ಕಾರವಾರ ಜುಲೈ 27 (ಕರ್ನಾಟಕ ವಾರ್ತೆ): ಮೀನುಗಾರಿಕೆ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 2020-21ನೇ ಸಾಲಿಗೆ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಿಸಿದ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗದವರಿಗೆ ಘಟಕ ವೆಚ್ಚದ 40%, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳಾ ಫಲಾನುಭವಿಗಳಿಗೆ 60% ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ-2) ಭಟ್ಕಳ (ದೂ. 7349213478), ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ-2) ಹೊನ್ನಾವರ (ದೂ. 9900140158), ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ-2)ಕುಮಟಾ (ದೂ.6361732651), ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ-2) ಅಂಕೋಲ, (ದೂ. 8971368219), ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ-2)ಕಾರವಾರ (ದೂ. 7996804107), ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ-2) ಶಿರಸಿ,(ದೂ. 9902856123), ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ-2)ಯಲ್ಲಾಪುರ (ದೂ. 7204041351), ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ-2) ಹಳಿಯಾಳ(ದೂ.9845367265) ಅಥವಾ ಮೀನುಗಾರಿಕೆ ಇಲಾಖೆಯ ಅಂತರ್ಜಾಲ ತಾಣ fisheries.karnataka.gov. in ಸಂಪರ್ಕಿಸಬಹುದಾಗಿದೆಯೆಂದು ಮೀನುಗಾರಿಕೆ ಇಲಾಖೆಯು ಉಪನಿರ್ದೇಶಕರಾದ ಎನ್. ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Leave a Comment