
ಹೊನ್ನಾವರ: ತಾಲೂಕಿನ ಹಸಿಮನೆ ಸರ್ಕಾರಿ ಶಾಲೆಯ ದುಸ್ಥಿತಿಯ ಬಗ್ಗೆ ವಿಸ್ತ್ರೀತ ವರದಿ ಪ್ರಕಟಿಸಿದ ಬೆನ್ನಲ್ಲೆ ತಾಲೂಕ ದಂಡಾದಿಕಾರಿ, ಕಾರ್ಯನಿರ್ವಾಹಣಾಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಪಂಚಾಯತ ಅಭಿವೃದ್ದಿ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಶಾಲೆಯ ಸ್ಥಿತಿಗತಿಯ ಬಗ್ಗೆ ಗಮನಹರಿಸಿದರು. ವಿದ್ಯಾರ್ಥಿಗಳ ಹಿತದೃಷ್ಟ್ರಿಯಿಂದ ಪಾಠ ಮಾಡುವ ಸ್ಥಳ ಬದಲಾಯಿಸುವಂತೆ ಸೂಚಿಸಿದರು. ಹಾಗೇಯೇ ಸ್ಥಳಿಯ ಗ್ರಾಮ ಪಂಚಾಯತಿಯವರಿಗೆ ತಾತ್ಕಲಿಕ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಭಜಂತ್ರಿ
ಪತ್ರಿಕೆಯ ವರದಿ ಬಳಿಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತರಗತಿಯನ್ನು ಇನ್ನೊಂದು ಕೊಠಡಿಗೆ ವರ್ಗಾಯಿಸಲಾಗಿದೆ. ತಾತ್ಕಲಿಕವಾಗಿ ಕಬ್ಬಿಣದ ಸಲಾಖೆಯನ್ನು ಮುರಿದ ಜಂತಿ ಭಾಗಕ್ಕೆ ಅಳವಡಿಸಲು ಸೂಚಿಸಿದ್ದೇವೆ. ಮುಂದಿನ ದಿನದಲ್ಲಿ ಶಾಶ್ವತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
…………
ತಾಲೂಕ ದಂಡಾಧಿಕಾರಿ ವಿವೇಕ ಶೇಣ್ವೆ
ತಾಲೂಕ ಆಡಳಿತ ಈಗಾಗಲೇ ಇದನ್ನು ಗಂಭೀರವಾಗಿ ಪರಿಗಣಿಸಿದ್ದು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೇ ಸ್ಥಳಿಯ ಆಡಳಿತಕ್ಕೆ ಸೂಚಿಸಲಾಗಿದೆ. ಶಿಕ್ಷಣಾಧಿಕಾರಿಗಳಿಗೆ ಈಗಾಗಲೇ ಕಟ್ಟಡದ ದುರಸ್ತಿ ಅಗತ್ಯ ದಾಖಲೆ ಸಲ್ಲಿಸಲು ಸೂಚಿಸಿದ್ದೇನೆ. ಚುನಾವಣೆ ಬಳಿಕ ಶಾಶಕರೊಂದಿಗೆ ಈ ಬಗ್ಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಮಾಧ್ಯಮಗಳ ವರದಿ ಬಳಿಕ ಸ್ಥಳಕ್ಕೇ ಭೇಟಿ ನೀಡಿ ಸ್ಪಂದಿಸಿದ ಅಧಿಕಾರಿಗಳಾದ ತಾಲೂಕ ದಂಡಾಧಿಕಾರಿ ವಿವೇಕ ಶೆಣ್ವೆ, ತಾಲೂಕ ಕಾರ್ಯನಿರ್ವಹಣಾಧಿಕಾರಿ ಸುರೇಶ ನಾಯ್ಕ, ಕ್ಷೇತ್ರಶಿಕ್ಷಣಾಧಿಕಾರಿ ಅಶೋಕ ಭಜಂತ್ರಿ, ಸ್ತಳೀಯ ಪಿಡಿಓ ಭೇಟಿಗೆ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರು ಸಂತಸ ವ್ಯಕ್ತಪಡಿಸಿದ್ದು ಮುಂದಿನ ದಿನದಲ್ಲಿ ಈ ಬಗ್ಗೆ ಗಮನಹರಿಸಿ ಸಮಸ್ಯೆ ಬಗೆಹರಿಸಲು ಮುಂದಾಗಲಿ ಎಂದರು.
Leave a Comment