• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿಧಾನಪರಿಷತ್ ಚುನಾವಣೆ ಹಿನ್ನಲೆ ಜಿಲ್ಲಾಧಿಕಾರಿಗಳಿಂದ ಅಧಿಕಾರಿಗಳ ಸಭೆ

October 8, 2020 by Vishwanath Shetty Leave a Comment

ವಿಧಾನಪರಿಷತ್ ಚುನಾವಣೆ ಹಿನ್ನಲೆ ನೀತಿ ಸಂಹಿತೆ ಹಾಗೂ ಮತದನ ಪ್ರಕ್ರಿಯೆ ಬಗ್ಗೆ ಸೂಕ್ತ ರೀತಿಯಲ್ಲಿ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಡಾ ಹರೀಶಕುಮಾರ್ ಕೆ. ಮಾಹಿತಿ ನೀಡಿದರು.

watermarked IMG20201007153839


ಅವರು ಭಟ್ಕಳ ಮತ್ತುಇ ಹೊನ್ನಾವರ ತಾಲೂಕಿನ ಹಿರಿಯ ಅಧಿಕಾರಿಗಳ ಸಭೆಯನ್ನು ಉದ್ದೆಶಿಸಿ ಪಟ್ಟಣ ಪಂಚಾಯತ ಸಭಾಭವನದಲ್ಲಿ ಹಮ್ಮಿಕೊಂಡ ಸಭೆಯನ್ನು ಉದ್ದೆಶಿಸಿ ಮಾತನಾಡಿ ಪಶ್ಚಿಮ ಪದವೀಧರ ಕ್ಷೇತ್ರಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದ್ದು ನವೆಂಬರ್ 5ರವರೆಗೆ ಜಾರಿಯಲ್ಲಿರುತ್ತದೆ. ಕೊವಿಡ್ ಹಿನ್ನಲೆಯಲ್ಲಿ ಎಲ್ಲಡೆ ಸಭೆ ಸಮಾರಂಭ ಮಾಡುವಂತಿಲ್ಲ. ಇದರಿಂದ ಅಭ್ಯರ್ಥಿಗಳು, ಜನಪ್ರತಿನಿಧಿಗಳು ವಿವಿಧಡೆ ಗುಂಫು ಗುಂಪಾಗಿ ಆಗಮಿಸಿ ಕೋವಿಡ್ ನಿಯಮ ಉಲ್ಲಂಘನೆ ಮತ್ತು ನೀತಿಸಂಹಿತೆ ನಿಯಮ ಮೀರಿ ಪ್ರಚಾರ ಕಾರ್ಯ ನಡೆಸಲು ಮುಂದಾದಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ನಿಮ್ಮೆಲ್ಲರ ಮೇಲಿದ್ದು ತಾಲೂಕಿನಲ್ಲಿ ಅಂತಹ ಪ್ರಕರಣ ನಡೆಯದಂತೆ ನೋಡಿಕೊಳ್ಳಬೇಕಿದೆ. ಸರ್ಕಾರಿ ಅಧಿಕಾರಿಗಳು ಯಾವುದೇ ಪಕ್ಷ ಅಥವಾ ವ್ಯಕ್ತಿ ಪರವಾಗಿ ಬಹಿರಂಗವಾಗಿ ಪ್ರಚಾರ ನಡೆಸುವಂತಿಲ್ಲ. ಸಾಮಾಜಿಕ ಜಾಲತಾಣದಲ್ಲಿಯೂ ಪ್ರಚಾರ ನಡೆಸುವಂತಿಲ್ಲ. ಜನಪ್ರತಿನಿಧಿಗಳು ಭಾಗವಹಿಸುವ ಸಭೆ ಸಮಾರಂಭದಲ್ಲಿಯೂ ಭಾಗವಹಿಸುವಂತಿಲ್ಲ. ಇಂತಹ ಪ್ರಕರಣ ಬೆಳಕಿಗೆ ಬಂದಲ್ಲಿ ನಿದ್ರಾಕ್ಷೀಣ್ಯವಾಗಿ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದರು. ಮತದಾನಕ್ಕೆ ಅರ್ಹರಾದವರ ಪಟ್ಟಿಯನ್ನ್ನು ಸಿದ್ದವಾಗಿಟ್ಟುಕೊಳ್ಳುವ ಜವಬ್ದಾರಿ ಅಧಿಕಾರಿ ಮೇಲಿದೆ. ನೆರೆಯ ಜಿಲ್ಲೆಯಲ್ಲಿ ನಕಲಿ ವೊಟರ್ ಐಡಿ ಪತ್ತೆಯಾದ ಹಿನ್ನಲೆಯಲ್ಲಿ ಜಿಲ್ಲೆಯ ವಿವಿಧಡೆ ತಪಾಸಣೆ ನಡೆದಿದ್ದು, ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಮತಕೆಂದ್ರದಲ್ಲಿ ಕುಡಿಯುವ ನೀರು ಶೌಚಾಲಯ ಕೋವಿಡ್ ನಿಯಮ ಪಾಲನೆ ಸೇರಿದಂತೆ ಕಂದಾಯ ಮತ್ತು ಪಂಚಾಯತ ರಾಜ್ ಇಲಾಖೆಯ ಚುನಾವಣೆ ಸಿಬ್ಬಂದಿ ನಿಯೋಜನೆಯ ಕುರಿತು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿದ್ದು, ಇದಕ್ಕೆ ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಹಕಾರ ಬಹುಮುಖ್ಯವಾಗಿದೆ. ಮಾಸ್ಕ ಕಡ್ಡಾಯದಿಂದ ದಂಡ ವಿಧಿಸುವ ಬಗ್ಗೆ ಅಪಸ್ವರ ಕೇಳಿ ಬರುತ್ತಿದ್ದು, ಇದು ನಮ್ಮ ಖಜಾನೆ ತುಂಬಿಸಿಕೊಳ್ಳಲು ಅಲ್ಲ. ಬದಲಿಗೆ ವ್ಯಕ್ತಿ ಹಾಗೂ ಸಮಾಜದ ಹಿತದೃಷ್ಟಿಯಿಂದ ಎನ್ನುವ ಅರಿವು ಮೂಡಿಸುವ ಕಾರ್ಯ ಮಾಡಬೇಕಿದೆ. ಜನರು ನಿಯಮ ಪಾಲಿಸಲು ಆದೋಂಲನ ರೀತಿಯಲ್ಲಿ ನಾವೆಲ್ಲರೂ ಶ್ರಮಿಸಿಬೇಕಾಗಿದೆ. ಇಂದಿನಿಂದ ಹೊಸ ನಿಯಮ ಜಾರಿಯಾಗಿದ್ದು, ಆರೋಗ್ಯ ಇಲಾಖೆ ಗುರುತಿಸಿದ ಮತ್ತು ಸೊಂಕು ಪತ್ತೆಯಾದ ಪ್ರಥಮ ಹಾಗೂ ದ್ವೀತಿಯ ಸಂಪರ್ಕಕ್ಕೆ ಬಂದವರು ಕಡ್ಡಾಯ ತಪಾಸಣೆ ಮಾಡಿಕೊಳ್ಳಬೇಕಿದ್ದು, ನಿರಾಕರಿಸಿದರೆ ದಂಡದ ಜೊತೆ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಯಾಗಿದೆ ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯ ನಡೆಸಬೇಕಿದೆ ಎಂದರು.
ಉಪವಿಭಾಗಾಧಿಕಾರಿ ಭರತ್ ಎಸ್. ತಹಶೀಲ್ದಾರ ವಿವೇಕ ಶೇಣ್ವಿ, ಎಸ್.ರವಿಚಂದ್ರನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: campaign on social networking site, Detection of fake voter ID, meeting of senior officials, panchayat chamber, slogan of western graduates, ನಕಲಿ ವೊಟರ್ ಐಡಿ ಪತ್ತೆ, ಪಂಚಾಯತ ಸಭಾಭವನ, ಪಶ್ಚಿಮ ಪದವೀಧರ ಕ್ಷೇತ್ರಚುನಾವಣೆ ಘೋಷಣೆ, ಸಾಮಾಜಿಕ ಜಾಲತಾಣದಲ್ಲಿಯೂ ಪ್ರಚಾರ, ಹಿರಿಯ ಅಧಿಕಾರಿಗಳ ಸಭೆ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...