ಹೊನ್ನಾವರ : ಎಲ್ಲರ ಸಹಕಾರದಿಂದ ಜಿಲ್ಲೆಯಲ್ಲಿ ಕೊರೊನಾ ರೋಗದ ನಿಯಂತ್ರಣ ಸಾಧ್ಯವಾಗುತ್ತಿದೆ. ಆದಾಗ್ಯೂ ಇತ್ತೀಚೆಗೆ ಕೊರೊನಾ ಟೆಸ್ಟ್ಗೆ ವಿರೋಧ ವ್ಯಕ್ತಪಡಿಸುತ್ತಿರುವ ವಿದ್ಯಮಾನಗಳು ವರದಿಯಾಗುತ್ತಿದ್ದು ಕೊರೊನಾ ಸುರಕ್ಷತಾ ನಿಯಮಗಳನ್ನು ದಿಕ್ಕರಿಸುವವರ ಮೇಲೆ ಕೇಸ್ ಹಾಕಲೂ ಹಿಂಜರಿಯಬಾರದು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹೊನ್ನಾವರದಲ್ಲಿ ಕೊರೊನಾ ಸಂಬoಧಿ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು ತಾಲೂಕಾಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆಗೆ ಲಭ್ಯವಿರುವ ಬೆಡ್ಗಳ ಸಂಖ್ಯೆ ಮತ್ತು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಕೊರೊನಾ ಟೆಸ್ಟ್ಗಳನ್ನು ಹೆಚ್ಚಿಸುವ ಮೂಲಕ ರೋಗ ಪತ್ತೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ಜನರು ತಾವಾಗಿಯೇ ಮುಂದೆ ಬರಬೇಕು. ಅಧಿಕಾರಿಗಳು ಜನರಲ್ಲಿ ತಿಳುವಳಿಕೆ ಮೂಡಿಸಲು ಪ್ರಯತ್ನಿಸಬೇಕು. ಉದ್ದೇಶಪೂರ್ವಕವಾಗಿ ಕೊರೊನಾ ಹರಡುವುದಕ್ಕೆ ಕಾರಣರಾದವರು ಮತ್ತು ಸರ್ಕಾರದ ನಿರ್ಬಂಧಗಳನ್ನು ದಿಕ್ಕರಿಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಮುಂದಾಗುವoತೆ ತಾಕೀತು ಮಾಡಿದರು.
ಹೊರ ಜಿಲ್ಲೆಗೆ ತೆರಳುವ ರೋಗಿಗಳ ಸಮಸ್ಯೆ ಬಗೆಹರಿಸುತ್ತೇವೆ – ನೆರೆಯ ಉಡುಪಿ ಜಿಲ್ಲೆಯಲ್ಲಿ ಉತ್ತರಕನ್ನಡ ಜಿಲ್ಲೆಯ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಲಾಗುತ್ತಿದೆ ಎನ್ನುವ ಬಗ್ಗೆ ಗಮನ ಸೆಳೆದಾಗ ಉತ್ತರಿಸಿದ ಜಿಲ್ಲಾಧಿಕಾರಿಗಳು ಕೊರೊನಾ ಅಥವಾ ಇತರೇ ರೋಗಿಗಳಿಗೂ ಜಿಲ್ಲೆಯಲ್ಲಿಯೇ ಉತ್ತಮ ಚಿಕಿತ್ಸೆ ನೀಡಲು ವ್ಯವಸ್ಥೆ ಕಲ್ಪಿಸಲಾಗುವುದು. ಆದಾಗ್ಯೂ ಚಿಕಿತ್ಸೆಯ ಬಗ್ಗೆ ತೃಪ್ತಿ ಇಲ್ಲದವರು ಹೊರ ಜಿಲ್ಲೆಗೆ ಹೋಗಲು ಮುಂದಾದರೆ ಅಂತವರಿಗೆ ಯಾವುದಾದರೂ ಜಿಲ್ಲೆಯಲ್ಲಿ ಚಿಕಿತ್ಸೆ ನಿರಾಕರಿಸಿದರೆ ತಹಸೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಬಹುದು. ಅಥವಾ ಇಲ್ಲಿಂದ ಹೋಗುವಾಗಲೇ ತಹಸೀಲ್ದಾರ್ ಮೂಲಕ ಅನುಮತಿ ಪತ್ರ ಪಡೆದುಕೊಂಡು ಹೋಗಬಹುದು ಎಂದು ತಿಳಿಸಿದ್ದಾರೆ
Leave a Comment