• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅತಿಥಿ ಉಪನ್ಯಾಸಕರನ್ನು ಮರುನೇಮಕ ಮಾಡುವಂತೆ ಶಾಸಕ ಆರ್ ವಿ ದೇಶಪಾಂಡೆ ಆಗ್ರಹ

September 19, 2020 by Yogaraj SK Leave a Comment

ಹಳಿಯಾಳ:- ಕೋವಿಡ-19 ಹಿನ್ನಲೆಯಲ್ಲಿ ಮರು ನೇಮಕವಾಗದ ಅತಿಥಿ ಉಪನ್ಯಾಸಕರನ್ನು ಮರುನೇಮಕ ಮಾಡಿ ಅವರ ಸೇವೆಯನ್ನು ಮುಂದುವರೆಸಿ ಅವರ ಕಷ್ಟಗಳಿಗೆ ಸ್ಪಂದಿಸಬೇಕೆಂದು ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ದೇಶಪಾಂಡೆ ಕರ್ನಾಟಕ ರಾಜ್ಯದ 429 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಅತಿಥಿ ಉಪನ್ಯಾಸಕರು ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಡಿಮೆ ವೇತನ ಪಡೆದು ಉನ್ನತ ಶಿಕ್ಷಣದಲ್ಲಿ ಭೋಧನೆಗೆ ತೊಂದರೆಯಾಗದಂತೆ ಕಾರ್ಯ ನಿರ್ವಹಿಸುತ್ತಿರುವ ಅವರ ಸೇವೆ ಅನುಪಮವಾಗಿದೆ.
ಕೋವಿಡ-19 ಹಿನ್ನಲೆಯಲ್ಲಿ ಕಳೆದ 24 ಮಾರ್ಚ 2020 ರಿಂದ ಅವರನ್ನು ಮರು ನೇಮಕ ಮಾಡಿಕೊಂಡಿಲ್ಲ. ಹೀಗಾಗಿ ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಅವರು ಅಭದ್ರತೆ ಮತ್ತು ಕೀಳರಿಮೆಯಿಂದ ನರಳುತ್ತಿದ್ದಾರೆ ಆದ್ದರಿಂದ ಕೂಡಲೇ ಪ್ರತಿವರ್ಷದಂತೆ ಅವರ ಸೇವೆಯನ್ನು ಮುಂದುವರೆಸಿ, ಅವರ ಕಷ್ಟಗಳಿಗೆ ಸ್ಪಂದಿಸಬೇಕಾಗಿದೆ.
ಯು.ಜಿ.ಸಿ. ನಿರ್ದೇಶನದಂತೆ ಸೆಪ್ಟೆಂಬರ್ 1ನೇ ತಾರಿಖಿನಿಂದ ಆನ್‍ಲೈನ ಕ್ಲಾಸ್‍ಗಳು ಆರಂಭವಾಗಿವೆ. ಶೀಘ್ರದಲ್ಲಿ ತರಗತಿಗಳನ್ನು ಪ್ರಾರಂಭಿಸುವ ಅನಿವಾರ್ಯತೆ ಇದೆ. ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರವೇಶ ಪಡೆದ ಲಕ್ಷಾಂತರ ಮಕ್ಕಳಿಗೆ ಅತಿಥಿ ಉಪನ್ಯಾಸಕರನ್ನು ಮುಂದುವರೆಸದೇ ಇರುವ ಕಾರಣದಿಂದ ವ್ಯವಸ್ಥಿತವಾಗಿ ಸಂಪೂರ್ಣವಾಗಿ ಭೋಧನೆ ನಡೆಯುತ್ತಿಲ್ಲ. ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಆತಂಕ ಆರಂಭವಾಗಿದೆ. ಆದ್ದರಿಂದ, ಈ ವಿಷಯವನ್ನು ಪ್ರಾಧಾನ್ಯತೆ ಮೇರೆಗೆ ಪರಿಗಣಿಸಿ, ತಕ್ಷಣವೇ ಅತಿಥಿ ಉಪನ್ಯಾಸಕರ ಸಂಕಷ್ಟಕ್ಕೆ ಹಾಗೂ ವಿದ್ಯಾರ್ಥಿಗಳ ಆತಂಕಕ್ಕೆ ಸ್ಪಂದಿಸಿ ಪ್ರತಿವರ್ಷದಂತೆ ಈ ವರ್ಷವೂ ಅತಿಥಿ ಉಪನ್ಯಾಸಕರನ್ನು ಮುಂದುವರೆಸಲು ಕ್ರಮ ಕೈಗೊಳ್ಳುವಂತೆ ದೇಶಪಾಂಡೆ ವಿನಂತಿಸಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: ಉನ್ನತ ಶಿಕ್ಷಣ, ಕಷ್ಟಗಳಿಗೆ ಸ್ಪಂದಿಸಬೇಕೆಂದು, ಕಾಲೇಜುಗಳಲ್ಲಿ ಪ್ರವೇಶ ಪಡೆದ, ದೇಶಪಾಂಡೆ, ಮಾಧ್ಯಮಗಳಿಗೆ ಮಾಹಿತಿ, ಲಕ್ಷಾಂತರ ಮಕ್ಕಳಿಗೆ ಅತಿಥಿ, ಸರಕಾರಿ ಪ್ರಥಮ ದರ್ಜೆ, ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar