• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

September 11, 2020 by Vishwanath Shetty Leave a Comment

ಹೊನ್ನಾವರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ `ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ’ ಹೊನ್ನಾವರ ಘಟಕವು ಶುಕ್ರವಾರ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಪಟ್ಟಣದ ಶರಾವತಿ ಸರ್ಕಲ್‍ನಿಂದ ತಹಸೀಲ್ದಾರ್ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಟ್ಟಡ ಕಾರ್ಮಿಕರು ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಸೂಕ್ತ ನ್ಯಾಯ ಸಿಗುವಂತೆ ಘೋಷಣೆ ಕೂಗಿದರು.

watermarked IMG 20200911 WA0065

ಬಿಎಂಎಸ್ ಸಂಯೋಜಿತ ಕಟ್ಟಡ ಕಾರ್ಮಿಕ ರಾಜ್ಯ ಕಾರ್ಯದರ್ಶಿ ಹರೀಶ್ಚಂದ್ರ ನಾಯ್ಕ ಮಾತನಾಡಿ, `ಕಳೆದ ಎರಡು-ಮೂರು ವರ್ಷಗಳಿಂದ ಬಾಕಿ ಇರುವ ಎಲ್ಲಾ ಧನಸಹಾಯದ ಅರ್ಜಿಗಳನ್ನು ವಿಲೇವಾರಿ ಮಾಡದೆ ಇರುವುದರಿಂದ ಹಣ ಸಂದಾಯವಾಗದೆ ಬಾಕಿ ಉಳಿದಿವೆ. ಸಾವಿರಾರು ಕೋಟಿ ರೂಪಾಯಿ ಹಣವನ್ನು ಬೇರೆ ರಾಜ್ಯದ ವಲಸೆ ಕಟ್ಟಡ ಕಾರ್ಮಿಕರಿಗೆ, ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಇಲಾಖೆಯ ಅಧಿಕಾರಿಗಳ ಖರ್ಚು ವೆಚ್ಚಕ್ಕಾಗಿ ಉಪಯೋಗಿಸುತ್ತಿರುವುದು ತಿಳಿದುಬಂದಿದೆ. ಇಷ್ಟು ಅಪಾರವಾದ ಹಣ ಬಿಡುಗಡೆಯಾದರೂ ಕಟ್ಟಡ ಕಾರ್ಮಿಕರಿಗೆ ಸಿಗಬೇಕಾದ 5 ಸಾವಿರ ರೂ. ಸಹಾಯಧನ ಇನ್ನೂ ಶೇ.30 ರಷ್ಟು ಬಾಕಿ ಇದೆ. ಇದಕ್ಕೆ ಕಾರ್ಮಿಕ ಇಲಾಖೆಯ ಅವೈಜ್ಞಾ ನಿರ್ಧಾರಗಳು ಕಾರಣವಾಗಿದೆ’ ಎಂದರು.  ಆನ್‍ಲೈನ್ ಅರ್ಜಿ ಪ್ರಾರಂಭದಿಂದ ಈವರೆಗೂ ಸರ್ವರ್ ಸೇವೆ ಸಮರ್ಪಕವಾಗಿ ಸಿಗುತ್ತಿಲ್ಲ. ಇದರಿಂದ ಕಾರ್ಮಿಕರಿಗೆ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಆಧಾರ್ ಕಾರ್ಡ್‍ನಲ್ಲಿ ಮೊಬೈಲ್ ಲಿಂಕ್ ಹಾಗೂ ಹೆಸರು, ವಿಳಾಸ ತಿದ್ದುಪಡಿ ಮಾಡುವುದು ಸಧ್ಯ ಸ್ಥಗಿತಗೊಂಡಿದೆ. ಇದರಿಂ ಫಲಾನುಭವಿಗಳಿಗೆ ಆನ್‍ಲೈನ್ ಅರ್ಜಿ ಹಾಕಲು ಆಗುತ್ತಿಲ್ಲ. ಮದುವೆ ಧನ ಸಹಾಯ 50 ಸಾವಿರ ರೂ. ಹಣದಲ್ಲಿ 25 ಸಾವಿರ ರೂ. ಎಫ್‍ಡಿ ಠೇವಣಿ ಕೊಡುವುದನ್ನು ಕಡಿತಮಾಡಿ ಪೂರ್ತಿ ಹಣವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು ಎಂದು ಹಲವಾರು ಬಾರಿ ವಿನಂತಿಸಲಾಗಿದ್ದು, ಅದು ಈವರೆಗೂ ಈಡೇರಲಿಲ್ಲ. ನಕಲಿ ಸಹಿ ಮಾಡು ಸಾಧ್ಯತೆ ಇರುವುದರಿಂದ ಕಟ್ಟಡ ಕಾರ್ಮಿಕರ ನೋಂದಣಿ ಮತ್ತು ರಿನಿವಲ್‍ಗೆ ಸಹಿ ಮಾಡುವ ಹೊಣೆಗಾರಿಕೆಯನ್ನು ಕಟ್ಟಡ ಮಾಲಿಕರಿಗೆ ನೀಡದೆ ಲೈಸೆನ್ಸ್ ಪಡೆದ ಗುತ್ತಿಗೆದಾರರು ಮತ್ತು ಇಂಜಿನೀಯರ್‍ಗಳಿಗೆ ಮಾತ್ರ ಅವಕಾಶ ನೀಡಬೇಕು.ಕಾರ್ಮಿಕ ಇಲಾಖೆ ಮತ್ತು ಸಂಘಟನೆಗಳಿಗಾಗಿ ಒಂದು ತಂತ್ರಾಂಶ ಅಭಿವೃದ್ಧಿಪಡಿಸಿ ಕಾರ್ಮಿಕರಿಗೆ ಸುಲಭವಾಗಿ ಸಕಾಲದಲ್ಲಿ ಸೌಲಭ್ಯ ಸಿಗುವಂತೆ ಮಾಡಬೇಕು. ಇಎಸ್‍ಐ ಸೌಲಭ್ಯದಂತೆ ಕಾರ್ಮಿಕರು ಚಿಕಿತ್ಸೆ ಪಡೆದ ಆಸ್ಪತ್ರೆಗಳಿಗೆ ಮಂಡಳಿಯಿಂದ ಹಣ ಸಂದಾಯವಾಗಬೇಕು. ಜಿಲ್ಲೆಯಲ್ಲಿ ನೆಟ್‍ವರ್ಕ್ ಸಮಸ್ಯೆ ಇರುವುದರಿಮದ ವಿಶೇಷ ಆದ್ಯತೆ ಮೇಲೆ ಆನ್‍ಲೈನ್ ಮತ್ತು ಆಫ್‍ಲೈನ್ ಎರಡರಲ್ಲೂ ಕಾರ್ಡ್ ನವೀಕರಣ ಹಾಗೂ ಸೌಲಭ್ಯದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಬೇಕು. ರಾಜ್ಯಾದ್ಯಂತ ಪ್ರತಿ ಜಿಲ್ಲೆ ಹಾಗೂ ತಾಲೂಕುಗಳಿಗೆ ಕಾರ್ಮಿಕ ನಿರೀಕ್ಷಕರನ್ನು ನೇಮಿಸಿ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಿ ಸೌಲಭ್ಯ ಸಿಗುವಂತೆ ಮಾಡಬೇಕು.ಈ ಬಾರಿಯ ಶೈಕ್ಷಣಿಕ ಧನ ಸಹಾಯಕ್ಕಾಗಿ ಕೇವಲ ಪಾಸಾದ ಅಂಕಪಟ್ಟಿಯನ್ನು ಪರಿಗಣಿಸಿ ಆನ್‍ಲೈನ್‍ನಲ್ಲೂ ಅರ್ಜಿ ಸಲ್ಲಿಸಲು ಶೈಕ್ಷಣಿಕ ವರ್ಷಾವಧಿ ಪೂರ್ಣ ಕಾಲಾವಕಾಶ ನೀಡಬೇಕು. ಕಾರ್ಮಿಕ ಫಲಾನುಭವಿಗಳ ಮನೆ ನಿರ್ಮಾಣ, ಖರೀದಿಗೆ 2 ಲಕ್ಷ ರೂ. ಬದಲು 10 ಲಕ್ಷಕ್ಕೆ ಹೆಚ್ಚಿಸಬೇಕು. 60 ವರ್ಷ ಪೂರೈಸಿದ ಫಲಾನುಭವಿಗಳಿಗೆ ಕೊಡುವ 1 ಸಾವಿರ ರೂ. ವೇತನದ ಬದಲಾಗಿ 3 ಸಾವಿರ ರೂ. ನಿವೃತ್ತಿ ವೇತನ ಕೊಡಬೇಕು. ಮರಳು, ಚಿರೆಕಲ್ಲು, ಜಲ್ಲಿ ಸೇರಿದಂತೆ ಕಚ್ಚಾ ಸಾಮಗ್ರಿಗಳಿಗೆ ಶೀಘ್ರ ಪರವಾನಿಗೆ ದೊರೆಯಬೇಕು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ಇರುವಂತೆ ಇತರೆ ಅಲ್ಲಾ ಅಸಂಘಟಿತ ಕಾರ್ಮಿಕರಿಗೂ ಪ್ರತ್ಯೇಕ ಮಂಡಳಿ ರಚಿಸಿ ಅವರಿಗೂ ಸೌಲಭ್ಯ ಸಿಗುವಂತಾಗಬೇಕು. ಅತೀ ಶೀಘ್ರದಲ್ಲಿ ನಮ್ಮೆಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಅನಿವಾರ್ಯವಾಗಿ ರಾಜ್ಯದ ಎಲ್ಲಾ ಕಾರ್ಮಿಕ ಕಲ್ಯಾಣ ಮಂಡಳಿಯು ವಿಧಾನ ಸೌಧದ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಮನವಿಯಲ್ಲಿ ಎಚ್ಚರಿಸಿದ್ದಾರೆ.ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ನಾಗೇಶ ನಾಯ್ಕ, ರಾಜ್ಯ ಸದಸ್ಯ ಈಶ್ವರ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಮೋಹನ ನಾಯ್ಕ, ಆದರ್ಶ ನಾಯ್ಕ, ಗೋಪಾಲ ನಾಯ್ಕ, ಸೀತಾರಾಮ ನಾಯ್ಕ, ಪರಮೇಶ್ವರ ಮಡಿವಾಳ, ಬಾಲಚಂದ್ರ ಕೆಸರಕೋಡ, ಸಾವಿತ್ರಿ ನಾಯ್ಕ, ಸೀತು ಇತರರು ಪಾಲ್ಗೊಂಡಿದ್ದರು. ಉಪ ತಹಸೀಲ್ದಾರ್ ಸತೀಶ ಗೌಡ ಅವರು ಮನವಿ ಸ್ವೀಕರಿಸಿದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...