್ನು ಹಿತ ಮಿತವಾಗಿ ಬಳಸುವುದರ ಜೊತೆಗೆ ಮುಂದಿನ ಜನಾಂಗಕ್ಕೆ ಸುರಕ್ಷತವಾಗಿ ಹಸ್ತಾಂತರಿಸಬೇಕಾಗಿದೆ. ನೀರು ಜೀವವನ್ನು ಕಾಪಾಡುವ ಜೀವಜಲವಾಗಿದೆ. ಅದರ ರಕ್ಷಣೆ ಮತ್ತು ಜಾಗೃತಿ ಮೂಡಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದರು.
ಬಿಇಒ ಸಮೀರಅಹ್ಮದ ಮುಲ್ಲಾ ಮಾತನಾಡಿ, ನೀರಿನ ಮಹತ್ವವನ್ನು ಸಾರಲು ಜಲ ಸಾಕ್ಷರತೆ ಎಂಬ ಆಂದೋಲನವನ್ನು ಮಾಡಬೇಕಾಗಿದೆ. ನೀರಿನ ಕುರಿತು ಎಲ್ಲಾ ವಿಷಯಗಳು ಇದರಲ್ಲಿ ಅಡಗಿದ್ದು, ನೀರು ಕಲುಷಿತವಾಗದಂತೆ ನೋಡಿಕೊಳ್ಳುವುದು ಸಹ ನೀರಿನ ರಕ್ಷಣೆಯಾಗಿದೆ. ಮಳೆಗಾಲದಲ್ಲಿ ಮಳೆಯ ನೀರನ್ನು ಮರುಪೂರಣ ಮಾಡುವುದರಿಂದ ಅಂತರಜಲಮಟ್ಟದಲ್ಲಿ ಹೆಚ್ಚಳ ಉಂಟಾಗಿ ನೀರಿನ ಸಮಸ್ಯೆ ಎದುರಾದಾಗ ಅದರಿಂದ ಪ್ರಯೋಜನವಾಗುತ್ತದೆ ಎಂದರು.
ತಾಲೂಕಾ ವೈದ್ಯಾಧಿಕಾರಿ ಡಾ. ರಮೇಶ್ ಕದಂ, ನೀರು ಆರೋಗ್ಯಯುತ ಸಮಾಜದ ನಿರ್ಮಾಣಕ್ಕೆ ಅಗತ್ಯವಾಗಿದೆ. ನೀರು ಇಲ್ಲದೇ ಆರೋಗ್ಯದ ಪರಿಕಲ್ಪನೆ ಅಸಾಧ್ಯವಾಗಿದೆ. ಪ್ರತಿಯೊಬ್ಬರಿಗೂ ಶುದ್ದವಾದ ನೀರು ಬೇಕೆ ಬೇಕು. ಅದು ಎಲ್ಲಾ ರೋಗಗಳನ್ನು ವಾಸಿ ಮಾಡುವ ಶಕ್ತಿಯನ್ನು ಹೊಂದಿದ್ದು, ನೀರಿನ ಕುರಿತು ಮುನ್ನಚ್ಚರಿಕೆವಹಿಸಬೇಕಾಗಿದೆ ಎಂದರು.
ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಇಇ ಎ.ಸಿ.ಹಳೇಮನಿ, ದಿನಗಳು ಕಳೆದಂತೆ ನೀರು ಕಡಿಮೇಯಾಗುತ್ತಿದೆ. ಭೂಮಂಡಳದಲ್ಲಿ ಶೇ 70ಕ್ಕಿಂತಲೂ ಅಧಿಕ ಭಾಗ ನೀರು ಇದ್ದರೂ ಸಹ ನೀರಿನ ಪ್ರಮಾಣದಲ್ಲಿ ಹೆಚ್ಚಳ ಕಂಡುಬರದೇ ಮಾನವನಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸುತ್ತಿದ್ದು ನೀರಿನ ವಿಷಯದಲ್ಲಿ ಇಗಲೇ ಎಚ್ಚರಿಕೆವಹಿಸದಿದ್ದರೇ ಮುಂದಿನ ದಿನಗಳಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತಾಪಂ ಇಒ ಡಾ.ಮಹೇಶ್ ಕುರಿಯವರ ಮಾತನಾಡಿ, ಜಲಾಮೃತ ಎಂಬ ಯೋಜನೆಯ ಮೂಲಕ ಪ್ರತಿ ಗ್ರಾಮಗಳಿಗೆ ತೆರಳಿ ನೀರಿನ ಮಹತ್ವ ಹಾಗೂ ಅದರ ಉಪಯೋಗದ ಕುರಿತು ಜಾಗೃತಿ ಮೂಡಿಸಲಾಗಿದೆ. ಒಂದು ಹನಿ ನೀರು ಮನುಷ್ಯನ ಜೀವ ಉಳಿಸುತ್ತದೆ. ಪ್ರತಿಯೊಬ್ಬರು ಮನೆಗಳನ್ನು ನಿರ್ಮಿಸುವಾಗ ಹಾಗೂ ಗದ್ದೆಗಳಲ್ಲಿ ಇಂಗು ಗುಂಡಿಗಳನ್ನು ನಿರ್ಮಿಸಲು ಪ್ರೋತ್ಸಾಹ ನೀಡಲಾಗುತ್ತಿದ್ದು. ಇದರ ಪ್ರಯೋಜನ ಜನರು ಪಡೆಯಲು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ನೀರನ್ನು ಹಿತಮಿತವಾಗಿ ಬಳಸುವ ಪ್ರತಿಜ್ಞೆ ಬೋಧಿಸಲಾಯಿತು. ಸಮಾರಂಭದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಮತ್ತೀತರರು ಭಾಗವಹಿಸಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: in future, It is not surprising that in recent days, mining system enclosure, next generation can be happier, panchayat association, tahsildar kg Ratnakar, vishwa JALA DINACHARANE, wars for water, water, water contamination, water literacy, water pollution, water saving by protecting water sources

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...