ಕಾರವಾರ ಫೆ.8 ರಂದು ಕದಂಬೋತ್ಸವ 2020′ ರ ಅಂಗವಾಗಿ ಮ್ಯಾರಾಥಾನ್ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಸೂಚಿಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರವಾಸಿ ಸ್ಥಳಗಳ ಅಭಿವೃದ್ಧಿ ಮತ್ತು ಸಂರಕ್ಷಣಾ ಸಮಿತಿಯ ಕಾರ್ಯಕಾರಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ವಿವಿಧ ಪ್ರವಾಸಿ ಸ್ಥಳಗಳಿಗೆ ಸ್ಥಳೀಯ ಹಾಗೂ ದೇಶ ವಿದೇಶಗಳ ಪ್ರವಾಸಿಗರನ್ನು ಸೆಳೆಯಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ. ಫೆಬ್ರುವರಿ ಮೊದಲ ವಾರದಲ್ಲಿ ಕದಂಬೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರವಾಸಿಗರನ್ನು ಜಿಲ್ಲೆ ಮತ್ತು ಬನವಾಸಿಯತ್ತ ಸೆಳೆಯಬಹುದಾಗಿದೆ ಎಂದರು.
ಗೋಕರ್ಣದ ಬೀಚ್ಗಳಲ್ಲಿ ಗಾಳಿಪಟ ಉತ್ಸವ ಮತ್ತು ಭಟ್ಕಳದ ಮುರ್ಡೇಶ್ವರದಲ್ಲಿ ಸ್ಕೂಬಾ ಡೈವಿಂಗ್, ಕಾರವಾರದ ಕಾಳಿ ರಿವರ್ ಗಾರ್ಡನ್ನಲ್ಲಿ ಕಯಾಕಿಂಗ್ ಸ್ಪರ್ಧೆ, ಅರಣ್ಯ ಇಲಾಖೆ ಸಹಯೋಗದಲ್ಲಿ ಹಾರ್ನ್ಬಿಲ್ ಫೆಸ್ಟಿವಲ್ಗಳನ್ನು ಕೂಡ ವ್ಯವಸ್ಥಿತವಾಗಿ ಹಮ್ಮಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್ ರೋಶನ್, ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್, ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಅಧಿಕಾರಿ ಎಸ್.ಪುರುಷೋತ್ತಮ ಇದ್ದರು.
Leave a Comment