• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಿಲ್ಲಾಧಿಕಾರಿ ಡಾ. ಹರೀಶ ಅವರಿಂದ ಹಳಿಯಾಳ ವಿಧಾನಸಭಾ ಕ್ಷೇತ್ರದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

May 18, 2019 by Yogaraj SK Leave a Comment

 

DC KDP meeting in haliyal

ಹಳಿಯಾಳ : ಕಸ ವಿಲೇವಾರಿ, ಶುದ್ದ ಕುಡಿಯುವ ನೀರಿನ ಪೂರೈಕೆ, ವಾಯು ಮಾಲಿನ್ಯ ತಡೆದು ಶುದ್ದ ಗಾಳಿ ಪೂರೈಸುವ ಮೂಲಭೂತ ಕರ್ತವ್ಯ ನಗರ ಸಭೆ, ಪುರಸಭೆ ಹಾಗೂ ತಾಲೂಕಾಡಳಿತದ ಪ್ರಮುಖ ಕಾರ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರಿಶಕುಮಾರ ಅಭಿಪ್ರಾಯಪಟ್ಟರು.
ಪಟ್ಟಣದ ಮಿನಿ ವಿಧಾನಸೌಧದ ಸಭಾ ಭವನದಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಹಳಿಯಾಳ-ಜೋಯಿಡಾದ ವಿಧಾನಸಭಾ ಕ್ಷೇತ್ರದ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನಾ, ಕುಂದು ಕೊರತೆ ಸಭೆಯಲ್ಲಿ ಅವರು ಮಾತನಾಡಿದರು.
ಜಿಪಂ, ತಾಪಂ, ಪುರಸಭೆ, ನಗರಸಭೆ, ತೋಟಗಾರಿಕೆ, ಪೋಲಿಸ್, ಆರೋಗ್ಯ, ಕೃಷಿ ಇಲಾಖೆ ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳಿಂದ ಪ್ರಗತಿ ಪರಿಶೀಲನೆ ಹಾಗೂ ಕುಂದು ಕೊರತೆಯನ್ನು ಆಲಿಸಿದ ಡಿಸಿ ಸರ್ಕಾರಿ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ಎಲ್ಲ ಸರ್ಕಾರಿ ಜಮೀನುಗಳ ಸಮೀಕ್ಷೆ ಕಾರ್ಯ ಒಂದು ಬಾರಿಯಾದರು ಮಾಡಿಸಬೇಕು ಇದು ಮುಂದೆ ಭವಿಷ್ಯದಲ್ಲಿ ಸಹಕಾರಿಯಾಗುತ್ತದೆ ಎಂದರು.
ಮುಂದಿನ ಅವಶ್ಯಕತೆ ಅನುಗುಣವಾಗಿ ಕಸ ವಿಲೇವಾರಿಗೆ ಹಾಗೂ ಸ್ಮಶಾನಗಳಿಗೆ ಈಗಲೇ ಜಾಗ ಗುರುತಿಸಿ ಇಡುವಂತೆ ಸಲಹೆ ನೀಡಿದ ಅವರು ಯಾರಿಗೂ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅಲ್ಲದೇ ಉತ್ತರ ಕನ್ನಡ ಜಿಲ್ಲೆಯು ಪ್ರವಾಸಿ ಕ್ಷೇತ್ರವಾಗಿದ್ದು ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಅಭದ್ರತೆಯ ಭಯ ಕಾಡದಂತೆ ಅಧಿಕಾರಿಗಳು ನೊಡಿಕೊಳ್ಳಬೇಕೆಂದು ಕೂಡ ಜಿಲ್ಲಾಧಿಕಾರಿ ಸಲಹೆ ನೀಡಿದರು.
ಇನ್ನೂ ಜಿಲ್ಲಾಧಿಕಾರಿ ಹರೀಶ ಅವರು ಹಳಿಯಾಳ ಪಟ್ಟಣದಲ್ಲಿ ನೀರಿನ ಪೈಪಲೈನ್ ಒಡೆದು ನೀರು ಪೋಲಾಗುತ್ತಿರುವ ಬಗ್ಗೆ ಹಾಗೂ ಕಸದ ಸಮಸ್ಯೆಯ ಬಗ್ಗೆ ಅವರ ಮೊಬೈಲ್ ವಾಟ್ಸ್‍ಪ್‍ಗೆ ಬಂದ ದೂರಿನ ಬಗ್ಗೆ ಸಭೆಯ ಗಮನ ಸೆಳೆದು ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವಂತೆ ಆದೇಶಿಸಿದರು.
ಉಕ ಜಿಲ್ಲಾ ಎಸಿ ಅಭಿಜಿನ್ ಅವರು ಅಧಿಕಾರಿಗಳಿಂದ ಪ್ರಗತಿ ಪರಿಶೀಲಿಸಿ ಹಲವು ಸಲಹೆ ಸೂಚನೆಗಳನ್ನು ನೀಡಿದರು.
ತಹಶೀಲ್ದಾರ್ ಶಿವಾನಂದ ಉಳ್ಳೇಗಡ್ಡಿ, ಎಸಿಎಫ್ ಸಂತೋಷ ಕೆಂಚಪ್ಪನವರ, ಪಿಡಬ್ಲೂಡಿ ಅಧಿಕಾರಿ ಕುಲಕರ್ಣಿ, ಕೃಷಿ ಇಲಾಖೆ ನಾಗೇಶ ನಾಯ್ಕ, ತಾಪಂ ಇಓ ಡಾ.ಮಹೇಶ ಕುರಿಯವರ ಎಲ್ಲ ಇಲಾಖೆಗಳ ಅಧಿಕಾರಿಗಳು ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: air pollution prevention, allocation of officials from all departments, Assembly constituencies, clean air supply, clean drinking water supply, DC KDP meeting in haliyal, garbage disposal, Harisha, health and agriculture department. Harihaya, horticulture, including government land survey, Municipal Council, Police, Progress inspection, Progress Review Meeting, zip panchayat, ಆರೋಗ್ಯ, ಕಸ ವಿಲೇವಾರಿ, ಕೃಷಿ ಇಲಾಖೆ ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳಿಂದ ಪ್ರಗತಿ ಪರಿಶೀಲನೆ, ಜಿಪಂ, ಜಿಲ್ಲಾಧಿಕಾರಿ ಡಾ. ಹರೀಶ ಅವರಿಂದ ಹಳಿಯಾಳ, ತಾಪ, ತೋಟಗಾರಿಕೆ, ನಗರಸಭೆ, ಪುರಸಭೆ, ಪೋಲಿಸ್, ಪ್ರಗತಿ ಪರಿಶೀಲನಾ ಸಭೆ, ವಾಯು ಮಾಲಿನ್ಯ ತಡೆದು, ವಿಧಾನಸಭಾ ಕ್ಷೇತ್ರದ ಇಲಾಖೆಗಳ, ಶುದ್ದ ಕುಡಿಯುವ ನೀರಿನ ಪೂರೈಕೆ, ಶುದ್ದ ಗಾಳಿ ಪೂರೈಸು, ಸರ್ಕಾರಿ ಜಮೀನುಗಳ ಸಮೀಕ್ಷೆ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...