• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಲವಳ್ಳಿ ಶಾಲಾ ಶತಮಾನೊತ್ಸವ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸುನೀಲ ನಾಯ್ಕ ಸಾಧಕರಿಗೆ ಸಂದಿತು ಸನ್ಮಾನ

February 9, 2020 by Vishwanath Shetty Leave a Comment

watermarked IMG 20200208 122748

ಕನ್ನಡ ಉಳಿಸಿ ಎನ್ನುವ ಕೂಗು ನಗರದ ಎಲ್ಲಡೆ ಕೇಳಿ ಬರುತ್ತಿದ್ದರೆ ಅದನ್ನು ಅನುಷ್ಠಾನ ಮಾಡುವ ಕಾರ್ಯ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಂದ ನಡೆಯುತ್ತಿದೆ. ಸರ್ಕಾರಿ ಶಾಲೆಗಳು ಶಿಕ್ಷಣ ಜೊತೆ ಉತ್ತಮ ಸಂಸ್ಕಾರ ನೀಡುತ್ತಿದೆ ಎಂದು ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಶತಮಾನೊತ್ಸವ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟರು.
ಹೊನ್ನಾವರ ತಾಲೂಕಿನ ಜಲವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೊತ್ಸವ ಸಂಭ್ರಮ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಬಳಿಕ ಮಾತನಾಡಿ ಶಿಕ್ಷಣ ಒಂದರಿಂದಲೇ ಪರಿಪೂರ್ಣತೆ ಸಾಧ್ಯವಿಲ್ಲ. ಶಿಕ್ಷಣದ ಜೊತೆ ಕಲೆ, ಸಾಂಸ್ಕøತಿಕ, ಕ್ರೀಡಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಕಾರ್ಯ ಶಿಕ್ಷಕರಿಂದ ನಡೆಯಬೇಕಿದೆ. ಮಕ್ಕಳಲ್ಲಿ ಸಂಸ್ಕಾರ ಮೂಡಲು ಶಿಕ್ಷಕರ ಜೊತೆ ಪಾಲಕರ ಪಾತ್ರವು ಕೂಡಿದೆ. ಆದರೆ ಇಂದು ಖಾಸಗಿ ಶಾಲೆಯ ವ್ಯವಸ್ಥೆಗೆ ಮರಳಾಗಿ ಸರ್ಕಾರಿ ಶಾಲೆಯ ಬಗ್ಗೆ ಕೀಳರಿಮೆ ಮೂಡಿಸುವ ಕಾರ್ಯ ನಡೆಯುತ್ತಿದೆ. ಸಾಧನೆ ಮಾಡಿ ಉನ್ನತ ಹುದ್ದೆಯಲ್ಲಿರುವ ಹೆಚ್ಚಿನವರು ಸರ್ಕಾರಿ ಶಾಲೆಯಲ್ಲಿ ಅಧ್ಯಯನ ನಡೆಸಿ ಸಾಧನೆ ಮಾಡಿದವರೆ ಆಗಿದ್ದಾರೆ. ಸರ್ಕಾರಗಳು ಶಿಕ್ಷಣಕ್ಕಾಗಿ ಹಲವು ಸೌಲಭ್ಯವನ್ನು ನೀಡುತ್ತಿದೆ. ಅದರ ಸದುಪಯೋಗ ಪಡಿಸಿಕೊಂಡು ಸಾಧನೆ ಮಾಡುವ ಮೂಲಕ ಭವಿಷ್ಯದ ಉತ್ತಮ ಪ್ರಜೆಯಾಗಬೇಕಿದೆ. ಒಂದು ಗ್ರಾಮ ಮಾದರಿಯಾಗಲು ಅಲ್ಲಿಯ ಶಾಲೆ ಹಾಗೂ ದೇವಾಲಯ ಉತ್ತಮವಾಗಿದ್ದರೆ ಮಾತ್ರ ಸಾಧ್ಯ ಎಂದರು.

watermarked IMG 20200208 123203


ಉಪನ್ಯಾಸಕರಾಗಿ ಆಗಮಿಸಿದ ಎಸ್.ಡಿ.ಎಂ. ಸಂಸ್ಥೆಯ ಉಪನ್ಯಾಸಕರಾದ ಡಾ. ಎಂ.ಆರ್.ನಾಯ್ಕ ಮಾತನಾಡಿ ಇಂದು ಸಂಸ್ಕಾರಗಳು ಮಾಯವಾಗುತ್ತಿದೆ. ಶಿಕ್ಷಣ ಸಂಸ್ಥೆಗಳು ನಿಜವಾದ ದೇವಾಲಯವಿದ್ದಂತೆ ಇಲ್ಲಿ ಶಿಕ್ಷಕರು ಪೂಜಾರಿ ಇದ್ದ ಹಾಗೇ, ಆಗಮಿಸುವ ಭಕ್ತರೆ ವಿದ್ಯಾರ್ಥಿಗಳು. ಆದರೆ ಇಂದು ದೇಶದೊಳಗೆ ಹಲವು ಅಹಿತಕರ ಘಟನೆಗಳಾದ ಅತ್ಯಾಚಾರ, ದೇಶದ್ರೋಹಿ ಘಟನೆಗೆ ಸಂಭವಿಸುವುದು ಗ್ರಾಮೀಣ ಭಾಗದಲ್ಲಿ ಕಡಿಮೆ ಈ ಸಂಖ್ಯೆ ಪಟ್ಟಣ ಭಾಗದಲ್ಲಿ ಹೆಚ್ಚಾಗಿದೆ ಎಂದರೆ ಗ್ರಾಮೀಣ ಶಿಕ್ಷಣ ಪದ್ದತಿ ಸರಿಯಾಗಿದೆ ಎಂದರ್ಥ. ಮನುಷ್ಯ ಬದುಕಲು ಬೇಕಾಗಿರುವುದು ಅಷ್ಟಸೌಲಭ್ಯಗಳಲ್ಲ ಬದಲಿಗೆ ಮಾನವೀಯ ನೈತಿಕ ಶಿಕ್ಷಣವಾಗಿದೆ. ನಮ್ಮ ದೇಶದಲ್ಲಿ 50 ಸಾವಿರಕ್ಕೂ ಅಧಿಕ ಅನಾಥಶ್ರಮಗಳಿವೆ ಇದು ಕೂಡಾ ಗ್ರಾಮಿಣ ಭಾಗದಲ್ಲಿ ಕಾಣುವುದಿಲ್ಲ. ಆದರೆ ಪಟ್ಟಣದ ಶಿಕ್ಷಣ ವ್ಯವಸ್ಥೆಗೆ ಮಾರು ಹೋಗದೇ ಗ್ರಾಮೀಣ ಭಾಗದ ನೈತಿಕತೆಯನ್ನು ಅಳವಡಿಸಿಕೊಂಡಾಗ ಮಾತ್ರ ಶಿಕ್ಷಣ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಿದೆ ಎಂದರು.
ವೇದಿಕೆಯಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ ಹಾಗೂ ಸಲ್ಲಿಸುತ್ತಿರುವ ಶಿಕ್ಷಚಕರನ್ನು, ಸಾಧನೆ ಮಡಿದ ಸಾಧಕರನ್ನು, ಸ್ಥಳದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. “ಜ್ಞಾನ ಸಿಂಚನ’ ಹಸ್ತಪತ್ರಿಕೆಯನ್ನು ಮಾಜಿ ಶಾಸಕ ಜೆ.ಡಿ.ನಾಯ್ಕ ಬಿಡುಗೊಳಿಸಲಾಯಿತು. ಅಂಕುಶ ಹಸ್ತಪತ್ರಿಕೆಯನ್ನು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಲ್.ನಾಯ್ಕ ಬಿಡುಗಡೆಗೊಳಿಸಿದರು. ವಿವಿಧ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

watermarked IMG 20200208 130533


ಗ್ರಾಮ ಪಂಚಾಯತ ಅಧ್ಯಕ್ಷೆ ಲೀಲಾವತಿ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.
ವೇದಿಕೆಯಲ್ಲಿ ತಾಲೂಕ ಪಂಚಾಯತ ಸದಸ್ಯ ಲೋಕೇಶ ನಾಯ್ಕ, ಕನ್ನಡಪ್ರಬಾ ಪತ್ರಿಕೆಯ ಹಿರಿಯ ಸಂಪಾದಕ ವಾಸುದೇವ ಶೆಟ್ಟಿ, ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಎಸ್.ಎಂ.ಹೆಗಡೆ, ಜಿ.ಎಸ್.ನಾಯ್ಕ, ಎನ್.ಎಸ್.ನಾಯ್ಕ, ಸತೀಶ ನಾಯ್ಕ, ಗ್ರಾಮ ಪಂಚಾಯತ ಸದಸ್ಯರಾದ ರಾಮಚಂದ್ರ ನಾಯ್ಕ, ಅನಂತ ನಾಯ್ಕ, ಸಿಂಧು ನಾಯ್ಕ, ಗ್ರಾಮದ ಪ್ರಮುಖರಾದ ನಾರಾಯಣ ನಾಯ್ಕ, ಪಿ.ಟಿ.ನಾಯ್ಕ, ದೇವರಾಯ ನಾಯ್ಕ, ಕೇಶವ ನಾಯ್ಕ, ಮಹೇಶ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಮನೊರಂಜನಾ ಕಾರ್ಯಕ್ರಮ ನೇರವೇರಿತು.

IMG 20191213 WA0004

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಕಾರ್ಯಕ್ರಮ ಉದ್ಘಾಟಿಸಿದ, ಜಲವಳ್ಳಿ ಶಾಲಾ ಶತಮಾನೊತ್ಸವ, ಶಾಸಕ ಸುನೀಲ ನಾಯ್ಕ, ಸಾಧಕರಿಗೆ ಸಂದಿತು ಸನ್ಮಾನ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...