• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಟ್ಟಡ ಕಾರ್ಮಿಕ ಫಲನುಭವಿಗಳಿಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಶಿಘ್ರವಾಗಿ ಸರಿಪಡಿಸುವಂತೆ ಆಗ್ರಹಿಸಿ ಮನವಿ

June 5, 2019 by Gaju Gokarna Leave a Comment

watermarked hnr 05 m.

ಹೊನ್ನಾವರ: ಕಟ್ಟಡ ಕಾರ್ಮಿಕ ಫಲನುಭವಿಗಳಿಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಶಿಘ್ರವಾಗಿ ಸರಿಪಡಿಸುವಂತೆ ಆಗ್ರಹಿಸಿ ಇಲ್ಲಿಯ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ತಾಲೂಕ ಸಮಿತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸಿಲ್ದಾರ್ ಮೂಲಕ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಮಂಡಳಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಕಟ್ಟಡ ಕಾರ್ಮಿಕರು , ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸಿಗುವ ಧನಸಹಾಯದ ಸೌಲಬ್ಯಗಳು ಹಾಗೂ ಹೊನ್ನಾವರ ಕಾರ್ಮಿಕ ನಿರಿಕ್ಷಕ ಕಛೇರಿಯಲ್ಲಿ ಖಾಯಂ ಕಾರ್ಮಿಕ ನೀರಿಕ್ಷಕರು ಇಲ್ಲದೇ ಕಟ್ಟಡ ಕಾರ್ಮಿಕರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. 2016ರಿಂದ ಇಲ್ಲಿಯವರೆಗೆ ತಮ್ಮ ಕಾರ್ಮಿಕರು ನಿರೀಕ್ಷಕರ ಕಛೇರಿ ಹೊನ್ನಾವರದಲ್ಲಿ ಕಟ್ಟಡ ಕಾರ್ಮಿಕರು ಮದುವೆ, ಹೆರಿಗೆ, ಮೆಡಿಕಲ್, ಶೈಕ್ಷಣಿಕ ಹಾಗೂ ಹಲವು ವಿವಿಧ ಸೌಲಭ್ಯಕ್ಕಾಗಿ ಅರ್ಜಿಯನ್ನು ಸಲ್ಲಿಸಿದ್ದು ಸೌಲಬ್ಯಗಳು ಕಟ್ಟಡ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ಸಿಗದೇ ವಿಳಂಬವಾಗಿದೆ. ಈ ಕುರಿತು ಹಲವಾರು ಬಾರಿ ಮನವಿಯನ್ನು ಸಲ್ಲಿಸಿದ್ದರು ಸಹ ಮಂಡಳಿಯಿಂದ ಯಾವುದೇ ರೀತಿಯ ಸ್ಪಂದನೆ ಸಿಕ್ಕಿರುವುದಿಲ್ಲ. ಕಳೆದ ಎರಡುಮೂರು ವರ್ಷಗಳಿಂದ ಮಂಡಳಿಯಿಂದ ಸಿಗಬೇಕದ ಧನ ಸಹಾಯದ ಸೌಲಭ್ಯಗಳು ಸರಿಯದ ಸಮಯಕ್ಕೆ ಸಿಗದೇ ಕಾರ್ಮಿಕರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
ರಾಜ್ಯಾದ್ಯಂತ ಎಕರೂಪ ನೀತಿ ಜಾರಿಯಲ್ಲಿಲ್ಲ. ಇದರಿಂದ ಸಿ.ಐ.ಟಿ.ಯು ಸಂಯೋಜಿತ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಫೆಡರೇಷನ್ ಸಂಘವು ಕಾರ್ಮಿಕರ ಸಮಸ್ಯೆ ಮತ್ತು ಕೆಲವು ನೂನ್ಯತೆಗಳನ್ನು ಅತಿ ಶೀಘ್ರದಲ್ಲಿ ಸರಿಪಡಿಸುವಂತೆ ಮನವಿಯಲ್ಲಿ ಕೋರಿದ್ದಾರೆ. ಸಮಸ್ಯೆ ಬಗೆಹರಿಸಲು ವಿಳಂಬವಾದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾ ಕಾರ್ಮಿಕರ ಕಛೇರಿಯ ಎದುರು ಕರ್ಮಿಕರ ಜೊತೆಗೂಡಿ ನ್ಯಾಯಕ್ಕಾಗಿ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.
ಪಟ್ಟಣದ ಶರಾವತಿ ವೃತ್ತದಲ್ಲಿ ಆರಂಭವಾದ ಪ್ರತಿಬಟನಾ ಮೆರವಣಿಗೆ ರಾಷ್ಟ್ರೀಯ ಹೆದಾರಿಯಲ್ಲಿ ಸಂಚರಿಸಿ ಮಾಸ್ತಿಕಟ್ಟೆ ಮಾರ್ಗವಾಗಿ ಪಟ್ಟಣದ ಪ್ರಮುಖ ಬೀದಿಯಲ್ಲಿ ಪ್ರತಿಭಟನೆ ನಡೆಯಿಸಿ ತಹಸಿಲ್ದಾರ್ ಕಛೇರಿಗೆ ತೆರಳಿ ಮನವಿ ಸಲ್ಲಿಸಿದರು. ತಹಸಿಲ್ದಾರ್ ಅನುಪಸ್ಥಿತಿಯಲ್ಲಿ ಕಂದಾಯ ಇಲಾಖಾ ಅಧಿಕಾರಿಗ ಭಾಸ್ಕರ್ ಭಟ್ ಮನವಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ರಾಜ್ಯ ಉಪಾದ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ 11 ತಾಲೂಕಿನಿಂದ ಒಟು 57 ಸಾವಿರಕ್ಕು ಅಧಿಕ ಕಟ್ಟಡ ಕಾರ್ಮಿಕರ ನೊಂದಣಿಯಾಗಿದೆ. ಆದರೆ ಖಾಯಂ ಕಾರ್ಮಿಕ ಅಧಿಕಾರಿಗಳು ಇಲ್ಲ. 11 ತಾಲೂಕಿಗೆ ಒರ್ವ ಕಾರ್ಮಿಕ ನೀರಿಕ್ಷರು ಇದ್ದಾರೆ. ಅದು ಕೂಡಾ ಬೆರೆ ಜಿಲ್ಲೆಯಿಂದ ಬಂದು ಕಾರ್ಯನಿರ್ವಹಿಸಬೇಕು. ಅವರಿಗೆ ಅರ್ಜಿಗಳ ಪರಿಶಿಲಿಸಲು ಆಗುತ್ತಿಲ್ಲ. ಕೂಡಲೇ ಸಿಬ್ಬಂದಿಗಳನ್ನು ನೆಮಕ ಮಾಡಬೇಕು. ಕಲ್ಯಾಣ ಮಂಡಳಿಯಲ್ಲಿ ಎಳುಸಾವಿರದ ಐನೂರು ಕೋಟಿ ಹಣ ಇದೆ ಅದು ಪ್ರತಿವರ್ಷ ಜಾಸ್ತಿ ಆಗುತ್ತಾ ಇದೆ. ಆದರೆ ಫಲಾನುಭವಿಗಳಿಗೆ ಸಿಗಬೇಕಾದ ಸೌಲಬ್ಯ ಸಿಗುತ್ತಿಲ್ಲ ಎಂದರು.
ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾ ಕಾರ್ಯದರ್ಶಿ ತಿಲಕ ಜಟ್ಟಿ ಗೌಡ ಮಾತನಾಡಿ, ಈ ಹಿಂದೆ ಹಲವು ಬಾರಿ ಕಾರ್ಮಿಕರ ಸಮಸ್ಯೆ ಪರಿಹರಿಸುವಂತೆ ಮಂಡಳಿಗೆ ಮನವಿ ಸಲ್ಲಿಸಿದ್ದೇವು. ಚುನಾವಣೆಯ ನೆಪವೊಡ್ಡಿ ಎರಡು ತಿಂಗಳು ಕಳೆದರು. ಯಾವುದೇ ನೋಂದಣಿ ಕಾರ್ಯವಾಗಲಿ, ಸೌಲಬ್ಯ ವಿತರಣೆಯಾಗಲಿ ನಡೆಯಲಿಲ್ಲ. ಈ ಹಿನ್ನಲೆಯಲ್ಲಿ ಬ್ರಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ತಾಲೂಕ ಸಮಿತಿ ಅಧ್ಯಕ್ಷ ತಿಮ್ಮಪ್ಪ ಶಂಭು ಗೌಡ, ಉಪಾಧ್ಯಕ್ಷ ಮಂಜು ಹನುಮಂತ ಗೌಡ, ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಜ್ದೂರ್ ಸಂಘದ ಜಿಲ್ಲಾ ಕಾರ್ಯದರ್ಶಿ ನಾರಾಯಣ ಜಟ್ಟಿ ಗೌಡ, ತಲೂಕಾ ಅಧ್ಯಕ್ಷ ಮಹಾಬಲೆಶ್ವರ ಚಿಕ್ಕ ಮೇಸ್ತ ಸೇರಿದಂತೆ ಸಂಗದ ನೂರಾರು ಸದಸ್ಯರು ಪಾÀಲ್ಗೊಂಡಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಕಟ್ಟಡ ಕಾರ್ಮಿಕ ಫಲನುಭವಿಗಳಿಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆಗುತ್ತಿರುವ ಸಮಸ್ಯೆ, ಮನವಿ, ಶಿಘ್ರವಾಗಿ ಸರಿಪಡಿಸುವಂತೆ ಆಗ್ರಹಿಸಿ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...