• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅತಿಕ್ರಮನದಾರರಿಂದ ಹೊನ್ನಾವರದಲ್ಲಿ ಜಿಲ್ಲಾದಿಕಾರಿಗಳಿಗೆ ಪ್ರತಿಯೊರ್ವರಿಂದ ಮನವಿ ಸಲ್ಲಿಕೆ

February 7, 2020 by Vishwanath Shetty Leave a Comment

ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಸಲ್ಲಿಸಿದ ಅರ್ಜಿಯನ್ನು ಕಾನೂನಿನಲ್ಲಿ ಉಲ್ಲೇಖಿಸಿದಂತೆ ಕ್ಲೇಮಿನ ಪರಿಗಣನೆಗಾಗಿ ನಿರ್ದಿಷ್ಟ ದಾಖಲಾತಿ ಸಾಕ್ಷ್ಯಗಳನ್ನು ಒತ್ತಾಯಿಸದೇ ಮಂಜೂರಿ ಪ್ರಕ್ರಿಯೆ ಶೀಘ್ರದಲ್ಲಿ ಜರುಗಿಸುವ ಕುರಿತು ಗುರುವಾರ ಸುಮಾರು ಎರಡು ಸಾವಿರಕ್ಕೂ ಅಧಿಕ ಅತಿಕ್ರಮಣದಾರರು ಶರಾವತಿ ವೃತ್ತದಿಂದ ತಹಶೀಲ್ದಾರ ಕಛೇರಿಯವರೆಗೆ ಬೃಹತ್ ಮೆರವಣಿಗೆ ಮೂಲಕ ತೆರಳಿ ತಹಶೀಲ್ದಾರ ಮೂಲಕ ಸರ್ಕಾರಕ್ಕೆ ಆಗ್ರಹಿಸಿದರು. ಜಿಲ್ಲಾ ಮತ್ತು ತಾಲೂಕು ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ನಡೆದ ಪ್ರತಿಭಟನಾ ಮೆರವಣೆಗೆ ಶರಾವತಿ ವೃತ್ತದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾಗಿ ತಹಶೀಲ್ದಾರÀ ಕಚೇರಿಗೆ ಬಂದು ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.

watermarked IMG 20200206 112518

ಸರಕಾರದ ಜನವಿರೋಧಿ ನೀತಿಯಾಗಿರುವ ಸದ್ರಿ ಆದೇಶವನ್ನು ರದ್ದುಪಡಿಸಿ ಅಭಯಾರಣ್ಯದ ವ್ಯಾಪ್ತಿಯಲ್ಲಿ ಬರುವ ಅರಣ್ಯ ಪ್ರದೇಶವನ್ನು ರದ್ದುಗೊಳಿಸಿ ಅರಣ್ಯವಾಸಿ ಮತ್ತು ಜನ ಸಾಮಾನ್ಯರಿಗೆ ಮೂಲಭೂತ ಹಕ್ಕಿನಿಂದ ವಂಚಿತವಾಗದ ರೀತಿಯಲ್ಲಿ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಮನವಿ ಮೂಲಕ ಕೋರಿದ್ದಾರೆ. ಉಪ ಮತ್ತು ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿಗಳು ನಮ್ಮ ಅರ್ಜಿಯನ್ನು ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಮಂಜೂರಿಗೆ ಸಂಬಂಧಿಸಿದ ನಿರ್ದಿಷ್ಟ ದಾಖಲಾತಿ ಸಾಕ್ಷ್ಯಕ್ಕೆ ಆಗ್ರಹಿಸುತ್ತಿರುವುದು ವಿಷಾದಕರ. ಇದು ಕಾನೂನಿಗೆ ವ್ಯತಿರಿಕ್ತವಾಗಿದೆ. ನಿರ್ದಿಷ್ಟ ದಾಖಲಾತಿ ಸಾಕ್ಷ್ಯದ ಬಗ್ಗೆ ಕಾನೂನಿನಲ್ಲಿ ಉಲ್ಲೇಖವಿಲ್ಲ ಎಂದು ವ್ಯಾಖ್ಯಾನಿಸುತ್ತಾ, ಅರಣ್ಯ ಹಕ್ಕು ಕಾಯಿದೆ ಕೇಂದ್ರ ಬುಡಕಟ್ಟು ಮಂತ್ರಾಲಯದ ನಿರ್ದೇಶನದಂತೆ ನಿರ್ದಿಷ್ಟ ದಾಖಲೆಗಳಿಗೆ ಒತ್ತಾಯಿಸದೇ, ಕಾನೂನು ಅಡಿಯಲ್ಲಿ ಉಲ್ಲೇಖಿಸಿರುವಂತೆ ಮೌಖಿಕ ಹಾಗೂ ಪ್ರತ್ಯಕ್ಷ್ಯ ಸಾಗುವಳಿ ಸಾಕ್ಷ್ಯ ದ ಮೇಲೆ ಮಂಜೂರಿ ವ ಸಾಗುವಳಿ ಹಕ್ಕನ್ನು ನೀಡಬೇಕು. ಅಲ್ಲದೇ, ನಿರ್ದಿಷ್ಟ ದಾಖಲಾತಿಯ ಸಾಕ್ಷ್ಯವನ್ನು ಮಂಜೂರಿ ಪ್ರಕ್ರಿಯೆಗೆ ಮಾನದಂಡ ಮಾಡಿರುವುದು ಕಾನೂನು ಬಾಹೀರ ಎಂದು ಗುಜರಾತ ಉಚ್ಛ ನ್ಯಾಯಾಲಯ ಆದೇಶವನ್ನು ನೀಡಿರುವುದನ್ನು ಉಲ್ಲೇಖಿಸಿ ತಾಲೂಕಿನಾದ್ಯಂತ ಬಂದಿರುವ ಸಹಸ್ರಾರು ಅತಿಕ್ರಮಣದಾರರು ಜಿಲ್ಲಾಧಿಕಾರಿಗಳಿಗೆ ವೈಯಕ್ತಿಕ ಮನವಿ ನೀಡಿರುವುದು ಅರಣ್ಯ ಅತಿಕ್ರಮಣದಾರರ ಇಂದಿನ ಜನಾಂದೋಲನದ ವಿಶೇಷವಾಗಿತ್ತು.

watermarked IMG 20200206 110437


ಈ ಸಂಧರ್ಭದಲ್ಲಿ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಜಿಲ್ಲಾಧ್ಯಕ್ಷರಾದ ರವೀಂದ್ರ ನಾಯ್ಕ ಮಾತನಾಡಿ ಉತ್ತರ ಕನ್ನಡ ಜಿಲ್ಲೆಯ ಸುಮಾರು 20,000 ಹೆಕ್ಟೆರ್ ಪ್ರದೇ±ವನ್ನೊಳಗೊಂಡು ಭಟ್ಕಳ, ಹೊನ್ನಾವರ, ಕುಮಟಾದ ವಿವಿದ ಗ್ರಾಮಗಳನ್ನ ಸೇರ್ಪಡೆಗೊಂಡು ಹೊಸ ಯೋಜನೆಯನ್ನು ಜಾರಿಗೆ ತರುತ್ತಿದ್ದಾರೆ. ಈ ಮೂಲಕ ನಾವು ಸರ್ಕಾರಕ್ಕೆ ತಿಳಿಸುವುದೇನೆಂದರೆ ಇದು ಜನ ವೀರೋಧಿ ನೀತಿಯಾಗಿದ್ದು, ನಾವು ತೀವೃವಾದ ವಿರೋಧವನ್ನು ವ್ಯಕ್ತಪಡಿಸುತ್ತೇವೆ. ಅರಣ್ಯ ಹಕ್ಕು ಕಾಯಿದೆ ಜಾರಿಗೆ ಬಂದು ಇಂದಿಗೆ 12 ವರ್ಷಗಳಾಗಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 85,557 ಅರ್ಜಿಗಳು ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಮಂಜೂರಿಯನ್ನು ಕೊಟ್ಟಿದ್ದವು. ಆದರೆ ನೀಡಿರುವ ಈ ಎಲ್ಲಾ ಅರ್ಜಿಗಳಲ್ಲಿ ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ 74,220 ಅರ್ಜಿಗಳು ತಿರಸ್ಕಾರವಾಗಿದೆ. ಈ ಎಲ್ಲಾ ಅರ್ಜಿಗಳು ತಿರಸ್ಕಾರ ವಾಗಲು ಕಾರಣ ಮೂರು ತಲೆಮಾರಿನ ದಾಖಲೆಗಳನ್ನು ಕೇಳಿರುವುದು. ಆದರೆ ಯಾವುದೇ ಕಾನೂನಿನಲ್ಲಿ ನಿರ್ಧಿಷ್ಟ ದಾಖಲೆಗಳು ಸಾಕ್ಷಿಯಾಗಬೇಕೆಂದು ಎಲ್ಲಿಯೂ ಇಲ್ಲಾ ಇದನ್ನು ಕೂಡಲೇ ವಾಪಸ್ಸು ಪಡೆಯಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವೇದಿಕೆ ತಾಲೂಕಾಧ್ಯಕ್ಷ ಚಂದ್ರಕಾಂತ ಕೋಚಡೆಕರ್, ವಾಮನ ನಾಯ್ಕ, ಅನಂತ ನಾಯ್ಕ ಹೆಗ್ಗಾರ್, ವಿನಾಯಕ ನಾಯ್ಕ ಮೂಡ್ಕಣಿ, ಸುರೇಶ ಮೇಸ್ತ, ಆರ್.ಎಚ್.ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

watermarked IMG 20200206 112522
IMG 20191213 WA0004

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಅತಿಕ್ರಮನದಾರರಿಂದ, ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ, ತಹಶೀಲ್ದಾರ ಕಛೇರಿಯವರೆಗೆ ಬೃಹತ್ ಮೆರವಣಿಗೆ, ಪ್ರತಿಯೊರ್ವರಿಂದ ಮನವಿ ಸಲ್ಲಿಕೆ, ಸಾಗುವಳಿ ಹಕ್ಕನ್ನು, ಹೊನ್ನಾವರದಲ್ಲಿ ಜಿಲ್ಲಾದಿಕಾರಿಗಳಿಗೆ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...