ಯಲ್ಲಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ” ಪೋಷಣಾ ಅಭಿಯಾನದ ” ಅಡಿಯಲ್ಲಿ ಸಚೀವ ಶಿವರಾಮ ಹೆಬ್ಬಾರ್ ಯಲ್ಲಾಪುರ ತಾಲೂಕಿನ ೧೯೭ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ೭ ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಫೋನ್ ವಿತರಿಸಿದರು.
ಸರಕಾರ ನೀಡಿರುವ ಸ್ಮಾರ್ಟ್ ಫೋನ್ ಗಳನ್ನು ಉತ್ತಮ ಕಾರ್ಯಗಳಿಗೆ ಬಳಸಿಕೊಳ್ಳಬೇಕು, ಸರಕಾರ ಅಂಗನವಾಡಿ ಕಾರ್ಯಕರ್ತೆಯರ ಕೆಲಸ ಸರಳವಾಗಿ ನಿರ್ವಹಿಸುವುದಕ್ಕೆ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಶ್ರೀ ವಿಜಯ ಮಿರಾಶಿ ಹಾಗೂ ಸಿ.ಪಿ.ಡಿ ಶ್ರೀಮತಿ ರಫೀಕಾ ಹಳ್ಳೂರು, ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರು ಹಾಜರಿದ್ದರು.
Leave a Comment