ಹಳಿಯಾಳ:- ನೀರು ಎರಚುವ ಕ್ಷುಲ್ಲಕ ವಿಚಾರಕ್ಕೆ ಅಣ್ಣ ತಂಗಿಯ ನಡುವೆ ನಡೆದ ಸಣ್ಣ ಜಗಳದಿಂದ ಬೇಸರಗೊಂಡ ವಿದ್ಯಾರ್ಥಿಯೊರ್ವಳು ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಹಳಿಯಾಳ ಪಟ್ಟಣದಲ್ಲಿ ಸಂಭವಿಸಿದೆ.
ಇತ್ತೀಚೆಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿದ್ದ ವಿದ್ಯಾರ್ಥಿನಿ ಭವಾನಿ ಊರ್ಫ ವಾಣಿ ಅಡಿವೆಪ್ಪ ಪಾಗದ್ (17) ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾಳೆ.
ಮನೆಯಲ್ಲಿ ಸಹೋದರ ಕಿಶನಕುಮಾರನೊಂದಿಗೆ ನೀರು ಎರಚುವ ವಿಚಾರದಲ್ಲಿ ಜಗಳಮಾಡಿಕೊಂಡ ಸಹೋದರಿ ಭವಾನಿ ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಮನೆಯ ಮಹಡಿಯ ಮೇಲೆ ತೆರಳಿ ಸಿಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಇದನ್ನು ಕಂಡ ಅಕ್ಕಪಕ್ಕದ ಮನೆಯವರು ತಕ್ಷಣ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗಿದೆ ವಾಣಿ ಮೃತಪಟ್ಟಿದ್ದಾಳೆ.
ಮೃತಳು ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಅವಳ ಮರಣದಲ್ಲಿ ಯಾವುದೇ ಸಂಶಯ ಇರುವುದಿಲ್ಲ ಎಂದು ಆಕೆಯ ತಾಯಿ ಲತಾ ಪಾಗದ ಹಳಿಯಾಳ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.
Leave a Comment