• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ತಾಲೂಕ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ ರೈತರ ಸಮಸ್ಯೆ ಆಲಿಸಿದ ಶಾಸಕ ದಿನಕರ ಶೆಟ್ಟಿ.

June 28, 2019 by Vishwanath Shetty Leave a Comment

krashi elake

ಹೊನ್ನಾವರ: ಜಿಲ್ಲಾ ಪಂಚಾಯತ ಉತ್ತರಕನ್ನಡ, ಕೃಷಿ ಇಲಾಖೆ ಮತ್ತು ಕೃಷಿಸಂಬಧಿತ ಇಲಾಖೆಯ ಸಹಯೋಗದಲ್ಲಿ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಕುಮುಟಾ ಹೊನ್ನಾವರ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿ ಹಳದೀಪುರ ಗ್ರಾಮ ಪಂಚಾಯತ ಸಭಾಭವನದಲ್ಲಿ ಚಾಲನೆ ನೀಡಿದರು.
ನಂತರ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಅಭಿಯಾನ ಗ್ರಾಮೀಣ ಭಾಗದ ರೈತರ ಮನೆಬಾಗಿಲಿಗೆ ಕೃಷಿ ಸೌಲಭ್ಯವನ್ನು ತಲುಪಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಅಧಿಕಾರಿಗಳು ಸರ್ಕಾರದ ಸೌಲಭ್ಯವನ್ನು ರೈತರಿಗೆ ತಲುಪಿಸುವ ಕೆಲಸವನ್ನು ಚುರುಕಾಗಿ ಮಾಡಬೇಕು. ರೇಷ್ಮೆ ಇಲಾಖೆಯು ತಾಲೂಕಿನಲ್ಲಿ ನಾಮವಕಾಸ್ಥೆಯಿಂದ ಕೂಡಿದೆ. ಇಲಾಖೆಯ ಸಮಸ್ಯೆ ಹಾಗೂ ಬೇಡಿಕೆಯನ್ನು ಜನಪ್ರತಿನಿಧಿಗಳಿಗೆ ತಲುಪಿಸಿದರೆ ಸಮಸ್ಯೆ ಬಗೆಹರಿಯುತ್ತದೆ. ಗ್ರಾಮದ ಹಲವು ವರ್ಷದ ಬೇಡಿಕೆಯನ್ನು ಇಂದು ಗಮನಕ್ಕೆ ತಂದಿರುದರಿಂದ ಸಮಸ್ಯೆ ಬಗೆಹರಿಸುವತ್ತ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಮ್ಮ ಜಿಲ್ಲೆಯ ಬಹುಮುಖ್ಯವಾದ ಇಲಾಖೆ ಕೃಷಿ ಇಲಾಖೆ ಆದರೂ ರೈತರ ನೆರವಿಗೆ ಧಾವಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿ ಮುಂದಿನ ದಿನದಲ್ಲಾದರೂ ಆ ಬಗ್ಗೆ ಗಮನ ಹರಿಸುವಂತೆ ಸಲಹೆ ನೀಡಿದರು.
ಕಾರ್ಯಕ್ರದ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ ಅಧ್ಯಕ್ಷರಾದ ಗುಣಮಾಲ ಜೈನ್ ಮಾತನಾಡಿ ಗ್ರಾಮದ ಅಭಿವೃದ್ದಿಗೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಹಕಾರ ಅಗತ್ಯ ಆ ನಿಟ್ಟಿನಲ್ಲಿ ಇರ್ವರು ಕಾರ್ಯನಿರ್ವಹಿಸಬೇಕಿದೆ. ರೈತ ಸಂಪರ್ಕ ಕೇಂದ್ರವನ್ನು ಹಳದೀಪುರದಲ್ಲಿ ಮರಳಿ ಸ್ಥಾಪಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದ ಕುರಿತು ಪ್ರಾಸ್ತವಿಕವಾಗಿ ಸಹಾಯಕ ಕೃಷಿ ನಿರ್ದೇಶಕರಾದರಾದ ಜಯರಾಮ ಹೆಬ್ಬಾರ ಮಾತನಾಡಿ ಇಲಾಖೆಯ ನಡಿಗೆ ರೈತನ ಮನೆ ಬಾಗಿಲಿಗೆ ಎನ್ನುವ ಧೈಯದೊಂದಿಗೆ ಕಾರ್ಯಕ್ರಮ ಪ್ರಾರಂಭಿಸಿದ್ದು 3 ಹೋಬಳಿಯ ಪ್ರತಿ ಗ್ರಾಮ ಪಂಚಾಯತಿಗೆ ಚಲಿಸುವ ವಾಹನ ಹೋಬಳಿಯ ಒಂದು ಕಡೆ ವಿಜ್ಞಾನಿಗಳು, ರೈತರು ಮತ್ತು ಅಧಿಕಾರಿಗಳ ನಡುವೆ ಸಂವಾದ ವಸ್ತು ಪ್ರದರ್ಶನದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಟಿ.ಎಸ್.ಹೆಗಡೆ, ಸುರೇಶ ಶೆಟ್ಟಿ, ಉಪಾಧ್ಯಕ್ಷ ಗಣೇಶ ಪೈ, ಇಲಾಖೆಯ ಅಧಿಕಾರಿಗಳಾದ ಲಕ್ಷ್ಮೀ ದಳವಾಯಿ, ಎಂ.ಜಿ.ಗೌಡ, ಎಂ.ಎಸ್.ನಾಯ್ಕ, ಉಪಸ್ಥಿತರಿದ್ದರು. ಕೃಷಿ ಅಧಿಕಾರಿ ಲಕ್ಷ್ಮಿ ದಳವಾಯಿ ಸ್ವಾಗತಿಸಿ ಯುವಜನಸೇವಾ ಕ್ರೀಡಾದಿಕಾರಿ ಸುದೇಶ ನಾಯ್ಕ, ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಸಭೆ ಪ್ರಾರಂಭದಲ್ಲಿ ಬೆರಳಣಿಕೆಯಷ್ಟು ಹಾಜರಿದ್ದ ರೈತರ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡ ಶಾಸಕರು ವಿವಿಧ ಇಲಾಖಾ ಅಧಿಕಾರಿಗಳ ಉಪಸ್ಥಿತಿಯನ್ನು ಪ್ರಶ್ನಿಸಿದರು. ರೈತರಿಂದ ಸಮಸ್ಯೆ ಬಗ್ಗೆ ವಿಚಾರಿಸಿದಾಗ ಸಮಸ್ಯೆಗಳ ಸುರಿಮಳೆಗೈದರು. ಹಳದೀಪುರದಲ್ಲಿ ನಿರ್ಮಿಸಿದ ರೈತಸಂಪರ್ಕ ಕೇಂದ್ರ ಕೃಷಿ ಇಲಾಖೆ ಕೇಂದ್ರ ಪಾಳು ಬಿದ್ದಿದೆ. ಭತ್ತದ ಬೆಲೆಗೆ ಉಪ್ಪು ನೀರು ಬಂದು ನಾಶವಾದರೂ ಇಲಾಖಾಧಿಕಾರಿಗಳು ತಲೆ ಹಾಕುವುದಿಲ್ಲ. 100 ಎಕರೆಗೂ ಅಧಿಕ ಜಮೀನಿನಲ್ಲಿ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ. ಕಳೆದ 10 ವರ್ಷದಿಂದ ರೈತ ಸಂಪರ್ಕ ಕೇಂದ್ರ ಪುನಃ ಸ್ಥಾಪಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇಂದು ಅಧಿಕಾರಿಗಳು ಪೇಪರ್ ಕೃಷಿ ಅಭಿಯಾನಕ್ಕೆ ಬಂದಿದ್ದಾರೆ. ರೈತರಿಗೆ ಕಾರ್ಯಕ್ರಮದ ಕುರಿತು ಮಾಹಿತಿಯೇ ನೀಡಿಲ್ಲ. ಜನಪ್ರತಿನಿಧಿಗಳಿಗೆ 3 ದಿನದ ಮೊದಲು ಮಾಹಿತಿ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: Comprehensive Agriculture Campaign Program, Farmer Contact Center, Farmers' Home Farming Facilities, Haridipura, Mysore Dinner Sheetty., Paper Agriculture Campaign, Running Farming Campaign, taluk, ಕೃಷಿ ಅಭಿಯಾನಕ್ಕೆ ಚಾಲನೆ, ಕೃಷಿ ಇಲಾಖೆ ಮತ್ತು ಕೃಷಿಸಂಬಧಿತ ಇಲಾಖೆಯ ಸಹಯೋಗ, ಜಿಲ್ಲಾ ಪಂಚಾಯತ ಉತ್ತರಕನ್ನಡ, ತಾಲೂಕ, ನೀಡಿ, ಪೇಪರ್ ಕೃಷಿ ಅಭಿಯಾನ, ರೈತ ಸಂಪರ್ಕ ಕೇಂದ್ರವನ್ನು ಹಳದೀಪುರ, ರೈತರ ಮನೆಬಾಗಿಲಿಗೆ ಕೃಷಿ ಸೌಲಭ್ಯ, ರೈತರ ಸಮಸ್ಯೆ ಆಲಿಸಿದ, ಶಾಸಕ ದಿನಕರ ಶೆಟ್ಟಿ, ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...