ಖಾನಾಪುರ: ಪಟ್ಟಣದ ಶಿವಸ್ಮಾರಕ ವೃತ್ತದಲ್ಲಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪೋಲೀಸ್ ಪರವಾಣಗಿ ತೆಗೆದುಕೊಂಡು ಪ್ರತಿಭಟನೆ ನಡೆಸುತ್ತಿದ್ದರು. ಈ ಸಂಧರ್ಭದಲ್ಲಿ ಪ್ರತಿಭಟನೆ ನಡೆಸುವಾಗ ಪೋಲೀಸ್ ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು, ಖಾನಾಪುರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ದಂಡಗಲ ಮೇಲೆ ಖಾನಾಪುರ ಠಾಣೆಯ ಮಹಿಳಾ ಎ.ಎಸ್.ಐ ಸಪಾಟೆ ಹಾಗೂ ಮಹಿಳಾ ಸಿಬ್ಬಂದಿ ಸೇರಿ ಮಹಿಳಾ ಅಧ್ಯಕ್ಷೆಯ ಕೂದಲನ್ನು ಹಿಡಿದು ಎಳೆದಾಡಿ ದೌರ್ಜನ್ಯ ರೂಪದಲ್ಲಿ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಿದ್ದಾರೆ. ಇದೆ ಸಂಧರ್ಭದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ರಾಯಣ್ಣ ಬಳಗಪ್ಪನವರ ಅವರ ಕುತ್ತಿಗೆಗೆ ಕೈ ಹಾಕಿ, ಶರ್ಟ್ ಕಾಲರ್ ಹಿಡಿದು ದಬ್ಬಾಳಿಕೆಯಿಂದ ಪೋಲಿಸ್ ವಾಹನದಲ್ಲಿ ಹತ್ತಿಸಿಕೊಂಡು ಠಾಣೆಗೆ ಕರೆದುಕೊಂಡು ಹೋದರು. ತದನಂತರ ಖಾನಾಪುರ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಎಲ್ಲರೂ ಸೇರಿಕೊಂಡು ತಹಶಿಲ್ದಾರರ ಕಚೇರಿ ಮುಂದೆ ಕೂತು ಪ್ರತಿಭಟನೆ ನಡೆಸಿ, ಪೋಲಿಸ್ ದಬ್ಬಾಳಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಣ್ಣೀರು ಹಾಕಿ ತಮಗೆ ಅವಮಾನ ಮಾಡಿದ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Leave a Comment