ಹಳಿಯಾಳ:- ಕೆನರಾ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಅನಂತಕುಮಾರ ಹೆಗಡೆ ಗೆಲ್ಲುತ್ತಾರೆಂದು ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೆಕರ ವ್ಯಂಗ್ಯವಾಡಿದ್ದಾರೆ.
ಪಟ್ಟಣದಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ 21 ಕ್ಷೇತ್ರಗಳಲ್ಲಿ ಕಾಂಗ್ರೇಸ್ ಅಭ್ಯರ್ಥಿಗೆ ಜೆಡಿಎಸ್ ನವರು ಬೆಂಬಲಿದ್ದಾರೆ ಕಾಂಗ್ರೇಸ್ ನವರು 7 ಕ್ಷೇತ್ರಗಳಲ್ಲಿ ಅವರ ಪರ ಬೆಂಬಲಕ್ಕೆ ನಿಂತು ಪ್ರಚಾರ ಮಾಡಬೇಕಾಗಿರುವುದು ಮೈತ್ರಿ ಧರ್ಮ ಪಾಲನೆ ಮಾಡಬೇಕಾಗಿರುವುದು ಎಲ್ಲರ ಕರ್ತವ್ಯವಾಗಿತ್ತು. ಅದರಂತೆ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ ಪರವಾಗಿ ಸಾಕಷ್ಟು ಪ್ರಚಾರ ಕಾರ್ಯ ಮಾಡಲಾಗಿದ್ದು ಉತ್ತಮ ಪ್ರತಿಕ್ರಿಯೇ ದೊರಕಿದ್ದು ಈ ಬಾರಿ ಹೊಸ ಮುಖಕ್ಕೆ ಅವಕಾಶ ನೀಡೊಣ ಎಂದು ಜನತೆ ತೀರ್ಮಾನಿಸಿದ್ದು ಆನಂದ ಅಸ್ನೋಟಿಕರ ಗೆಲುವು 100% ಪಕ್ಕಾ ಎಂದು ಘೊಟ್ನೆಕರ ವಿಶ್ವಾಸದಿಂದ ನುಡಿದರು.
Leave a Comment