ಹೊನ್ನಾವರ : ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕರಾದ ಆರ್. ಎಚ್. ನಾಯ್ಕ ಕಾಗಾಲ ಇವರ ಸೂಚನೆಯ ಮೇರೆಗೆ ಪಟ್ಟಣದ ಉದ್ಯಮನಗರ ಸಂತೋಷ ವಿಠ್ಠಲ ಮೇಸ್ತ ಇವರನ್ನು ಹೊನ್ನಾವರ ಬ್ಲಾಕ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಕರ್ನಾಟಕ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕರಾದ ಶ್ರೀಮತಿ ಎಸ್. ಪ್ಯಾರಿಜಾನ್ ಆದೇಶ ಹೊರಡಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.
ಹೊನ್ನಾವರ ಬ್ಲಾಕ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕರ್ನಾಟಕ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕರಾದ ಶ್ರೀಮತಿ ಎಸ್. ಪ್ಯಾರಿಜಾನ್ ಹೊರಡಿಸಿದ ಆದೇಶ ಪತ್ರವನ್ನು ಉತ್ತರ ಕನ್ನಡ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕರಾದ ಆರ್. ಎಚ್. ನಾಯ್ಕ ನೂತನ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾದ ಸಂತೋಷ ಮೇಸ್ತ ಅವರಿಗೆ ಹಸ್ತಾಂತರಿಸಿದರು.
ಅಖಿಲ ಭಾರತ ಕಾಂಗ್ರೆಸ್ ಸೇವಾದಳದ ಕಾರ್ಯ ಚಟುವಟಿಕೆಗಳನ್ನು ಬ್ಲಾಕ್ ಮಟ್ಟದಲ್ಲಿ ವ್ಯವಸ್ಥಿತವಾಗಿ ಜಾರಿಗೊಳಿಸಿ, ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶಕ್ತಿಮೀರಿ ಪ್ರಯತ್ನಿಸಿ, ಕಾಂಗ್ರೆಸ್ ಪಕ್ಷದ ತತ್ವ, ಸಿದ್ದಾಂತವನ್ನು ಎತ್ತಿ ಹಿಡಿದು, ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಂತೆ ಸಂತೋಷ ಮೇಸ್ತ ಅವರಿಗೆ ನೀಡಿದ ಆದೇಶ ಪತ್ರದಲ್ಲಿ ತಿಳಿಸಲಾಗಿದೆ ಎಂದು ಹೊನ್ನಾವರ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.
Leave a Comment