• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ ವಿತರಣೆ

June 18, 2019 by Gaju Gokarna Leave a Comment

watermarked photo 2

ಹೊನ್ನಾವರ .ಮಾತೃಛಾಯಾ ಟ್ರಸ್ಟ್(ರಿ) ಕಾಸರಕೋಡ ಇವರ ಆಶ್ರಯದಲ್ಲಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಕೋಡ ಶಾಲಾ ವಿದ್ಯಾರ್ಥಿಗಳಿಗೆ “ನೋಟ್-ಬುಕ್” ವಿತರಿಸಲಾಯಿತು.
ಕಾರ್ಯಕ್ರಮದ ದೀಪ ಬೆಳಗಿಸಿ ಮಾತನಾಡಿದ ಸೇಪ್ ಸ್ಟಾರ ಸೌಹಾರ್ದ ಸಹಕಾರಿ ಸಮೂಹ ಸಂಸ್ಥೆಗಳ ಪ್ರಮುಖರಾದ ಜಿ.ಜಿ.ಶಂಕರ ಮಾತನಾಡುತ್ತಾ, ಹಲವು ವರ್ಷಗಳಿಂದ ಈ ಸಂಸ್ಥೆಯ ಜನಸ್ನೇಹಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾ ಬಂದಿದ್ದೇನೆ. ಈ ಸಂಸ್ಥೆ ಪುಟ್ಟ ಪುಟ್ಟ ಹೆಜ್ಜೆಗಳನ್ನು ಇಡುತ್ತಾ ಸಮಾಜಮುಖಿ ಕಾರ್ಯಕ್ರಮದಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ಕಳೆದ ನವೆಂಬರನಲ್ಲಿ ಹೊನ್ನಾವರದಲ್ಲಿ “ನಿನಾಸಂ ತಿರುಗಾಟ” ನಾಟಕೋತ್ಸವನ್ನು ಹಮ್ಮಿಕೊಂಡ ಸಂಸ್ಥೆಯು ಅದರಲ್ಲಿ ಉಳಿತಾಯವಾದ 21,000/- ರೂ.ಗಳನ್ನು ಹೊನ್ನಾವರದ ಪೆದ್ರೋ ಪೊವೆಡಾದ ವಿಶೇಷ ಶಾಲೆಯ ಮಕ್ಕಳಿಗೆ ನೀಡಿ ಮಾದರಿ ಕೆಲಸವನ್ನು ಮಾಡಿದೆ ಎಂದು ಈ ಸಂದರ್ಭದಲ್ಲಿ ಸ್ಮರಿಸಿದರಲ್ಲದೇ ಸರಕಾರಿ ಶಾಲೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಳೆದ 10 ವರ್ಷಗಳಿಂದಲೂ ಸತತವಾಗಿ ಈ ಶಾಲೆಯ ಮಕ್ಕಳಿಗೆ ನೋಟ್-ಬುಕ್‍ಗಳನ್ನು ವಿತರಿಸುತ್ತಾ ಬಂದಿರುವುದು ಶ್ಲಾಘನೀಯವಾಗಿದೆ ಎಂದರು.
ಇನ್ನೋರ್ವ ಅತಿಥಿಗಳಾದ ಮಂಕಿ ಬ್ಲಾಕ್ ಕಾಂಗ್ರೆಸ್‍ನ ಅಧ್ಯಕ್ಷರಾದ ಗೋವಿಂದ ನಾಯ್ಕ ಮಾತನಾಡಿ ಶಿಕ್ಷಣ ಕ್ಷೇತ್ರ ವ್ಯಾಪರೀಕರಣಗೊಳ್ಳುತ್ತಿರುವ ಈಗಿನ ಸಂದರ್ಭದಲ್ಲಿ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರಲ್ಲದೇ ಇಂದು ನೆಮ್ಮದುರು ಕುಳಿತುಕೊಂಡು ಸಂಸ್ಥೆ ನೀಡಿದ ನೋಟ್-ಬುಕ್‍ಗಳನ್ನು ಸ್ವೀಕರಿಸುತ್ತಿರುವ ಮಕ್ಕಳಾದ ನೀವು ಶಿಕ್ಷಣ ಪಡೆದು ಉನ್ನತ ಸ್ಥಾನಗಳಿಸಿ ಇದೇ ತರಹ ವೇದಿಕೆಯ ಮೇಲೆ ಕುಳಿತುಕೊಂಡು ಜನಸೇವೆ ಮಾಡಬೇಕು ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು.
ಬಿಜೆಪಿ ಪಕ್ಷದ ಜಿಲ್ಲಾ ಶಕ್ತಿ ಕೇಂದ್ರದ ಕಾರ್ಯದರ್ಶಿಯಾದ ರವೀಂದ್ರ ಶೇಟ ಮಾತನಾಡಿ ಮಾತೃಛಾಯಾ ಟ್ರಸ್ಟಿನ ಕಾರ್ಯವೈಖರಿಯನ್ನು ಶ್ಲಾಘಸಿದರಲ್ಲದೇ ಈ ಸಂಸ್ಥೆ ಇನ್ನೂ ಬಲಿಷ್ಠವಾಗಿ ಬೆಳೆದು ಅಭಿವೃದ್ಧಿ ಹೊಂದಿ ಇನ್ನು ಹೆಚ್ಚಿನ ಪ್ರಮಾಣದ ಸೇವೆ ಸಂಸ್ಥೆಯಿಂದ ಸಮಾಜಕ್ಕೆ ದೊರೆಯುವಂತಾಗಲಿ ಎಂದು ಹಾರೈಸಿದರು.
ಶಾಲೆಯ ಮುಖ್ಯೋಧ್ಯಾಪಕರಾದ ಸುಬ್ರಹ್ಮಣ್ಯ ಭಟ್ಟ ಸ್ವಾಗತಿಸಿದರು. ಟ್ರಸ್ಟ ಅಧ್ಯಕ್ಷರಾದ ಅಶೋಕ ಕಾಸರಕೋಡ ಪ್ರಾಸ್ತಾವಿಕ ಮಾತನಾಡಿ, ವಂದನಾರ್ಪಣೆ ಮಾಡಿದರು. ಶಾಲಾ ಶಿಕ್ಷಕಿ ಶೈಲಾ ನಿರೂಪಿಸಿದರು.

watermarked photo 4 watermarked photo 3

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: Distribution of notebooks to students, Kasarakoda, Matruchaya Trust, ಕಾಸರಕೋಡ, ನಿನಾಸಂ ತಿರುಗಾಟ” ನಾಟಕೋತ್ಸ, ಮಾತೃಛಾಯಾ ಟ್ರಸ್ಟ್, ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ ವಿತರಣೆ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...