ಅಂಕೋಲಾ : ಚುಟುಕು ಬ್ರಹ್ಮ ಡಾ. ದಿನಕರ ದೇಸಾಯಿ ಅವರ ಜನ್ಮ ಜಯಂತಿ ಅಂಗವಾಗಿ ಪಟ್ಟಣದ ಪಿ.ಎಂ. ಹೈಸ್ಕೂಲ್ ಸಭಾಭವನದಲ್ಲಿ ಇಂದು ಕಾರ್ಯಕ್ರಮವನ್ನು ಆಯೋಜಿಸಿದ್ದರು. ಮುಖ್ಯಾಧ್ಯಾಪಕ ಎಂ.ಎ. ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮೆಲ್ಲರ ಬದುಕಿಗೆ ಬೆಳಕಾಗಿದ್ದ ಡಾ. ದಿನಕರ ದೇಸಾಯಿ ಅವರು ಸಮಾಜದ ದಾರ್ಶನಿಕರಾಗಿ ಮಹತ್ತರ ಕೊಡುಗೆಯನ್ನು ನೀಡಿದ್ದಾರೆ. ಶೈಕ್ಷಣಿಕ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗಳು ಅಪಾರವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯಾಧ್ಯಾಪಕ ಆರ್.ವಿ. ಕೇಣಿ, ದಿನಕರ ದೇಸಾಯಿ ಸ್ಮಾರಕ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕರಾದ ಸುಭಾಷ ನಾಯ್ಕ, ಸುನಿತಾ ಅರ್ಗೇಕರ ಉಪಸ್ಥಿತರಿದ್ದರು.
Leave a Comment