ಶಿರಸಿ: ಉತ್ತರ ಕನ್ನಡದ ಶಿರಸಿ ನಗರದ ಹೊರಭಾಗದ ಬಯಲಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಯಾರೋ ಕೊಲೆ ಮಾಡಿ ಸುಟ್ಟು ಬಿಸಾಡಿದ್ದಾರೆ ಎಂದು ಶಂಕಿಸಲಾಗಿದೆ.
ಶಿರಸಿಯ ಶ್ರೀ ರಾಮ ಕಾಲೊನಿ ವಾಸಿ ಜಾಕಿರ್ ಖಾನ್ ಮೊಹದ್ದಿನ್ ಖಾನ್ ಪಟೇಲ್ ಮೃತ ವ್ಯಕ್ತಿಯಾಗಿದ್ದಾನೆ. ಬೆಂಕಿ ಹಚ್ಚಿ ಸುಟ್ಟು ಶವ ತಂದು ಎಸೆದ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸರು ತನಿಖೆ ನಡೆಸುತಿದ್ದಾರೆ. ಪ್ರಕರಣದ ಸತ್ಯಾಸತ್ಯತೆ ಪೋಲೀಸ್ ತನಿಖೆಯಿಂದ ಹೊರಬರಬೇಕಿದೆ.




Leave a Comment