ಹಳಿಯಾಳ:- ವಿಶ್ವ ಕ್ಷಯರೋಗ ದಿನಾಚಾರಣೆ ಅಂಗವಾಗಿ ಪಟ್ಟಣದಲ್ಲಿ ತಾಲೂಕಾ ಮಟ್ಟದ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಹಳಿಯಾಳ ತಾಲೂಕಾ ಮಟ್ಟದ ವಿಶ್ವ ಕ್ಷಯರೋಗ ದಿನಾಚಾರಣೆ ಕಾರ್ಯಕ್ರಮದ ಜಾಥಾಕ್ಕೆ ಪ್ರಭಾರಿ ತಾಲೂಕಾ ಆರೋಗ್ಯಾಧಿಕಾರಿಗ ಡಾ|| ಮಂಜುಳಾ ಮುದಕಣ್ಣವರ ಮತ್ತು ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ|| ಗುರುಪ್ರಸಾದ ಆಚಾರಿ ಚಾಲನೆ ನೀಡಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು , ಆರೋಗ್ಯ ಇಲಾಖೆಯ ಸಿಬ್ಬಂಧಿಗಳು, ಆಶಾ ಕಾರ್ಯಕರ್ತೆಯರು, ಹಾಗೂ ಕ್ಷಯರೋಗ ಚಿಕಿತ್ಸಾ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಆರ್ ಎಮ್ ಬಾವಕರ ಮತ್ತು ಹಿರಿಯ ಕ್ಷಯರೋಗ ಪ್ರಯೋಗಶಾಲಾ ಮೇಲ್ವಿಚಾರಕರಾದ ಎಸ್ ಐ ದಿಡ್ಡಿ ಇತರರು ಇದ್ದರು.
Leave a Comment