ಹೊನ್ನಾವರ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಏಪ್ರಿಲ್ ಕೊನೆಯ ವಾರದಲ್ಲಿ ಹೊನ್ನಾವರ ತಾಲೂಕಾ ಒಂಬತ್ತನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಮುಂದಾಗಿದೆ. ಸಮ್ಮೇಳನಾಧ್ಯಕ್ಷರ ಆಯ್ಕೆ, ಸಮ್ಮೇಳನದ ಸ್ಥಳ, ದಿನಾಂಕ ಹಾಗೂ ಸ್ವರೂಪವನ್ನು ನಿರ್ಧರಿಸಲು ಹೊನ್ನಾವರ ತಾಲೂಕಾ ವ್ಯಾಪ್ತಿಯ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರ ಸಭೆಯನ್ನು ಏಪ್ರೀಲ್ 5ರಂದು ಸಾಯಂಕಾಲ 4 ಗಂಟೆಗೆ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಕ.ಸಾ.ಪ.ದ ಎಲ್ಲಾ ಆಜೀವ ಸದಸ್ಯರು, ಸಾಹಿತಿಗಳು, ಮಾಧ್ಯಮದ ವರದಿಗಾರರು, ಕನ್ನಡಪರ ಸಂಘಟನೆಯ ಪದಾಧಿಕಾರಿಗಳು, ತಾಲೂಕಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಎಲ್ಲಾ ಕನ್ನಡಾಭಿಮಾನಿಗಳೂ ಈ ಮಹತ್ವದ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಲಹೆ-ಸೂಚನೆ ನೀಡಬೇಕಾಗಿ ಹೊನ್ನಾವರ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಗರಾಜ ಹೆಗಡೆ ಅಪಗಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment