ಹಳಿಯಾಳ : ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸರ್ಕಾರದ ಅವಧಿಯಲ್ಲಿ ರಾಜ್ಯ ಪ್ರಗತಿ ಕಂಡಿದೆ ಆದರೇ ಈಗಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಡಳಿತ ತೃಪ್ತಿಕರವಾಗಿಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿರುವ ಉಕ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಮತ್ತೇ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕೆಂದು ತಮ್ಮ ಮನದಾಳ ಬಿಚ್ಚಿಟ್ಟಿದ್ದಾರೆ.
ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ ಸೋಮವಾರ ಪ್ರಕೃತಿ ವಿಕೋಪದಿಂದ ಹಾನಿಗಿಡಾದ ರೈತರು, ಜನರಿಗೆ ಕೆಡಿಸಿಸಿ ಬ್ಯಾಂಕ್ ಮೂಲಕ ಮಂಜೂರಾದ ಪರಿಹಾರದ ಚೆಕ್ಗಳನ್ನು ವಿತರಿಸಿ ಬಳಿಕ ಸುದ್ದಿಗೊಷ್ಠಿಯಲ್ಲಿ ಮಾತನಾಡಿದರು.
ಮೈತ್ರಿ ಸರ್ಕಾರದ ಕಾರ್ಯವೈಖರಿಯು ನನಗೆ ಬೇಸರವನ್ನುಂಟು ಮಾಡಿದ್ದು, ಕೆಲವರು ಮೈತ್ರಿ ಧರ್ಮ ಪಾಲಿಸದೇ ದ್ರೋಹ ಎಸಗಿದ್ದಾರೆ. ಅಲ್ಲದೇ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಆಡಳಿತವು ಕಿರಿಕಿರಿಯನ್ನುಂಟು ಮಾಡಿದೆ. ಕೆಲ ಕಾಂಗ್ರೇಸ್ ಮುಖಂಡರು ಸಹ ಮೈತ್ರಿ ಧರ್ಮ ಪಾಲಿಸಿಲ್ಲ. ಚುನಾವಣೋತ್ತರ ಫಲಿತಾಂಶದ ಕುರಿತು ಮಾತನಾಡಿದ ಅವರು ಪ್ರಜಾಪ್ರಭುತ್ವದಲ್ಲಿ ಪ್ರಜೆಯ ನಿರ್ಣಯವೇ ಅಂತಿಮವಾಗಿದ್ದು ಪ್ರಜೆಗಳ ನಿರ್ಣಯಗಳಿಗೆ ಜನಪ್ರತಿನಿಧಿಗಳು ತೆಲೆ ಬಾಗ ಬೇಕಾಗುತ್ತದೆ ಎಂದರು.
ಇನ್ನೂ ಮಹಾತ್ಮಾ ಗಾಂಧೀಜಿಯವರನ್ನು ಇಡೀ ವಿಶ್ವವೇ ಗೌರವಿಸುತ್ತದೆ. ದೇಶದ ಜನರು ಅವರನ್ನು ಮಹಾತ್ಮಾ ಎಂದು ಕರೆದಿದ್ದಾರೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಗಾಂಧಿಜಿಯವರ ಬಗ್ಗೆ ಅವಹೇಳಕಾರಿ ಹೇಳಿಕೆಗಳನ್ನು ನೀಡುವುದು ಎಷ್ಟು ಸರಿ ಇಂತಹವರ ಮೇಲೆ ಕ್ರಮ ಜರುಗಿಸುವ ಅವಶ್ಯಕತೆ ಇದೆ ಎಂದರು.
ಕಳೆದ ತಿಂಗಳು ತಾಲೂಕಿನಲ್ಲಿ ಸುರಿದ ಭಾರೀ ಮಳೆಗೆ ಬೆಳೆ ಜೊತೆಗೆ ಪ್ರಾಣ ಹಾನಿ ಸಂಬಂವಿಸಿದೆ. ಅಲ್ಲದೇ ಕೆಲವು ಬಡ ಕುಟುಂಬದ ಜನರು ತಮ್ಮ ಮನೆಗಳನ್ನು ಕಳೆದುಕೊಂಡಿದ್ದು ಅವರ ನೋವುಗಳಿಗೆ ಸ್ಪಂದಿಸಿ ಕೆಡಿಸಿಸಿ ಬ್ಯಾಂಕ್ 20 ಬಡ ಕುಟುಂಬಗಳಿಗೆ ಒಟ್ಟೂ 1.60 ಲಕ್ಷ ರೂಗಳಷ್ಟು ಪರಿಹಾರದ ಚೆಕ್ಗಳನ್ನು ವಿತರಿಸಿದ್ದು ರೈತರ ಬೆಳೆಗಳಿಗೆ ಪರಿಹಾರ ನೀಡಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆದಿದೆ ಎಂದರು.
Leave a Comment