ಹಳಿಯಾಳ :- ನೂತನ ಅವಿಷ್ಕಾರದೊಂದಿಗೆ ತಾಲೂಕಿನ ರೈತರು ಬೆಳೆದ ಬೆಳೆ, ಕೃಷಿ ಆಧಾರಿತ ಚಟುವಟಿಕೆಗಳನ್ನು ಪ್ರತಿಬಿಂಬಿಸುವAತಹ ಚಟುವಟಿಕೆಗಳಿಗೆ ಸೂಕ್ತ ಪ್ರೋತ್ಸಾಹ ನೀಡಲು ಕೃಷಿ ಇಲಾಖೆ ೨೦೨೦-೨೧ ನೇ ಸಾಲಿನ ಆತ್ಮಯೋಜನೆ ಅಡಿ ಜಿಲ್ಲಾ ಹಾಗೂ ತಾಲೂಕುಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ ಎಂದು ಹಳಿಯಾಳ ಕೃಷಿ ಇಲಾಖೆ ಸಹಾಯ ನಿರ್ದೇಶಕ P I ಮಾನೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಈ ಪ್ರಶಸ್ತಿಗೆ ಆಯ್ಕೆಯಾದ ೫ಜನ ರೈತರಿಗೆ ನಗದು ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಈ ಪ್ರಶಸ್ತಿಗೆ ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯುವ ಕೃಷಿ ಅಭಿವೃದ್ಧಿ, ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ತಂತ್ರಜ್ಞಾನ ಅಳವಡಿಕೆ(ಹಸಿರುಮನೆ, ಕಸಿ ಅಭಿವೃದ್ಧಿ, ಸಸ್ಯಕಾಶಿ ಇತ್ಯಾದಿ), ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ, ಸಾಕಾಣಿಕೆ,ಇತ್ಯಾದಿಚಟುವಟಿಕೆಗಳಲ್ಲಿ ವಿಶೇಷ ಸಾಧನೆಗೈದ ರೈತರು ಅರ್ಜಿ ಸಲ್ಲಿಸಬಹುದಾಗಿದೆ ಎಂದಿದ್ದಾರೆ.
ಇವುಗಳಲ್ಲಿ ಯಾವೂದಾದರು ಒಂದು ಚಟುವಟಿಕೆಗೆ ಮಾತ್ರ ವಿಶೇಷ ಸಾಧನೆಗಳ ಕುರಿತು ಸೂಕ್ತ ದಾಖಲಾತಿ ಮತ್ತು ಕ್ಷೇತ್ರದ ಚಿತ್ರಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಕೈಗೊಂಡ ಚಟುವಟಿಕೆ-ತಾಂತ್ರಿಕತೆಯು ಪ್ರಸ್ತುತ ಸನ್ನಿವೇಶಕ್ಕೆ ಮತ್ತು ರೈತ ಸಮುದಾಯಕ್ಕೆ ಪ್ರೇರಣೆ ಮತ್ತು ಅಳವಡಿಕೆಗೆ ಸಹಕಾರಿಯಾಗುವಂತಿರಬೇಕು. ಈಗಾಗಲೇ ಈ ಸಾಧನೆಗೆ ಪುರಸೃತರಾದವರು ಅಂದರೆ ಇದೇತರನಾದ/ಸವiನಾಂತರವಾದ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರೆ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಆಸಕ್ತ ರೈತರು ದಿನಾಂಕ:೦೭.೦೯.೨೦೨೦ರೊಳಗಾಗಿ ಪಹಣಿ ಪತ್ರ, ಆಧಾರ್ ಕಾರ್ಡ, ರಾಷ್ಟಿçÃಕೃತ ಬ್ಯಾಂಕ್ ಪಾಸ್ ಪುಸ್ತಕದ ಛಾಯಾಪ್ರತಿ ಹಾಗೂ ಎರಡು ಭಾವ ಚಿತ್ರಗಳೊಂದಿಗೆ ಅರ್ಜಿ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಯನ್ನು ಖುದ್ದಾಗಿ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ ಪಡೆದು ಅರ್ಜಿ ಸಲ್ಲಿಸಬೇಕು ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ ಅಥsವಾ ಆತ್ಮ ಯೋಜನೆಯ ತಾಲೂಕು ತಾಂತ್ರಿಕ ವ್ಯವಸ್ಥಾಪಕ (೯೪೮೩೦೯೮೧೫೩) ಸಂಪರ್ಕಿಸುವAತೆ ಅಧಿಕಾರಿ ಮಾನೆ ತಿಳಿಸಿದ್ದಾರೆ.
ಇನ್ನೂ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೂ ಅರ್ಜಿ ಅಹ್ವಾನಿಸಲಾಗಿದ್ದು ನೂತನ ಅವಿಷ್ಕಾರದೊಂದಿಗೆ ಕೃಷಿಯಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಿದ ಅರ್ಹ ರೈತರಿಂದ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿಅಹ್ವಾನಿಸಲಾಗಿದೆ. ಆಸಕ್ತರು ಮೇಲೆ ನೀಡಿದ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಸಂಪರ್ಕಿಸುವAತೆ ಸಹಾಯಕ ಕೃಷಿ ನಿರ್ದೇಶಕ ಪಿ.ಐ. ಮಾನೆ ವಿನಂತಿದ್ದಾರೆ.

Leave a Comment