• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪ್ರವಾಸಿಗರಿಲ್ಲದೇ ಪ್ರವಾಸಿ ಸ್ಥಳಗಳು ಖಾಲಿ ಖಾಲಿ; ಮಲೆನಾಡಲ್ಲಿ ಮಂಗನ ಕಾಯಿಲೆ ಭೀತಿ ಪ್ರವಾಸೋದ್ಯಮದ ಮೇಲೆ ‘ಕೊರೋನಾ’ ಎಫೆಕ್ಟ್!

March 10, 2020 by Devaraj Naik Leave a Comment

murdeshwar

ಕಾರವಾರ: ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೋನಾ ವೈರಸ್ ಭಾರತಕ್ಕೂ ಕಾಲಿಟ್ಟು ಎಲ್ಲರನ್ನು ಕಂಗೆಡಿಸಿದೆ. ರಾಜ್ಯದಲ್ಲೂ ಕೊರೋನಾ ಭೀತಿ ಎದುರಾಗಿದ್ದು, ಸಾರ್ವಜನಿಕರು ಹೊರಗೆ ಅಡ್ಡಾಡುವುದಕ್ಕೂ ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಪ್ರವಾಸೋದ್ಯಮದ ಮೇಲೂ ಕೊರೋನಾ ವೈರಸ್ ಕರಿಛಾಯೆ ಬಿದ್ದಿದ್ದು, ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ.
      ಜಿಲ್ಲೆಯ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಮುರ್ಡೇಶ್ವರ, ಗೋಕರ್ಣದಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗಿದ್ದು, ಪ್ರವಾಸೋದ್ಯಮದ ಮೇಲೆ ‘ಕೊರೋನಾ’ ಪ್ರಭಾವ ಬೀರಿದೆ. ಗೋಕರ್ಣಕ್ಕೆ ವಿದೇಶಿ ಪ್ರವಾಸಿಗರು ಹೆಚ್ಚಾಗಿ ಆಗಮಿಸುತ್ತಾರೆ. ಆದರೆ, ಕಳೆದ ಮೂರ್ನಾಲ್ಕು ದಿನಗಳಿಂದ ಭಾರತಕ್ಕೆ ಕೊರೋನಾ ಕಾಲಿಟ್ಟ ಸುದ್ದಿಗಳು ಹೆಚ್ಚು ಹೆಚ್ಚಾಗಿ ಪ್ರಸಾರ ಆಗುತ್ತಿರುವ ಹಿನ್ನಲೆಯಲ್ಲಿ ಪ್ರವಾಸಿಗರು ಪ್ರವಾಸಿ ತಾಣದತ್ತ ಮುಖ ಮಾಡದೇ ಜಾಗೃತೆ ವಹಿಸಲು ಮುಂದಾಗಿದ್ದಾರೆ.
ಸಾಮಾನ್ಯವಾಗಿ ಮಾರ್ಚ್ ಹಾಗೂ ಏಪ್ರಿಲ್ ಪ್ರವಾಸಿಗರನ್ನು ಅತಿ ಹೆಚ್ಚಾಗಿ ಆಕರ್ಷಿಸುವ ಸಮಯ. ಆದರೆ, ಈ ಬಾರಿ ಕೊರೋನಾ ಭೀತಿಯಿಂದ ಇದೇ ಸಮಯದಲ್ಲಿ ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖವಾದಂತಾಗಿದೆ.

xgokarna3copy 1583737690.jpg.pagespeed.ic .rBjT uyQ7u


ವ್ಯವಹಾರದ ಮೇಲೆ ಹೊಡೆತ
ಕೊರೋನಾ ಭೀತಿಯಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದ್ದು ಪ್ರವಾಸಿ ತಾಣಗಳಲ್ಲಿ ವ್ಯಾಪರ ವ್ಯವಹಾರ ಸಹ ಇಳಿಮುಖವಾಗಿದೆ. ಮಾರ್ಚ್, ಏಪ್ರಿಲ್‍ನಲ್ಲಿ ಹೆಚ್ಚಾಗಿ ಪ್ರವಾಸಿಗರು ಆಗಮಿಸಿ ವೇಳೆ ಸ್ವಲ್ಪ ವ್ಯಾಪಾರ ವ್ಯವಹಾರ ಚನ್ನಾಗಿ ನಡೆದು ಅಂಗಡಿಕಾರರು ಲಾಭ ಗಳಿಸುತ್ತಾರೆ. ಉಳಿದ ದಿನ ಪ್ರವಾಸಿಗರ ಸಂಖ್ಯೆ ಕಡಿಮೆ ಇರೋದರಿಂದ ಲಾಭ ಕಡಿಮೆ ಇರುತ್ತದೆ. ಈ ಭಾರಿ ಪ್ರವಾಸಿಗರ ಸಂಖ್ಯೆ ಹೆಚ್ಚು ಆಗಮಿಸುವ ವೇಳೆಯೇ ಕೊರೋನಾ ಭೀತಿ ಲಾಭವನ್ನ ಗಳಿಸಬೇಕು ಎಂದು ಬಯಸಿದ್ದ ಅಂಗಡಿಕಾರರಿಗೆ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.
ಮಂಗನ ಕಾಯಿಲೆ ಭೀತಿ ಒಂದೆಡೆ ಕೊರೋನಾ ಭೀತಿಯಿಂದ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖ ಕಂಡಿದ್ದರೆ, ಮತ್ತೊಂದೆಡೆ ಮಲೆನಾಡಿನಲ್ಲಿ ಮಂಗನ ಕಾಯಿಲೆ ಭೀತಿ ಎದುರಾಗಿದೆ. ಹೀಗಾಗಿ ಜಿಲ್ಲೆಯ ಕರಾವಳಿ ಪ್ರವಾಸಿ ತಾಣಗಳಲ್ಲಷ್ಟೇ ಅಲ್ಲದೇ, ಮಲೆನಾಡಿಗೂ ಪ್ರವಾಸಿಗರು ಭೇಟಿ ನೀಡಲು ಭಯ ಬೀಳುವಂಥ ಪರಿಸ್ಥಿತಿ ಸದ್ಯ ಉದ್ಭವವಾಗಿದೆ.

MONKEYS


ಪ್ರವಾಸಿಗರ ಮಾಹಿತಿ ಸಂಗ್ರಹ
ಜಿಲ್ಲೆಯ ಮುಂಡಗೋಡ ಹಾಗೂ ಗೋಕರ್ಣವನ್ನು ಕ್ಲಸ್ಟರ್ ಎಂದು ಆರೋಗ್ಯ ಇಲಾಖೆಯಿಂದ ಗುರುತಿಸಲಾಗಿದ್ದು, ಇಲ್ಲಿ ಪ್ರವಾಸಕ್ಕೆ ಬಂದಿರುವ ವಿದೇಶಿ ಪ್ರವಾಸಿಗರ ಮಾಹಿತಿ ಹಾಗೂ ಕೊರೋನಾ ವೈರಸ್ ಲಕ್ಷಣದ ಕುರಿತು ಸಮೀಕ್ಷೆ ನಡೆಸುವ ಸಲುವಾಗಿ ಎಲ್ಲಾ ರೆಸಾರ್ಟ್ ಮತ್ತು ಲಾಡ್ಜ್ ಗಳಿಗೆ ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ.      ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆಯಿಂದ ಗೋಕರ್ಣದಲ್ಲಿ 37 ತಂಡಗಳನ್ನು ರಚಿಸಲಾಗಿದ್ದು, ಮುಂಡಗೋಡದಲ್ಲಿ 13 ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ಗೋಕರ್ಣ, ಮುಂಡಗೋಡ ಸುತ್ತಮುತ್ತಲಿನಲ್ಲಿ ವಾಸ ಹೂಡಿರುವ ವಿದೇಶಿ ಪ್ರವಾಸಿಗರ ಮಾಹಿತಿಗಳನ್ನು ಸಂಗ್ರಹಿಸಿದರು. ವಿವಿಧ ಪ್ರದೇಶದಲ್ಲಿ ತಂಗಿರುವ ಪ್ರವಾಸಿಗರನ್ನು ಭೇಟಿಯಾಗಿ, ಮಾಹಿತಿಗಳನ್ನು ಕಲೆ ಹಾಕಿದೆ.
ಭಯವಿಲ್ಲದೇ ಜಿಲ್ಲೆಗೆ ಬನ್ನಿ
ಉತ್ತರ ಕನ್ನಡ ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಯಾವುದೇ ಭಯ ಬೇಡ. ಜಿಲ್ಲಾಡಳಿತ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ನಿರ್ಭೀತರಾಗಿ ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಬಹುದು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ರೋಶನ್ ತಿಳಿಸಿದ್ದಾರೆ.

watermarked IMG 20200307 WA0003


watermarked IMG 20200307 WA0004

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Karwar News Tagged With: ಅಂಗಡಿಕಾರರಿಗೆ ಸಂಕಷ್ಟ, ಕೊರೋನಾ ವೈರಸ್, ಕೊರೋನಾ’ ಎಫೆಕ್ಟ್!, ಪ್ರವಾಸಿ ಸ್ಥಳಗಳು ಖಾಲಿ ಖಾಲಿ, ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಮುಖ, ಪ್ರವಾಸಿಗರಿಲ್ಲದೇ, ಪ್ರವಾಸೋದ್ಯಮದ ಮೇಲೆ, ಭಯವಿಲ್ಲದೇ ಜಿಲ್ಲೆಗೆ ಬನ್ನಿ, ಮಂಗನ ಕಾಯಿಲೆ ಭೀತಿ, ಮಲೆನಾಡಲ್ಲಿ, ವಿಶ್ವವನ್ನೇ ಬೆಚ್ಚಿ ಬೀಳಿಸಿರುವ, ವೈರಸ್ ಲಕ್ಷಣದ ಕುರಿತು ಸಮೀಕ್ಷೆ, ವ್ಯವಹಾರದ ಮೇಲೆ ಹೊಡೆತ, ಹೆದರುವಂತಹ ಪರಿಸ್ಥಿತಿ

Explore More:

About Devaraj Naik

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...