ಭಟ್ಕಳ :- ಭಟ್ಕಳ ಪುರಸಭೆ ಘನತ್ಯಾಜ್ಯ ಘಟಕದ ವಿರುದ್ಧ ಕಸಲಗದ್ದೆ, ಬೆಳಲಖಂಡ, ಗುಳ್ಮೆ ಗ್ರಾಮದ ನಿವಾಸಿಗರು ಪ್ರತಿಭಟನೆ ಮಾಡಿದರು.
ಪ್ರತಿಭಟನಾ ಸ್ಥಳಕ್ಕೆ ತಾಲೂಕಿನ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪುರಸಭಾ ಅಧಿಕಾರಿಗಳಿಗೆ ಒಂದು ವಾರದ ಗಡುವನ್ನು ನೀಡಿ ಎಲ್ಲಾ ಕಸವನ್ನು ಸಂಗ್ರಹಿಸಿ ಒಂದು ಪಿಟ್( ಕಸ ಶೇಖರಣೆ ಹೊಂಡ)ನ್ನು ನಿರ್ಮಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಯಿತು.
ಒಂದು ವೇಳೆ ನಿರ್ಲಕ್ಷ್ಯ ತೋರಿದಲ್ಲಿ ತಕ್ಕ ಪರಿಣಾಮವನ್ನು ಎದುರಿಸಲು ಸಿದ್ದರಿಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಪುರಸಭೆಯ ಅಧಿಕಾರಿಗಳಿಗೆ ನೀಡಲಾಗಿದೆ.
ಇದು ತಾತ್ಕಾಲಿಕ ನಿರ್ಧಾರವಾಗಿದ್ದು ಆಧುನಿಕ ತಂತ್ರಜ್ಞಾನ ಬಳಸಿ ಮುಂದಿನ ದಿನಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕವನ್ನು ಸರಿಯಾಗಿ ನಿಯಂತ್ರಿಸಲು ಕ್ರಮ ಜರುಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Leave a Comment