• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮೋದಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದ ಸಚಿವ ದೇಶಪಾಂಡೆ

May 24, 2019 by Yogaraj SK Leave a Comment

download

ಬೆಂಗಳೂರು,

ಮೇ 23, 2019 : 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವುದಕ್ಕೆ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದ ದೇಶಪಾಂಡೆರವರು ಕೇಂದ್ರದಲ್ಲಿ ಬರುವ ನೂತನ ಸರ್ಕಾರ ಕೈಗೊಳ್ಳಬೇಕಾದ ಕೆಲವು ಆದ್ಯತಾ ಕೆಲಸಗಳ ಬಗ್ಗೆ ಅವರ ಗಮನ ಸೆಳೆದಿದ್ದಾರೆ.

ಈ ಬಗ್ಗೆ ಮೋದಿಯವರಿಗೆ ಪತ್ರ ಬರೆದ ಸಚಿವರು “ಕೈಗಾರಿಕಾ ಉತ್ಪಾದನೆ ದೇಶದ ಜಿ.ಡಿ.ಪಿ.ಯಲ್ಲಿ ಶೇ.30%ರಷ್ಟು ಪಾಲು ಹೊಂದಿದ್ದು, ಇತ್ತೀಚಿನ ವರ್ಷಗಳಲ್ಲಿ ತಯಾರಿಕಾ ವಲಯದಲ್ಲಿ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇದರ ಫಲವಾಗಿ ದೇಶದಲ್ಲಿ ಯುವ ಜನರಿಗೆ ಉದ್ಯೋಗವಿಲ್ಲದಂತಾಗಿ ದೇಶದ ಆರ್ಥಿಕ ಅಭಿವೃದ್ಧಿಗೂ ಮಾರಕವಾಗಿ ಪರಿಣಮಿಸಿ ಜಿಡಿಪಿ ನಿರೀಕ್ಷಿತ ಬೆಳವಣಿಗೆ ತಲುಪಿರುವುದಿಲ್ಲ. ದೇಶದ ನಿರುದ್ಯೋಗ ದರ ಶೇ.6.1% ಇದ್ದು, ಇದು ಕಳೆದ 4 ದಶಕಗಳಲ್ಲೇ ಅತ್ಯಧಿಕವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಯಾರಿಕಾ ವಲಯದ ಜವಳಿ, ಆಟಿಕೆಗಳು, ಸೇವಾ ವಲಯ, ಇತ್ಯಾದಿ ಕೈಗಾರಿಕೆಗಳನ್ನು ಸ್ಥಾಪಿಸುವುದಕ್ಕೆ ಆದ್ಯತೆ ನೀಡುವುದರ ಜೊತೆಗೆ ಉದ್ಯೋಗಾವಕಾಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಲವಾರು ನೂತನ ಯೋಜನೆಗಳನ್ನು ಜಾರಿ ಮಾಡುವುದು ಅತ್ಯಾವಶ್ಯಕವಾಗಿರುತ್ತದೆ ಎಂಬುದನ್ನು” ವಿವರಿಸಿದ್ದಾರೆ.

ವಿಶ್ವದಲ್ಲೇ ಭಾರತವು ಅತ್ಯಧಿಕ ಯುವಕರನ್ನು ಹೊಂದಿರುವ ದೇಶವಾಗಿದ್ದು, ಜಾಗತೀಕರಣ ಹಾಗೂ ಅಸ್ಥಿರ ತಾಂತ್ರಿಕತೆಯಲ್ಲಿ ಭಾರತದ ಆರ್ಥಿಕ ಅಭಿವೃದ್ಧಿಗೆ ಕೌಶಲ್ಯವು ಅತಿ ಅಗತ್ಯ. ಯುವಕರಲ್ಲಿ ಕೌಶಲ್ಯವನ್ನು ಹೆಚ್ಚಿಸುವುದರಿಂದ ಅವರಲ್ಲಿ ಉದ್ಯೋಗ ಸಾಮಥ್ರ್ಯ, ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಜೊತೆಗೆ ಸಾಮಾಜಿಕ ಸ್ವೀಕಾರವನ್ನೂ ಸಾಧ್ಯವಾಗಿಸುತ್ತದೆ.

 

ಮಾನವ ಶ್ರಮವನ್ನು ಪ್ರತ್ಯಾಯೋಜಿಸುವ ತಾಂತ್ರಿಕತೆಯು ನಿರುದ್ಯೋಗ ಸಮಸ್ಯೆಗೆ ಮೂಲ ಕಾರಣವಾದರೂ ಹಳೆಯ ಶ್ರಮಿಕ ಕೌಶಲ್ಯ ಬಲಕ್ಕೆ ಆಧುನಿಕ ಕೌಶಲ್ಯವನ್ನು ಅಳವಡಿಸುವುದು ಇಂದಿನ ತುರ್ತು ಅಗತ್ಯ. ಅಲ್ಲದೇ, ಹೊಸ ತಾಂತ್ರಿಕ ಕೌಶಲ್ಯಗಳನ್ನು ಪಠ್ಯಕ್ರಮದಲ್ಲಿ ಅಳವಡಿಸುವುದರ ಅವಶ್ಯಕತೆ ಇದೆ.

ಕೃಷಿ ಕ್ಷೇತ್ರ ಭಾರತದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಜಿ.ಡಿ.ಪಿ.ಯಲ್ಲಿ ಶೇ.18%ರಷ್ಟು ಪಾಲು ಹೊಂದಿದೆ. ಅಲ್ಲದೇ, ದೇಶದ ಶ್ರಮಿಕ ಕ್ಷೇತ್ರಕ್ಕೆ ಶೇ.44% ಔದ್ಯಮಿಕ ಕೊಡುಗೆ ನೀಡಿದೆ. ಆದುದರಿಂದ ಕೃಷಿ ಕ್ಷೇತ್ರವನ್ನು ನವೀಕರಿಸಿದಲ್ಲಿ, ಸಮಗ್ರ ಅಭಿವೃದ್ಧಿ ಕಾಣಬಹುದಾಗಿದೆ. ಆದರೆ ಇಲ್ಲಿ ಸಮಸ್ಯೆಗಳು ಅನೇಕ. ಅಂತರ್ಜಲ ಹಾಗೂ ಮಣ್ಣಿನ ಫಲವತ್ತತೆ ಕ್ಷೀಣಿಸುವಿಕೆ, ಭೂ ಸವಕಳಿ, ಜಲ ನಿರ್ವಹಣೆ, ಬೆಳೆಗಳ ವಲಯವಾರು ಅಸಮತೋಲನ, ಬೆಲೆಯ ಏರಿಳಿತ ಮುಂತಾದ ಸಮಸ್ಯೆಗಳು ಅಧಿಕವಾಗಿದ್ದು ಕೃಷಿ ಕ್ಷೇತ್ರಕ್ಕೆ ಮಾರಕವಾಗಿದೆ.

.

Modi

ಪ್ರತಿ ವರ್ಷವೂ ರೈತ ಸಮುದಾಯ ಕೃಷಿ ಕ್ಷೇತ್ರ ಉತ್ತಮಗೊಳ್ಳುವುದೆಂದು ಸರ್ಕಾರಗಳತ್ತ ಮುಖ ಮಾಡಿ ಭರವಸೆಯಿಂದ ಕಾಯುತ್ತಿದೆ. ಆದರೆ ಸರ್ಕಾರದ ಯೋಜನೆಗಳು ಜಾರಿಯಾಗುವಲ್ಲಿ ಸೋಲುತ್ತಿವೆ. ಇದರ ಬಗ್ಗೆ ಮರು-ಪರಿಶೀಲನೆ ಅಗತ್ಯವಾಗಿ ಆಗಬೇಕಾಗಿದೆ.

ಇತ್ತೀಚಿನ ದಿನಗಳಲ್ಲಿ ವಿದ್ಯಾವಂತ ಯುವಕರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಆದ್ದರಿಂದ ಗ್ರಾಮೀಣ ಭಾರತದಲ್ಲಿ ಕೃಷಿಯನ್ನು ಒಂದು ಆಕರ್ಷಕ, ಲಾಭದಾಯಕ ಉದ್ಯೋಗವನ್ನಾಗಿಸುವಲ್ಲಿ ಯೋಚಿಸಬೇಕಿದೆ. ಇದರಿಂದ ನಗರ ಪ್ರದೇಶಗಳ ಮೇಲಿನ ಒತ್ತಡ, ಸಂಚಾರ ದಟ್ಟಣೆ, ಪರಿಸರ ಮಾಲಿನ್ಯ, ಇವುಗಳನ್ನು ತಡೆಗಟ್ಟುವುದರ ಜೊತೆಗೆ ಪ್ರಾದೇಶಿಕ ಸಮತೋಲನವನ್ನು ಸಾಧಿಸಿದಂತಾಗುತ್ತದೆ.

ಜಿ.ಎಸ್.ಟಿ.ಯನ್ನು ಮರು-ಪರಿಶೀಲಿಸುವ ಅಗತ್ಯವನ್ನು ಒತ್ತಿ ಹೇಳಿದ ದೇಶಪಾಂಡೆರವರು ಈಗಿರುವ ಸ್ಲ್ಯಾಬ್‍ಗಳನ್ನು ಪರಿಷ್ಕರಿಸಿ ಸುಲಭ ಸ್ಲ್ಯಾಭ್‍ಗಳನ್ನು ಪರಿಚಯಿಸುವ ಮೂಲಕ ಸುಗಮ ರೀತಿಯಲ್ಲಿ ಬೃಹತ್ ಮೊತ್ತದ ತೆರಿಗೆಯನ್ನು ಸಂಗ್ರಹಿಸಬಹುದಾಗಿದೆ ಎಂದು ಸಲಹೆ ನೀಡಿದ್ದಾರೆ.

ಪ್ರಾಕೃತಿಕ ವಿಕೋಪಗಳಾದ ಬರ, ಪ್ರವಾಹ, ಭೂಕಂಪ ಮುಂತಾದ ಅನಾಹುತಗಳು ಆಗಿಂದಾಗ್ಗೆ ದೇಶದಲ್ಲಿ ಸಂಭವಿಸುತ್ತಿದ್ದು ಎಲ್ಲಾ ರಾಜ್ಯಗಳು ಬರ ಪ್ರವಾಹದಂತಹ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳುತ್ತಿವೆಯೇ ಹೊರತು ಶಾಶ್ವತ ಕ್ರಮಗಳ ಬಗ್ಗೆ ಚಿಂತಿಸುತ್ತಿಲ್ಲ. ಈ ನಿಟ್ಟಿನಲ್ಲಿ ನದಿ ಜೋಡಣೆ, ನದಿ ಹರಿವಿನ ಬದಲಾವಣೆ, ಜಲ ಮೂಲಗಳ ರಕ್ಷಣೆ, ಅಂತರ್ ಸಂಪರ್ಕ, ಜಲ ಸಂರಕ್ಷಣೆ ಹಾಗೂ ಅರಣ್ಯ ಸಂರಕ್ಷಣೆಯಂತಹ ಶಾಶ್ವತ ಕ್ರಮಗಳನ್ನು ಕೈಗೊಳ್ಳುವ ಬಗ್ಗೆಯೂ ದೂರದೃಷ್ಠಿಯಿಂದ ಆಲೋಚಿಸಿ ಆದ್ಯತೆಯ ಮೇಲೆ ಕ್ರಮ ವಹಿಸುವ ಅಗತ್ಯವಿದೆ ಎಂಬುದನ್ನು ಸಹ ಸಚಿವ ದೇಶಪಾಂಡೆರವರು ತಮ್ಮ ಪತ್ರದಲ್ಲಿ ವಿಷದವಾಗಿ ನಿರೂಪಿಸಿದ್ದಾರೆ.

**********

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Trending, Haliyal News Tagged With: agriculture, agriculture sector, along with the central issue of the country, and sustainable technology., as well as employment opportunities in the areas of stress, employment efficiency, environmental pollution, globalization, Growth GDP, Growth Growth, Industrial Production, Lok Sabha Elections It is an unprecedented success, new technological skills curriculum, performance, submitting, thanks to the Modi victory, the new scheme, The new unemployment rate, to enhance India's economic development, traffic congestion, ಅಭಿವೃದ್ಧಿಗೂ ಮಾರಕವಾಗಿ ಪರಿಣಮಿಸಿ ಜಿಡಿಪಿ ನಿರೀಕ್ಷಿತ ಬೆಳವಣಿಗೆ, ಅಸ್ಥಿರ ತಾಂತ್ರಿಕತೆಯಲ್ಲಿ, ಉದ್ಯೋಗ ಸಾಮಥ್ರ್ಯ, ಒತ್ತಡ, ಕಾರ್ಯಕ್ಷಮತೆ, ಕೃಷಿ ಕ್ಷೇತ್ರ ಉತ್ತಮ, ಕೈಗಾರಿಕಾ ಉತ್ಪಾದನೆ, ಜಾಗತೀಕರಣ, ಜೊತೆಗೆ, ಜೊತೆಗೆ ಉದ್ಯೋಗಾವಕಾಶವನ್ನು ಹೆಚ್ಚಿಸುವ, ದೇಶದ ನಿರುದ್ಯೋಗ ದರ, ದೇಶದ ಪ್ರಮುಖ ಸಮಸ್ಯೆ, ನಿಟ್ಟಿನಲ್ಲಿ, ಪರಿಸರ ಮಾಲಿನ್ಯ, ಬಗ್ಗೆ ಕೇಂದ್ರದ ಗಮನ ಸೆಳೆದ ಸಚಿವ ದೇಶಪಾಂಡೆ, ಭಾರತದ ಆರ್ಥಿಕ ಅಭಿವೃದ್ಧಿ, ಮೋದಿ ಗೆಲುವಿಗಾಗಿ ಅಭಿನಂದನೆ, ರೈತ ಸಮುದಾಯ, ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು, ಸಂಚಾರ ದಟ್ಟಣೆ, ಸಲ್ಲಿಸುವ, ಹಲವಾರು ನೂತನ ಯೋಜನೆ, ಹಾಗೂ, ಹೊಸ ತಾಂತ್ರಿಕ ಕೌಶಲ್ಯಗಳನ್ನು ಪಠ್ಯಕ್ರಮ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...