• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಒಳಚರಂಡಿ ಯೋಜನೆ ಪರವಾಗಿದ್ದವರು ಪತ್ತೆ ಇಲ್ಲ-ವಿರೋಧ ಮಾಡಿದವರು ತಣ್ಣಗಾದರು ಪ್ರತಿನಿತ್ಯ ಸಂಚಾರಕ್ಕೆ ತೊಂದರೆ, ಹೊಂಡ ಹಾಗೂ ಕೆಸರಿನಿಂದ ಕೂಡಿದ ರಸ್ತೆಗಳಲ್ಲಿ ಸಂಚಾರವೇ ದುಸ್ತರ

October 13, 2020 by Yogaraj SK Leave a Comment

ಹಳಿಯಾಳ:- ಕೆಲವರು ಬಹುಕೋಟಿಯ ಒಳಚರಂಡಿ ಯೋಜನೆಯ ಪರವಾಗಿದ್ದು ಹೋರಾಟವನ್ನೇ ನಡೆಸಿದರು ಇನ್ನೂ ಕೆಲವರು ಭಾರಿ ವಿರೋಧ ಮಾಡಿ ತಣ್ಣಗಾದರು ಆದರೇ ಯೋಜನೆ ಕಾಮಗಾರಿ ಮಾತ್ರ ಇಬ್ಬರಿಗೂ ಸಮಸ್ಯೆಯಾಗದೆ ಸಾರ್ವಜನೀಕರಿಗೆ ಮಾತ್ರ ದಿನನಿತ್ಯ ಕಿರಿಕಿರಿಯನ್ನುಂಟು ಮಾಡುತ್ತಿರುವುದು ಅಲ್ಲದೇ ಪ್ರತಿದಿನ ಜನರು ಹಿಡಿಶಾಪ ಹಾಕುವಂತಾಗಿದೆ.

watermarked 11 hly 3


ಹಳಿಯಾಳಕ್ಕೆ ಕಪ್ಪು ಚುಕ್ಕೆ ಎನ್ನುವಂತೆ ಪೋಲಿಸ್ ರಕ್ಷಣೆಯಲ್ಲಿ ಆರಂಭವಾಗಿದ್ದ ಒಳಚರಂಡಿ ಯೋಜನೆ ಕಾಮಗಾರಿ ಹಲವಾರು ಬಡಾವಣೆ, ಗಲ್ಲಿಗಳ ಜನರ ನೆಮ್ಮದಿಯನ್ನೇ ಹಾಳು ಗೆಡವಿದ್ದು ಪ್ರತಿನಿತ್ಯ ಹಿಡಿಶಾಪಹಾಕುವಂತಾಗಿದೆ. ಕಾಮಗಾರಿ ಆರಂಭಕ್ಕೂ ಮುನ್ನ ಅಧಿಕಾರಿಗಳು ನೀಡಿದ ಭರವಸೆ ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದ ಹಾಗೆ ಆಗಿರುವುದು ಅಷ್ಟೇ ಸತ್ಯವಾಗಿದೆ.
76.20 ಕೋಟಿ ರೂ. ಬೃಹತ್ ಮೊತ್ತದ ಒಳಚರಂಡಿ ಕಾಮಗಾರಿಯನ್ನು ಧಾರವಾಡದ ಸುಪ್ರದಾ ಕನ್‍ಸ್ಟ್ರಕ್ಷನ್ ಪ್ರೈವೆಟ್ ಲಿಮಿಟೆಡ್ ಕಂಪೆನಿಯವರು ನಡೆಸುತ್ತಿದ್ದು ಮನಸೋ ಇಚ್ಚೆ ಕಾಮಗಾರಿ ನಡೆಸಿ ಸಾರ್ವಜನೀಕರ ಕಷ್ಟಕ್ಕೆ ಸ್ಪಂದಿಸದೆ ರಸ್ತೆಗಳನ್ನು ಹೊಂಡ ಮತ್ತು ಕೆಸರಿನ ಆಗರವಾಗಿ ಮಾರ್ಪಾಡು ಮಾಡುತ್ತಿದ್ದಾರೆ. ಅಧಿಕಾರಿಗಳು ಜನರ ಸಮಸ್ಯೆಗೆ ಕ್ಯಾರೆ ಎನ್ನುವುದಿಲ್ಲ ಎನ್ನುವುದು ಒಂದೆಡೆ ಆದರೇ ಕಾಮಗಾರಿ ಪರ ಹೋರಾಟ ಮಾಡಿದವರು ಹಾಗೂ ಕಾಮಗಾರಿ ವಿರೋಧಿಸಿ ಹೋರಾಟ ಮಾಡಿ ತಣ್ಣಗಾದವರು ಇಂದು ಸಾರ್ವಜನೀಕರ ಸಮಸ್ಯೆಗಳನ್ನು ಕೇಳಲು ಬರುತ್ತಿಲ್ಲವೆಂಬುದು ಹಳಿಯಾಳ ರಾಜಕೀಯದ ಬಗ್ಗೆ ಜನ ಚೆನ್ನಾಗಿ ಅರಿಯಬೇಕಾಗಿದೆ.

watermarked 11 hly 4


ಈಗಾಗಲೇ ಕಾಮಗಾರಿ ಪ್ರಾರಂಭವಾಗಿ 7 ತಿಂಗಳುಗಳೇ ಕಳೆದಿವೆ. ಪಟ್ಟಣದ ದೇಶಪಾಂಡೆ ಆಶ್ರಯ ಬಡಾವಣೆಯಿಂದ ಆರಂಭವಾದ ಕಾಮಗಾರಿ ಚವ್ವಾಣ ಪ್ಲಾಟ್, ಬಸವನಗರ, ಸದಾಶೀವನಗರ, ತಾನಾಜಿಗಲ್ಲಿ, ಕೆಎಚ್‍ಬಿ ಕಾಲೋನಿ(ಆನೆಗುಂದಿ ಬಡಾವಣೆ), ಗುತ್ತಿಗೇರಿಗಲ್ಲಿ, ಗೌಳಿಗಲ್ಲಿ, ದುರ್ಗಾನಗರ, ಬಿಕೆ ಹಳ್ಳಿ ರಸ್ತೆ ಸೇರಿದಂತೆ ಇನ್ನು ಹಲವು ಕಡೆಗಳಲ್ಲಿ ನಡೆಸಲಾಗುತ್ತಿದ್ದು ಇಲ್ಲಿ ಒಳಚರಂಡಿ ಪೈಪಲೈನ್‍ಗಾಗಿ ಅಗೆದು ಬಗೆದ ರಸ್ತೆಗಳೆಲ್ಲ ಇಂದು ಕೆಸರಿನ ಕಚ್ಚಾ ರಸ್ತೆಗಳಾಗಿ, ಹೊಂಡಗಳ ಆಗರವಾಗಿ ಮಾರ್ಪಟ್ಟಿವೆ. ಹಲವು ಬಡಾವಣೆಗಳಲ್ಲಂತೂ ವಾಹನ ಸವಾರಿ ದೊಡ್ಡ ಸವಾಲೇ ಆಗಿದ್ದು ಹೆಚ್ಚು ಕಮ್ಮಿ ಆದರೂ ಬಿದ್ದು ಗಂಭೀರ ಸ್ವರೂಪದ ಗಾಯಗಳನ್ನು ಮಾಡಿಕೊಳ್ಳುವುದು ಕಟ್ಟಿಟ್ಟ ಬುತ್ತಿಯಾಗಿದೆ.

watermarked 11 hly 5


ಪ್ರಸಕ್ತ ಮಳೆಗಾಲದಲ್ಲಂತೂ ಸಾಕಷ್ಟು ಜನರು ಕಾಮಗಾರಿ ನಡೆಸುವ ಸ್ಥಳಗಳಲ್ಲಿ ಕೆಸರುಗದ್ದೆಯಂತಾದ ರಸ್ತೆಗಳಲ್ಲಿ ಬಿದ್ದು ಯಾತನಾಮಯ ದಿನಗಳನ್ನು ಕಳೆಯುತ್ತಿದ್ದಾರೆ. ಕೆಲವೆಡೆ ಕಾಟಾಚಾರಕ್ಕೆ ಎಂಬಂತೆ ಜಲ್ಲಿಕಲ್ಲು(ಖಡಿ)ಗಳನ್ನು ಹಾಕಲಾಗಿದ್ದು ಪ್ರತಿನಿತ್ಯ ಈ ಭಾಗದ ಜನರು ಮನೆಯಿಂದ ಹೊರಗೆ ಕಾಲಿಡಲು ಭಯಪಡಬೇಕಾದ ಸನ್ನಿವೇಶಗಳು ನಿರ್ಮಾಣವಾಗಿರುವುದು ಒಳಚರಂಡಿ ಕಾಮಗಾರಿ ನಡೆಸುತ್ತಿರುವವರ ಮೇಲೆ ಜನರು ಹಿಡಿಶಾಪ ಹಾಕುತ್ತಿರುವುದು ಸರ್ವೆ ಸಾಮಾನ್ಯವಾಗಿದೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News, Trending Tagged With: 76.20 crores of dirt road in mud. Large-scale sewer works, 76.20 ಕೋಟಿ ರೂ. ಬೃಹತ್ ಮೊತ್ತದ, annoyance to the public only, dharwad, drainage scheme, Suprada Construction Private Limited Company, washed fruit, ಒಳಚರಂಡಿ ಕಾಮಗಾರಿ, ಒಳಚರಂಡಿ ಯೋಜನೆ, ಕೆಸರಿನ ಕಚ್ಚಾ ರಸ್ತೆ, ಧಾರವಾಡದ, ಪ್ರತಿದಿನ ಜನರು ಹಿಡಿಶಾಪ, ಸಾರ್ವಜನೀಕರಿಗೆ ಮಾತ್ರ ದಿನನಿತ್ಯ ಕಿರಿಕಿರಿ, ಸುಪ್ರದಾ ಕನ್‍ಸ್ಟ್ರಕ್ಷನ್ ಪ್ರೈವೆಟ್ ಲಿಮಿಟೆಡ್ ಕಂಪೆನಿ ಹಣ್ಣು ತೊಳೆದ, ಹಳಿಯಾಳಕ್ಕೆ ಕಪ್ಪು ಚುಕ್ಕೆ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...