• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಳಿಯಾಳದ ಹವಗಿಯ ಡಿಗ್ರಿ ಕಾಲೇಜಿನಲ್ಲಿ ಯಶಸ್ವಿಯಾದ ಪತ್ರಕರ್ತರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ.

October 13, 2019 by Yogaraj SK Leave a Comment

Haliyal Havagi digri collage - press and students samvada

ಹಳಿಯಾಳ:- ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾಗಿದೆ. ಓದು ಮತ್ತು ಅಧ್ಯಯನಕ್ಕೆ ವಯಸ್ಸಿನ ಮೀತಿ ಇರದ ಕಾರಣ ಪ್ರತಿಯೊಬ್ಬರು ಅಧ್ಯಯನ ನಿರತರಾಗಿರಬೇಕು. ಇನ್ನೋಬ್ಬರ ಅನುಭವಗಳನ್ನು ಓದಿ ಅನುಭಾವಿಗಳಾಗಬೇಕೆಂದು ಕರ್ನಾಟಕ ರಾಜ್ಯ ಕಾರ್ಯನೀರತ ಪತ್ರಕರ್ತರ ಸಂಘದ ಹಿರಿಯ ಸದಸ್ಯೆ ಹಾಗೂ ಹಳಿಯಾಳ ಸಂಘದ ಮಾಜಿ ಅಧ್ಯಕ್ಷೆ ಸುಮಂಗಲಾ ಅಂಗಡಿ ಕರೆ ನೀಡಿದರು.

 Haliyal Havagi digri collage - press and students samvada


ಪಟ್ಟಣದ ಅಂಚಿನ ಹವಗಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆದ “ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪತ್ರಿಕಾ ಮಾಧ್ಯಮದ ಪಾತ್ರ” ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಚರ್ಚೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉಧ್ಘಾಟಿಸಿ ಮಾತನಾಡಿದರು.
ಸರ್ಕಾರದ ಏಳು-ಬಿಳುಗಳಲ್ಲೂ ಮಹತ್ವದ ಪಾತ್ರ ವಹಿಸುವ ಸಂವಿಧಾನದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗಕ್ಕೆ ತನ್ನದೇ ಆದ ಮಹತ್ವವಿದೆ. ದೃಶ್ಯ ಮಾಧ್ಯಮಕ್ಕಿಂತ ಮುದ್ರಣ ಮಾಧ್ಯಮ ಸಾರ್ವಜನೀಕ ಜನಜೀವನದಲ್ಲಿ ಸಾಕಷ್ಟು ಪಾತ್ರ ವಹಿಸುತ್ತದೆ. ಪ್ರಮುಖವಾಗಿ ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳಲ್ಲಿ ಹೊಸದನ್ನು ಕಲಿಯುವ ಹುಮ್ಮಸ್ಸು ಇರಬೇಕು ಜೀವನದಲ್ಲಿ ಹಿಂದೆ ಗುರು ಮುಂದೆ ಗುರಿಯನ್ನು ಇಟ್ಟುಕೊಂಡು ಪ್ರಯತ್ನಶೀಲರಾಗಿ ಕಠಿಣ ಶ್ರಮಪಟ್ಟರೇ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವೆಂದರು.
ಹಳಿಯಾಳ ಕಾರ್ಯನೀರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಯೋಗರಾಜ ಎಸ್.ಕೆ. ಮಾತನಾಡಿ ಇಂದು ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದರು ಸಹಿತ ದಶಕಗಳಿಂದ ಗ್ರಾಮಾಂತರ ಭಾಗದಿಂದ ಹಿಡಿದು ದೇಶ ವಿದೇಶಗಳ ಸುದ್ದಿಯನ್ನು, ಅಂಕಣಗಳನ್ನು ಹಾಗೂ ವಿವಿಧ ಕ್ಷೇತ್ರಗಳ ಮಾಹಿತಿಗಳನ್ನು ಹೊತ್ತು ಪತ್ರಿಕೆಗಳು ಬೆಲೆ ಏರಿಕೆ ಮಾಡದೆ ಕೇವಲ 3 ರಿಂದ 5 ರೂ. ವೆಚ್ಚದಲ್ಲಿ ಸಾರ್ವಜನೀಕರ ಮನೆ ಬಾಗಿಲಿಗೆ ತಲುಪಿಸುತ್ತಿದ್ದರು ಸಹಿತ ಜನರು ಪತ್ರಿಕೆಗಳನ್ನು ಖರೀದಿಸಿ ಓದಲು ಆಸಕ್ತಿ ತೊರದೆ ಇರುವುದು ಬೇಸರದ ಸಂಗತಿ ಎಂದರು.

 Haliyal Havagi digri collage - press and students samvada


ಇನ್ನೂ ರಾಜ್ಯದಲ್ಲಿರುವ ನೂರಾರು ಪತ್ರಿಕೆಗಳಲ್ಲಿ ಎಸ್.ಎಸ್.ಎಲ್.ಸಿ ಯಿಂದ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳಿಗೆ ಮಾದರಿ ಪ್ರಶ್ನೇ ಪತ್ರಿಕೆಗಳು ಹಾಗೂ ಆಯ್ದ ಪ್ರಮುಖ ವಿಷಯಗಳ ಕುರಿತು ಪ್ರತಿದಿನ ಪ್ರಕಟಿಸಲಾಗುತ್ತದೆ ಇವುಗಳನ್ನು ಸಂಗ್ರಹಿಸಿದರೇ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಗೆ ಸಹಾಯವಾಗುತ್ತದೆ ಎಂದು ಸಲಹೆ ನೀಡಿದ ಯೋಗರಾಜ ಎಲ್ಲ ಕ್ಷೇತ್ರಗಳ ಕುರಿತು ಮಾಹಿತಿ ನೀಡುವ ಪತ್ರಿಕೆಗಳ ಸದುಪಯೋಗ ಪಡೆಯಿರಿ ಹಾಗೂ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳದಂತೆ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

IMG 20190926 WA0133


ವಿಜಯ ಸಂದೇಶ ವಾರಪತ್ರಿಕೆಯ ಗೌರವ ಸಂಪಾದಕರಾದ ಚಂದ್ರಕಾಂತ ಅಂಗಡಿ ಹಾಗೂ ವರದಿಗಾರ ಕೃಷ್ಣಾ ಕಟ್ಟಿ ಅವರು ಮಾತನಾಡಿ ಜೀವನದಲ್ಲಿ ಪತ್ರಿಕೆಗಳ ಮಹತ್ವ ಹಾಗೂ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಗಳನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಚಂದ್ರಶೇಖರ ಲಮಾಣಿ ವಿದ್ಯಾರ್ಥಿಗಳು ಪತ್ರಿಕೆಗಳಲ್ಲಿನ ಪ್ರಮುಖ ವಿಷಯಗಳನ್ನು ಸಂಗ್ರಹ ಮಾಡಿ ಕಾಲಕಾಲಕ್ಕೆ ಅವುಗಳನ್ನು ಮೆಲಕು ಹಾಕಿದರೇ ಸ್ಪರ್ದಾತ್ಮಕ ಪರೀಕ್ಷೆಗಳಲ್ಲಿ ಸಾಕಷ್ಟು ಸಹಾಯವಾಗುತ್ತದೆ ಎಂದರು.

IMG 20190926 WA0134


ಸಂವಾದದಲ್ಲಿ ವಿದ್ಯಾರ್ಥಿಗಳು ಪತ್ರಿಕೆ ಹಾಗೂ ದೃಶ್ಯ ಮಾಧ್ಯಮದಲ್ಲಿ ಸೆಲೆಬ್ರೆಟಿಗಳ ಕುರಿತು ಹೆಚ್ಚು ಸುದ್ದಿ ಪ್ರಕಟವಾಗುತ್ತವೆ, ಕೆಲವರನ್ನು ಮಾತ್ರ ವೈಭವಿಕರಿಸುವ ಕೆಲಸವಾಗುತ್ತದೆ ಸೇರಿದಂತೆ ಅನೇಕ ಪ್ರಶ್ನೇಗಳನ್ನು ಕೇಳಿದರು ಇದಕ್ಕೆ ಪತ್ರಕರ್ತರು ಸಮಂಜಸ ಉತ್ತರಗಳನ್ನು ನೀಡುವ ಮೂಲಕ ಸಂವಾದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾರ್ಯಕ್ರಮದಲ್ಲಿ ಪತ್ರಕರ್ತರನ್ನು ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯ ಮೇಲೆ ಕಾಲೇಜಿನ ಪ್ರೊ.ಡಾ.ಮಾಲತಿ ಸಿ ಹಿರೇಮಠ, ಪತ್ರಕರ್ತರಾದ ಮಧುರಾ ಬಡಿಗೇರ, ನಿಲೇಶ ಮಹಾಜನ, ಮಾರುತಿ ಖಾನಾಪುರ ಇದ್ದರು.

 Haliyal Havagi digri collage - press and students samvada

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: ಕರ್ನಾಟಕ ರಾಜ್ಯ ಕಾರ್ಯನೀರತ, ಕಾಲೇಜಿನಲ್ಲಿ ಯಶಸ್ವಿ, ಪತ್ರಕರ್ತರ ಸಂಘ, ಪತ್ರಕರ್ತರೊಂದಿಗೆ, ಪತ್ರಿಕಾ ಮಾಧ್ಯಮ, ವಿದ್ಯಾರ್ಥಿ ಜೀವನ ಅತ್ಯಮೂಲ್ಯ, ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ, ಹಳಿಯಾಳದ ಹವಗಿಯ ಡಿಗ್ರಿ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...