• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಳಿಯಾಳದ ಟಿಪಿಎಂಎಸ್ ಸಂಘದಲ್ಲಿ ಭಾರಿ ಭ್ರಷ್ಟಾಚಾರ ಆರೋಪ- ತನಿಖೆಗೆ ಆಗ್ರಹಿಸಿದ ಬಿಜೆಪಿ ಪಕ್ಷ.

October 7, 2020 by Yogaraj SK Leave a Comment

ಹಳಿಯಾಳ:- 2019-20 ನೇ ಸಾಲಿನಲ್ಲಿ ಟಿಪಿಎಮ್‍ಸಿನ ಸಹಕಾರಿ ಸಂಘದಲ್ಲಿ ಆಡಳಿತ ಮಂಡಳಿಯ ಮತ್ತು ಸಹಕಾರಿ ಸಂಘದ ಹೆಸರಿನಲ್ಲಿ ರೈತರಿಗೆ ಪೂರೈಸಬೇಕಾದಂತ ಫರ್ಟಿಲೈಸರ್ ಗೊಬ್ಬರವನ್ನು ಹಳಿಯಾಳದ ಟಿಪಿಎಮ್‍ಎಸ್ ಸಂಘದ ಹೆಸರಿನಲ್ಲಿ ಖರೀದಿ ಮಾಡಿ ರೈತರಿಗೆ ಗೊಬ್ಬರ ಪೂರೈಸದೆ ಬೆರೆ ತಾಲೂಕಿಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗಿದೆ ಎಂದು ಹಳಿಯಾಳ ಬಿಜೆಪಿ ಪಕ್ಷ ಗಂಭೀರ ಆಪಾದನೆ ಮಾಡಿದೆ.

watermarked 5 hly 2


ಸೋಮವಾರ ಮಾಜಿ ಶಾಸಕ ಸುನೀಲ್ ಹೆಗಡೆ ಅವರ ನೇತೃತ್ವದಲ್ಲಿ ಹಳಿಯಾಳ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು, ಪುರಸಭೆ ಸದಸ್ಯರು ಇಲ್ಲಿಯ ಹಳಿಯಾಳ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ಆಗಮಿಸಿ ಸಂಘದ ಆಡಳಿತಾಧಿಕಾರಿಯಾಗಿರುವ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳೆ ಅವರನ್ನು ಭೇಟಿಯಾಗಿ ಹಲವು ವಿಷಯಗಳನ್ನು ಮಂಡಿಸಿ ಆಡಳಿತ ಮಂಡಳಿ ಹಾಗೂ ಕಾರ್ಯದರ್ಶಿಯ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಲಿಖಿತ ಮನವಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಈಶ್ವರ ಅವರನ್ನು ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಬಿಜೆಪಿ ಅಧ್ಯಕ್ಷ ಗಣಪತಿ ಕರಂಜೆಕರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ವಿದ್ಯಮಾನವು ನಡೆಯಿತು.

watermarked 5 hly 001


ಮನವಿಯಲ್ಲಿ ಸಹಕಾರಿ ಸಂಘಗಳು ಸರ್ಕಾರದಿಂದ ಕಡಿಮೆ ಬೆಲೆಗೆ ಗೊಬ್ಬರ ಪಡೆದು ತಾಲೂಕಿನ ರೈತರಿಗೆ ಮಾರಾಟ ಮಾಡಬೇಕಾಗಿರುತ್ತದೆ. ಆದರೇ ಇಲ್ಲಿ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಮ್ಮ ಮನಸ್ಸಿಗೆ ಬಂದಂತೆ ಹೆಚ್ಚಿನ ದರದಲ್ಲಿ ಬೇರೆ ತಾಲೂಕಿನಲ್ಲಿ ಮಾರಾಟ ಮಾಡಿ ಸಂಘಕ್ಕೆ ನಷ್ಟ ಮಾಡಲಾಗಿದೆ. ಅಂದಾಜು 25 ರಿಂದ 30 ಲಕ್ಷದವರೆಗೆ ನಷ್ಟವಾಗಿರುವ ಬಗ್ಗೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಎಲ್ಲಾ ಹಣವನ್ನು ಸಂಘಕ್ಕೆ ಭರಿಸದೆ ಸ್ವಂತಕ್ಕೆ ಬಳಕೆಯಾಗಿದ್ದು ಸಹ ಸಾರ್ವಜನೀಕ ವಲಯದಲ್ಲಿ ಚರ್ಚೆಯಾಗುತ್ತಿದ್ದು ಅನೇಕ ಬಾರಿ ರೈತರು ಸಂಘದ ಕಚೇರಿಗೆ ಮುತ್ತಿಗೆ ಹಾಕಿ ತಕರಾರು ಮಾಡಿದ್ದಾರೆ ಆದರೇ ಯಾವ ಕ್ರಮಗಳು ಜರುಗಿಸಿಲ್ಲ ಎಂದು ಆಪಾದಿಸಲಾಗಿದೆ.
ಆದ್ದರಿಂದ ಸಂಘಕ್ಕೆ ಆದ ನಷ್ಟದ ಹಣವನ್ನು ಆಡಳಿತ ಮಂಡಳಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಯಿಂದಲೇ ಭರಿಸಬೇಕು ಮತ್ತು ಅವರನ್ನು ಕೂಡಲೇ ಅಮಾನತ್ತಿನಲ್ಲಿಟ್ಟು ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಹಳಿಯಾಳ ಬಿಜೆಪಿ ಘಟಕ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ತುರ್ತು ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಸುನೀಲ್ ಹೆಗಡೆ ಹಳಿಯಾಳದ ಆರ್‍ಎಸ್‍ಎಸ್ ಸೊಸೈಟಿ, ಟಿಪಿಎಮ್‍ಎಸ್ ಸೇರಿದಂತೆ ಅನೇಕ ಸೊಸೈಟಿಗಳಿಗೆ 64 ತನಿಖೆ ನಡೆಸಿದರೇ ಭ್ರಹ್ಮಾಂಡ ಭ್ರಷ್ಟಾಚಾರವೇ ಹೊರಬಿಳಲಿದೆ. ಹಳಿಯಾಳದ ಟಿಪಿಎಮ್‍ಎಸ್‍ನಲ್ಲಿ ರೈತರಿಗೆ ವಿಶ್ವಾಸ ದ್ರೋಹ ಮಾಡಲಾಗಿದೆ ರೈತರಿಗೆ ವಿತರಿಸಬೇಕಾದಂತಹ ಫರ್ಟಿಲೈಸರ್ ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಈ ಸಹಕಾರಿ ಸಂಘದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರು ತಮ್ಮ ಸಂಬಂಧಿಕರೆನ್ನುವ ಕಾರಣಕ್ಕೆ ಅರ್ಹತೆಯಿಲ್ಲದ ವ್ಯಕ್ತಿಯನ್ನು ಮ್ಯಾನೇಜರ್ ಹುದ್ದೆಗೆ ಕುರಿಸಿದ್ದಾರೆ ಎಂದು ಆರೋಪಿಸಿದರು.
ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಎಸ್.ಎಲ್.ಘೊಟ್ನೇಕರ ಅವರಿಗೆ ರೈತರಿಗೆ ಆಗಿರುವ ವಿಶ್ವಾಸ ದ್ರೋಹಗಳ ಬಗ್ಗೆ ತಿಳಿದಿಲ್ಲವೇ ?, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಗ್ಗೆ ಟಿಕಿಸುವ ಅವರು ಸೊಸೈಟಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಏಕೆ ಮೌನ ವಹಿಸಿದ್ದಾರೆಂದು ಕಿಡಿ ಕಾರಿದರು.
ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಅವರು ತಮ್ಮ ಆಡಳಿತ ಪಕ್ಷದವರು ನಡೆಸುತ್ತಿರುವ ಲೂಟಿಯ ಬಗ್ಗೆ ಎಚ್ಚರಿಕೆ ವಹಿಸಬೇಕು ಹಾಗೂ ಕೂಡಲೇ ಸೊಸೈಟಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಸೂಕ್ತ ತನಿಖೆಗೆ ಆದೇಶಿಸಬೇಕು ಅಲ್ಲಿಯವರಿಗೆ ಆಡಳಿತ ಮಂಡಳಿಯನ್ನು ಅಮಾನತ್ತಿನಲ್ಲಿಡಬೇಕು ಎಂದು ಆಗ್ರಹಿಸಿದ ಸುನೀಲ್ ಹೆಗಡೆ ಈ ಬಗ್ಗೆ ಸರ್ಕಾರದ ಗಮನ ಸೆಳೆಯುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಗಣಪತಿ ಕರಂಜೆಕರ, ಟಿಪಿಎಮ್‍ಎಸ್ ಸದಸ್ಯ ಪ್ರಕಾಶ ಕೊರವರ, ಪುರಸಭೆ ಸದಸ್ಯ ಸಂತೋಷ ಘಟಕಾಂಬಳೆ, ಚಂದ್ರಕಾಂತ ಕಮ್ಮಾರ, ಸಂಗೀತಾ ಜಾಧವ, ರಾಜೇಶ್ವರಿ ಹಿರೇಮಠ, ಪ್ರಮುಖರಾದ ಅನಿಲ ಮುತ್ನಾಳ, ಶಿವಾಜಿ ನರಸಾನಿ,ವಿಲಾಸ ಯಡವಿ, ಯಲ್ಲಪ್ಪಾ ಹೊನ್ನೊಜಿ, ತಾನಾಜಿ ಪಟ್ಟೇಕರ, ಸಿದ್ದು ಶೆಟ್ಟಿ, ಸಂತಾನ ಸಾವಂತ, ಹನುಮಂತ ಇತರರು ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: Betrayal, BJP AND SV hegde submitted, fertilizer fertilizer for farmers to sell to farmers, siege to peasant union office, ಕಾಳ ಸಂತೆಯಲ್ಲಿ ಮಾರಾಟ, ರೈತರಿಗೆ ಪೂರೈಸಬೇಕಾದಂತ ಫರ್ಟಿಲೈಸರ್ ಗೊಬ್ಬರ, ರೈತರು ಸಂಘದ ಕಚೇರಿಗೆ ಮುತ್ತಿಗೆ, ವಿಶ್ವಾಸ ದ್ರೋಹಗಳ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...