ಶಿಥಿಲಾವಸ್ಥೆ ತಲುಪಿದ ಹಿಂದೂ ರುದ್ರಭೂಮಿ ದುರಸ್ಥಿ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ಶಾಸಕ ಸುನೀಲ್ ನಾಯ್ಕ* ಭಟ್ಕಳ: ತಾಲೂಕಿನ ಮುನ್ಸಿಪಾಲ್ ವ್ಯಾಪ್ತಿಯ ಮಣ್ಕುಳಿಯಲ್ಲಿ ಹಿಂದೂ ರುದ್ರ ಭೂಮಿಯು ಶಿಥಿಲಾವಸ್ಥೆ ತಲುಪಿದ್ದು, ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಸುನೀಲ್ ನಾಯ್ಕ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯ ಮೂಲಕ ಮಾತನಾಡಿ ರುದ್ರಭೂಮಿ ದುರಸ್ತಿಗೆ 20 ಲಕ್ಷ ರೂಪಾಯಿ ಅನುದಾನವನ್ನು ನೀಡುವಂತೆ ಕೋರಿದ್ದಾರೆ ಎನ್ನಲಾಗಿದೆ. ಶಾಸಕರ ಕರೆಗೆ ಧನಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು ದುರಸ್ತಿಗೆ ಅನುದಾನವನ್ನು ಬಿಡುಗಡೆ ಮಾಡುವುದಾಗಿ ಭರವಸೆಯನ್ನು ನೀಡಿರುತ್ತಾರೆ ಎಂದು ವರದಿಯಾಗಿದೆ.
Leave a Comment