• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಿಜೆಪಿ ಸೇರುವ ಪ್ರಯತ್ನಕ್ಕೆ ಹಿನ್ನಡೆಯಾದ ತಕ್ಷಣ ಘೊಟ್ನೇಕರ ಅವರಿಂದ ಬಿಜೆಪಿ ಬಗ್ಗೆ ಟಿಕೆ- ಮಾಜಿ ಶಾಸಕ ಸುನೀಲ್ ಹೆಗಡೆ

September 11, 2020 by Yogaraj SK Leave a Comment

ಹಳಿಯಾಳ:- ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೊಟ್ನೇಕರ ತನ್ನ 11 ವರ್ಷದ ವಿಧಾನ ಪರಿಷತ್ ಸದಸ್ಯತ್ವ ಅವಧಿಯಲ್ಲಿ ಜಿಲ್ಲೆಗೆ ಹಾಗೂ ಕ್ಷೇತ್ರಕ್ಕೆ ಅವರ ಕೊಡುಗೆ ಏನು?, ಎಷ್ಟು ಸ್ಥಳೀಯ ಸಂಸ್ಥೆಗಳ ಅಭಿವೃದ್ದಿಗೆ ಘೊಟ್ನೇಕರ ಶ್ರಮಿಸಿದ್ದಾರೆ?, ಎಷ್ಟು ಗ್ರಾಮ ಪಂಚಾಯತಗಳಿಗೆ ಭೇಟಿ ನೀಡಿ ಅಭಿವೃದ್ದಿಯ ಕುರಿತು ಚರ್ಚಿಸಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಂಡು ಬಳಿಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಗ್ಗೆ ಹೇಳಿಕೆ ನೀಡಲಿ ಎಂದು ಸವಾಲ್ ಹಾಕಿದರು.
ಪಟ್ಟಣದ ಗಣೇಶ ಕಲ್ಯಾಣ ಮಂಟಪದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಸಾಲ ಮನ್ನಾ ಹೆಸರಿನಲ್ಲಿ ಸೊಸೈಟಿಗಳಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರು ಆಗಿರುವ ಘೋಟ್ನೇಕರ ಅವರು ಏಕೆ ತನಿಖೆಗೆ ಸರ್ಕಾರಕ್ಕೆ ಆಗ್ರಹಿಸುತ್ತಿಲ್ಲ ಎಂದು ಪ್ರಶ್ನೀಸಿದರು.

watermarked sunil hegde


ಘೋಟ್ನೇಕರ ಅವರು ಬಿಜೆಪಿ ಸೇರಲು ಎಲ್ಲ ಪ್ರಯತ್ನ ಮಾಡುತ್ತಿದ್ದಾರೆ ಆದರೇ ಎಲ್ಲ ಹಂತದ ಅವರ ಪ್ರಯತ್ನಗಳು ವಿಫಲವಾಗುತ್ತಿವೆ ಅಲ್ಲದೇ ಅವರಿಗೆ ಹಿನ್ನಡೆಯಾದ ಕೂಡಲೇ ಬಿಜೆಪಿಯನ್ನು ಟಿಕಿಸುವ ಕೆಲಸ ಮಾಡುತ್ತಾರೆ. ಈಗಲೂ ಸಹ ಇದೇ ರೀತಿ ಆದ ಕಾರಣ ಮತ್ತೇ ಅನಾವಶ್ಯಕ ಟಿಕೆಗಳನ್ನು ಮಾಡುವ ಮೂಲಕ ಕಾಂಗ್ರೆಸ್‍ನಲ್ಲಿ ತನ್ನ ಅಸ್ತಿತ್ವ ತೊರಿಸುವ ಯತ್ನ ಮಾಡುತ್ತಿದ್ದಾರೆ ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರ್ಥೀಕವಾಗಿ ದಿವಾಳಿ ತೆಗೆದಿವೆ ಎಂದು ಅರ್ಥವಿಲ್ಲದ ಹೇಳಿಕೆ ನೀಡುವ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರೇ ಬೌದ್ದಿಕವಾಗಿ ದಿವಾಳಿ ತೆಗೆದಿದ್ದಾರೆ ಎಂದು ಹೆಗಡೆ ಖಾರವಾಗಿ ನುಡಿದರು.
ಜಿಡಿಪಿ ಬಗ್ಗೆ ಮಾತನಾಡುವ ಜಿಲ್ಲಾ ಮಧ್ಯವರ್ತಿ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರು ಆಗಿರುವ ಘೊಟ್ನೇಕರ ಜಿಡಿಪಿ ಎಂದರೇನು ? ಯಾವ ಆಧಾರದ ಮೇಲೆ ರಾಜ್ಯ ಹಾಗೂ ರಾಷ್ಟ್ರದ ಜಿಡಿಪಿ ನಿರ್ಧರಿಸಲಾಗುತ್ತದೆ ಎಂದು ಎಲ್ಲರಿಗೂ ತಿಳಿಸಿ ಹೆಳುವ ಕೆಲಸ ಮಾಡಲಿ ಬಳಿಕ ಟಿಕೆ ಮಾಡಲಿ ಎಂದ ಸುನೀಲ್ ಹೆಗಡೆ ಕೊರೊನಾ ಮಹಾಮಾರಿಯಿಂದ ಜಗತ್ತೇ ಅಲ್ಲೋಲ ಕಲ್ಲೋಲವಾಗಿದೆ. ಎಲ್ಲ ರಾಷ್ಟ್ರಗಳ ಜಿಡಿಪಿ ಕುಸಿದಿದೆ ಆದರೇ ಜಾಗತಿಕ ಮಟ್ಟದಲ್ಲಿ ಭಾರತದ ಜಿಡಿಪಿ ಉತ್ತಮ ಸ್ಥಿತಿಯಲ್ಲಿದೆ ಎನ್ನುವುದನ್ನು ಘೊಟ್ನೇಕರ ತಿಳಿದುಕೊಳ್ಳದೇ ಇರುವುದು ದೌರ್ಭಾಗ್ಯದ ಸಂಗತಿಯಾಗಿದೆ ಎಂದರು.
ಕೊರೊನಾದಂತಹ ಸಂದರ್ಭದಲ್ಲಿಯೂ ಎಲ್ಲ ಹಂತದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಹಾಗೂ ಅಭೀವೃದ್ದಿ ಕಾರ್ಯಗಳಲ್ಲಿ ತೊಡಗಿವೆ ಆದರೇ ಕೊರೊನಾ ಇಲ್ಲದಿರುವ ಸಂದರ್ಭದಲ್ಲಿ ಕೇಂದ್ರದಲ್ಲಿ ಕಾಂಗ್ರೇಸ್ ಸರ್ಕಾರವಿದ್ದಾಗ ಜಿಡಿಪಿ ಯಾವ ಮಟ್ಟಕ್ಕೆ ಕುಸಿದಿತ್ತು ಎಂಬುದನ್ನು ಕೂಡ ಕಾಂಗ್ರೇಸ್ಸಿಗರು ಜನತೆಗೆ ಹೇಳುವ ಕೆಲಸ ಮಾಡಬೇಕು ಎಂದ ಮಾಜಿ ಶಾಸಕರು ಎರಡೂ ಸರ್ಕಾರಗಳು ಸ್ವ ಹಿತಾಸಕ್ತಿಗಾಗಿ ಏನು ಮಾಡದೇ ಜನತೆಗಾಗಿ ಕಾರ್ಯನಿರ್ವಹಿಸುತ್ತಿದ್ದಾರೇ ಹೋರತು ಘೊಟ್ನೇಕರ ಹಾಗೆ ಸ್ವಹಿತಾಸಕ್ತಿಗಾಗಿ ಕೆಲಸ ಮಾಡುತ್ತಿಲ್ಲ ಎಂದು ಕಿಡಿ ಕಾರಿದರು.
ಕ್ಷೇತ್ರ ಹಾಗೂ ಜಿಲ್ಲೆಯ ಬಗ್ಗೆ ಹಾಗೂ ಸರ್ಕಾರದ ಬಗ್ಗೆ ಆರೋಪ ಮಾಡುವವರು ಸದನದ ಬಾವಿಗೆ ಇಳಿದು ಮಾತನಾಡಿ ಹೊರತು ಪತ್ರಿಕೆಗಳ ಮೂಲಕ ಮಾತನಾಡಬೇಡಿ ಎಂದ ಹೆಗಡೆ ಸ್ಥಳೀಯ ಎಪಿಎಮ್‍ಸಿಯಲ್ಲಿ ದಲ್ಲಾಳಿಗಳು ರೈತರ ರಕ್ತ ಹಿರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಇದಕ್ಕೆ ಘೊಟ್ನೇಕರ ಹಾಗೂ ಎಪಿಎಮಸಿ ಅಧ್ಯಕ್ಷ ಶ್ರೀನಿವಾಸ ಘೊಟ್ನೇಕರ ಅವರೇ ಹೊಣೆಯಾಗಿದ್ದಾರೆ. ರೈತರಿಗೆ ವಂಚಿಸುತ್ತಿರುವ ದಲಾಲರ ಬಗ್ಗೆ ಏಕೆ ಮಾತನಾಡುವುದಿಲ್ಲ ಅವರ ವಿರುದ್ದ ಕ್ರಮ ಜರುಗಿಸುವುದಿಲ್ಲವೇಕೆ ಇದುವೇ ಘೊಟ್ನೇಕರ ಅವರ ರೈತಪರ ಕಾಳಜಿಯೇ ಎಂದು ವಾಗ್ದಾಳಿ ನಡೆಸಿದ ಮಾಜಿ ಶಾಸಕರು ರೈತರ ಬಗ್ಗೆ ಮೊಸಳೆ ಕಣ್ಣಿರು ಹಾಕುವುದು ಬಿಟ್ಟು ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ಕರೆ ನೀಡಿದರು.
ಇನ್ನೂ ಕೆಡಿಸಿಸಿ ಬ್ಯಾಂಕ್‍ಗೆ ಯಾವುದೇ ಕಾರಣಕ್ಕೂ ಎಸ್.ಎಲ್.ಘೊಟ್ನೇಕರ ಅವರನ್ನು ಇನ್ನೊಂದು ಅವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಡಿ ಎಂದು ಬ್ಯಾಂಕ್‍ನ ನಿರ್ದೇಶಕರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಗಣಪತಿ ಕರಂಜೆಕರ, ಜೋಯಿಡಾ ಅಧ್ಯಕ್ಷ ಸಂತೋಷ ರೆಡಕರ, ಪ್ರಮುಖರಾದ ಚಂದ್ರು ಕಮ್ಮಾರ, ಗಿರಿಶ ಟೊಸುರ, ಬಸವರಾಜ ಕಳಶೆಟ್ಟಿ, ಶಿವಾಜಿ ನರಸಾನಿ, ಅನಿಲ ಮುತ್ನಾಳ, ನರೇಂದ್ರ ಚವ್ವಾಣ, ದಶರತ ಬಂಡಿವಡ್ಡರ, ವಾಸು ಪೂಜಾರಿ, ವಿಲಾಸ ಯಡವಿ ಇತರರು ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: ಅನಾವಶ್ಯಕ ಟಿಕೆ, ಎಸ್.ಎಲ್.ಘೋಟ್ನೇಕರ ಅವರೇ ಬೌದ್ದಿಕವಾಗಿ ದಿವಾಳಿ, ಗಣೇಶ ಕಲ್ಯಾಣ ಮಂಟಪದಲ್ಲಿ ಸುದ್ದಿಗೋಷ್ಟಿ, ಗ್ರಾಮ ಪಂಚಾಯತಗಳಿಗೆ ಭೇಟಿ, ಜಿಲ್ಲೆಗೆ ಹಾಗೂ ಕ್ಷೇತ್ರಕ್ಕೆ ಅವರ ಕೊಡುಗೆ, ಮೂಲಭೂತ ಸೌಕರ್ಯ, ರೈತರ ಬಗ್ಗೆ ಮೊಸಳೆ ಕಣ್ಣಿರು, ಹಾಕುವುದು ಬಿಟ್ಟು ಪ್ರಾಮಾಣಿಕವಾಗಿ ಕೆಲಸ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...