ಹೊನ್ನಾವರ – ಕೋವಿಡ್ ಸುರಕ್ಷತೆಗಾಗಿ ಮಾಸ್ಕ್ ವಿತರಿಸುವುದರೊಟ್ಟಿಗೆ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವ ಮೂಲಕ ಪಟ್ಟಣ ಪಂಚಾಯತ್ ಹಾಗೂ ತಾಲೂಕಾಡಳಿತದಿಂದ ಗಾಂಧಿ ಜಯಂತಿ ಮತ್ತು ಲಾಲಬಹದ್ದೂರ್ ಶಾಸ್ತಿçಯವರ ಜಯಂತಿಯನ್ನು ಆಚರಿಸಲಾಯಿತು.
ತಹಶೀಲ್ದಾರ್ ವಿವೇಕ ಶೇಣ್ವಿ, ಪಟ್ಟಣಪಂಚಾಯತ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಟ್ಟಣ ಪಂಚಾಯತ ಆವರಣದಲ್ಲಿರುವ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಅಕ್ಟೋಬರ್ ೨ ರಿಂದ ೧೦ ರ ವರೆಗೆ ಸ್ವಚ್ಛತಾ ಸಪ್ತಾಹವನ್ನು ಹಮ್ಮಿಕೊಂಡಿದ್ದು ಕೋವಿಡ್ ನಿರ್ದೇಶನಗಳನ್ನು ಪಾಲಿಸಿ ಸ್ವಚ್ಛತಾ ಸಪ್ತಾಹದಲ್ಲಿ ಪಾಲ್ಗೊಳ್ಳುವಂತೆ ಎಲ್ಲಾ ಇಲಾಖೆಯ ತಾಲೂಕಾ ಮಟ್ಟದ ಅಧಿಕಾರಿಗಳು ಹಾಗೂ ನೌಕರರಿಗೆ ಸೂಚಿಸಲಾಯಿತು.
Leave a Comment