ಹೊನ್ನಾವರ : ತಾಲೂಕಿನ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನವಿಲಗೋಣ ಗ್ರಾಮ ಪಂಚಾಯತನ ಉಪಾಧ್ಯಕ್ಷರಾಗಿರುವ ಮಾದೇವಿ ಸುರೇಶ ನಾಯ್ಕ ಇವರನ್ನು ನೇಮಿಸಲಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ಹೇಳಿದರು.
ಅವರು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯ ಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದರು. ಮಾಜಿ ಶಾಸಕಿ ಶಾರದಾ ಶೆಟ್ಟಿಯವರ ಸೂಚನೆ ಮೇರೆಗೆ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಡಾ.ಪುಪ್ಪಾ ಅಮರನಾಥನ್ ಅವರ ಆದೇಶದಂತೆ ಉತ್ತರಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುಜಾತಾ ಗಾಂವಕರ ಇವರನ್ನು ನೇಮಿಸಿ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯಕ್ಕೆ ಆಗಮಿಸಿ ಅಧಿಕಾರ ಪತ್ರವನ್ನು ಹಸ್ತಾಂತರಿಸಿದರು.
ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧೀಯವರ ನೇತ್ರತ್ವದಲ್ಲಿ ಈ ಸಂದÀರ್ಭದಲ್ಲಿ ಮಾತನಾಡಿದ ಸುಜಾತಾ ಗಾಂವಕರ ಮಹಿಳೆಯರನ್ನು ರಾಜ್ಯಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ದೇಶದ ಆಡಳಿತದ ಮುಖ್ಯವಾಹಿನಿಗೆ ತರಲು ಹಾಗೂ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ದುಡಿಯುತ್ತಿರೆಂದು ನಂಬಿ ನಾನು ತಮಗೆ ಈ ಜವಾದ್ದಾರಿಯನ್ನು ವಹಿಸುತ್ತಿದ್ದೆನೆಂದು ತಿಳಿಸಿ ನೀಡಿದ ನೇಮಕಾತಿ ಪತ್ರದಲ್ಲಿ ತಿಳಿಸಿದ್ದಾರೆ. ತಮ್ಮ ಕಾಲಾವಧಿಯಲ್ಲಿ ಹೊನ್ನಾವರ ತಾಲೂಕಿನಲ್ಲಿ ಮಹಿಳಾ ಕಾಂಗ್ರೆಸ್ ಇನ್ನಷ್ಟು ಬಲಗೊಳ್ಳಲಿ ಎಂದು ಶುಭ ಹಾರೈಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಅಂಕೋಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ವೆರ್ಣೆಕರ, ಜಿಲ್ಲಾ ಪಂಚಾಯತ ಸದಸ್ಯ ಶಾಂತಿ ಆಗೇರ, ಜಿಲ್ಲಾ ಕಾಂಗ್ರೆಸ್ ಸದಸ್ಯ ಉಮಾ ಮೇಸ್ತ, ಹೇಮಾವತಿ ಗೌಡ ಇನ್ನು ಮುಂತಾದವರು ಉಪಸಿತ್ಥಿತರಿದ್ದರು.
Leave a Comment