• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಧೋರಣೆಯ ವಿರುದ್ದ ಹೊನ್ನಾವರ ಕಾಂಗ್ರೇಸ್ ಘಟಕದಿಂದ ಪ್ರತಿಭಟನೆ

September 12, 2019 by Vishwanath Shetty Leave a Comment

watermarked 4

ಭೀಕರ ಪ್ರವಾಹಕ್ಕೆ ತುತ್ತಾಗಿರುವ ಪ್ರದೇಶವನ್ನು ರಾಷ್ಟ್ರೀಯ ದುರಂತ ಪ್ರದೇಶವೆಂದು ಘೋಷಿಸಬೇಕು ಮತ್ತು ರಾಜ್ಯಕ್ಕೆ ಈವರೆಗೂ ಕೇಂದ್ರದಿಂದ ಯಾವುದೇ ಹಣಕಾಸಿನ ಪರಿಹಾರವನ್ನು ನೀಡದೇ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆಪಾದಿಸಿ, ಕೇಂದ್ರ ಹಾಗೂ ರಾಜ್ಯ ಬಿ.ಜೆ.ಪಿ ಸರಕಾರದ ಧೋರಣೆಯನ್ನು ವಿರೋಧಿಸಿÉ ತಹಶೀಲ್ದಾರ ಕಾರ್ಯಾಲಯದ ಎದುರು ಮಂಕಿ ಮತ್ತು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಸಮಿತಿ ಧರಣಿ ಸತ್ಯಾಗ್ರಹ ನಡೆಸಿ ರಾಜ್ಯಪಾಲರಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದರು.
ಸರಿಸುಮಾರು 2 ಗಂಟೆಗೂ ಅಧಿಕ ಕಾಲ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕರದ ವಿರುದ್ದ ಗೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರ ವಿವೇಕ್ ಶೆಣ್ವಿÉ ಧರಣಿ ನಿರತ ಸ್ಥಳಕ್ಕೆ ಆಗಮಿಸಿ, ರಾಜ್ಯಪಾಲರಿಗೆ ನೀಡಲಾದ À ಮನವಿ ಸ್ವೀಕರಿಸಿದರು. ಕೇಂದ್ರ ಮತ್ತು ರಾಜ್ಯ ಸರಕಾರಗಳು ತಕ್ಷಣ ನೆರೆ ಪರಿಹಾರವನ್ನು ನೀಡದಿದ್ದಲ್ಲಿ ಉಗ್ರವಾದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಲಾಯಿತು

watermarked 5


ನಂತರ ಮಾಧ್ಯಮದವರನ್ನು ಉದ್ದೇಶಿಸಿ ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಮಾತನಾಡಿ ಭೀಕರ ನೆರೆ ಹಾವಳಿಯಿಂದ ರಾಜ್ಯಾದಂತ 88 ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ, 10 ಜನ ನಾಪತ್ತೆಯಾಗಿದ್ದಾರೆ. ಸಾವಿರಾರು ಕುಟುಂಬಗಳು ತಮ್ಮ ಆಸ್ತಿ- ಪಾಸ್ತಿಗಳನ್ನು ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಮನೆ-ಮಠ ಕಳೆದುಕೊಂಡ ನಾಲ್ಕೂವರೆ ಲಕ್ಷ ಸಂತ್ರಸ್ತರು 1.465 ಗಂಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. 1 ಲಕ್ಷ 70 ಸಾವಿರ ಮನೆಗಳು ಸಂಪೂರ್ಣವಾಗಿ ನಾಶವಾಗಿದ್ದರೆ, 2 ಲಕ್ಷ 67 ಸಾವಿರ ಮನೆಗಳು ಹಾನಿಗೊಂಡಿದೆ. ರೈತರು ಬೆಳೆದ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಬೆಳೆಗಳು ಕಣ್ಣಿಗೆ ಕಾಣದಂತಾಗಿದೆ. ಸಾವಿರಾರು ಸೇತುವೆಗಳು, ರಸ್ತೆಗಳು ನೀರಿನಲ್ಲಿ ಕೊಚ್ಚಿಹೋಗಿ ಮಾಯವಾಗಿದೆ. ಕರ್ನಾಟಕದಲ್ಲಿ ನೆರೆಯಿಂದ 38,000 ಕೋಟಿ ರೂಪಾಯಿ ನಾಶವಾಗಿದ್ದರೂ, ಕೇಂದ್ರದ ಬಿ.ಜೆ.ಪಿ ಸರಕಾರ ಸಂತ್ರಸ್ತರಿಗೆ ನಯಾಪೈಸೆ ಬಿಡುಗಡೆಗೊಳಿಸಿಲ್ಲಾ. ಪ್ರಧಾನಿಯಾದಿಯಾಗಿ ಕೇಂದ್ರದ ಹಣಕಾಸು, ಗೃಹ ಮಂತ್ರಿಗಳು ಬಂದು ಹೋದರೂ ಯಾವುದೇÉ ಪ್ರಯೋಜನವಾಗಿಲ್ಲಾ ಎಂದರು.

Honnavar Congress Dharani Satyagraha


ಮಂಕಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗೋವಿಂದ ನಾಯ್ಕ, ನಮ್ಮ ಭಾಗದಲ್ಲಿ ಲಿಂಗನಮಕ್ಕಿಯಿಂದ ಬಿಟ್ಟ ಹೆಚ್ಚುವರಿ ನೀರಿನಿಂದ ಶರಾವತಿ ನದಿಯ ಎಡ-ಬಲ ದಂಡೆಯ ಸಾವಿರಾರು ಜನರು ತಮ್ಮ ಆಸ್ತಿ- ಪಾಸ್ತಿಗಳನ್ನು ಕಳೆದುಕೊಂಡಿದ್ದು, ಹಾಗೇ ಗುಂಡಬಾಳ ನದಿ ಪ್ರವಾಹದಿಂದ ಉಂಟಾದ ನೆರೆ ಸಂತ್ರಸ್ತರಿಗೆ ಬಿಡಿಗಾಸು ಸಿಗದಾಗಿದೆ. ಇವರೆಲ್ಲರಿಗೂ ಕೇಂದ್ರ , ರಾಜ್ಯದ ಬಿ.ಜೆ.ಪಿ ಸರಕಾರ ತಕ್ಷಣ ಪರಿಹಾರ ಘೋಷಿಸಬೇಕಿದೆ.
ಧರಣಿ ಸತ್ಯಾಗ್ರಹದಲ್ಲಿ ತಾಲೂಕ ಪಂಚಾಯತ ಅಧ್ಯಕ್ಷ ಉಲ್ಲಾಸ ನಾಯ್ಕ, ಯೋಗೇಶ ರಾಯ್ಕರ್, ಬಾಲಚಂದ್ರ ನಾಯ್ಕ, ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಎಮ್.ಎನ್. ಸುಬ್ರಹ್ಮಣ್ಯ, ಜಿಜಿ.ಶಂಕರ್ ಇಂಟಕ್ ಅಧ್ಯಕ್ಷ ಆಗ್ನೇಲ್ ಡಯಾಸ್, ಅನಂತ ನಾಯ್ಕ, ಹೆಗ್ಗಾರ, ವಾಮನ ನಾಯ್ಕ, ಲೋಕೇಶ್ ನಾಯ್ಕ, ಸುಬ್ರಾಯ ನಾಯ್ಕ, ಬಳ್ಕೂರ, ಚಂದ್ರಕಾಂತ ಕೋಚರೇಕರ್, ಕೃಷ್ಣ ಗೌಡ, ಮಾವಿನಕುರ್ವಾ, ಅಲೆಕ್ಸ್ ಪೌಲ್, ಆಲ್ಲು ಫರ್ನಾಂಡಿಸ್ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.

Honnavar Congress Dharani Satyagraha
Honnavar Congress Dharani Satyagraha
Honnavar Congress Dharani Satyagraha

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಕೇಂದ್ರ ಸರ್ಕಾರದ ಧೋರಣೆ, ಗೋಷಣೆ ಕೂಗಿ ಆಕ್ರೋಶ, ತಹಶೀಲ್ದಾರ ವಿವೇಕ್, ರಾಜ್ಯ, ವಿರುದ್ದ, ಹಣಕಾಸಿನ ಪರಿಹಾರ, ಹೊನ್ನಾವರ ಕಾಂಗ್ರೇಸ್ ಘಟಕದಿಂದ ಪ್ರತಿಭಟನೆ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...