• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹತ್ರಾಸ್ ದಲಿತ ಯುವತಿಯಮೇಲಿನ ಅತ್ಯಾಚಾರ ಖಂಡಿಸಿ ವಿವಿಧ ಸಂಘಟನೆಯ ಪ್ರಮುಖರಿಂದ ಮನವಿ

October 14, 2020 by Lakshmikant Gowda Leave a Comment

ಹೊನ್ನಾವರ – ಇತ್ತೀಚೆಗೆ ಉತ್ತರಪ್ರದೇಶದ ಹತ್ರಾಸ್‍ನಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ನಡೆದ ಹತ್ಯಾಚಾರ ಖಂಡಿಸಿ ಘಟನೆಯ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸುವಂತೆ ಆಗ್ರಹಿಸಿ ತಾಲೂಕಾ ಜನವಾದಿ ಮಹಿಳಾ ಸಂಘಟನೆ, ಸಿ.ಐ.ಟಿ.ಯು, ಡಿ.ವೈ.ಎಪ್.ಐ, ಎಸ್.ಎಪ್.ಐ ಸಂಘಟನೆಗಳು ಜಂಟಿಯಾಗಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

IMG 20201013 WA0038

ಉತ್ತರಪ್ರದೇಶದಲ್ಲಿ ಸಂಪ್ಟೆಬರ್ 14ರಂದು ನಾಗರಿಕ ಸಮಾಜ ನಾಚಿ ತಲೆತಗ್ಗಿಸಬೇಕಾದ ಘಟನೆ ನಡೆದಿದೆ. ಇಂತಹ ದುರ್ಘಟನೆ ನಡೆದರೂ ಪೆÇೀಲೀಸರು ಪ್ರಕರಣ ದಾಖಲಿಸಿಕೊಳ್ಳುಲು 4-5 ದಿನ ಕಾಲಹರಣ ನಡೆಸಿ ಪ್ರಕರಣದಲ್ಲಿ ಒತ್ತಡ ತೀವ್ರವಾದ ಮೇಲಷ್ಟೆ ಪ್ರಕರಣ ದಾಖಲಾಗಿದೆ. ಉತ್ತರಪ್ರದೇಶವೊಂದು ಗೂಂಡಾ ರಾಜ್ಯದಂತಾಗಿದ್ದು ಅಲ್ಲಿ ಕಾನೂನುಗಳಿಗೆ ಬೆಲೆಯೇ ಇಲ್ಲದ ಜಂಗಲ್ ರಾಜ್ಯವಾಗಿ ಮಾರ್ಪಟ್ಟಿದೆ. ತನಿಖೆ ನಡೆಸಿದ ಸಿ.ಬಿ.ಐ ಸ್ಥಳೀಯವಾಗಿ ಇಬ್ಬರು ಐ.ಪಿ.ಎಸ್ ಮತ್ತು ಒಬ್ಬರು ಐ.ಎ.ಎಸ್ ಅಧಿಕಾರಿಗಳ ಕರ್ತವ್ಯ ಲೋಪವನ್ನು ಎತ್ತಿ ತೋರಿಸಿ ಕ್ರಮಕ್ಕೆ ಸೂಚನೆ ನೀಡಿದ್ದರೂ ಅವರ ಮೇಲೆ ಸರಕಾರ ಯಾವ ಕ್ರಮವನ್ನೂ ತೆಗೆದುಕೊಂಡಿಲ್ಲ ಎಂದು ಸಂಘಟನೆಯ ಸದಸ್ಯರು ಆರೋಪಿಸಿದ್ದಾರೆ.

ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು. ಶವ ಸಂಸ್ಕಾರಕ್ಕೂ ಅವಕಾಶ ನೀಡದೆ ಮಧ್ಯರಾತ್ರಿಯಲ್ಲಿ ತಾವೇ ಚಿತೆಗೆ ಬೆಂಕಿ ಇಟ್ಟ ಪೆÇೀಲೀಸ್ ಮತ್ತು ಇತರ ಅಧಿಕಾರಿಗಳ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು. ಸರಿಯಾಗಿ ಪ್ರಕರಣ ದಾಖಲಿಸಿಕೊಳ್ಳದೇ ಕಾನೂನಿಗೆ ಅಪಚಾರ ಮಾಡಿದ ಸ್ಥಳೀಯ ಪೆÇೀಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಈ ಕೂಡಲೇ ಆರೋಪಿಗಳನ್ನು ಬಂಧಿಸಿ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.
ತಹಶೀಲ್ದಾರ ವಿವೇಕ ಶೇಣ್ವಿ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಿ.ಐಟಿಯು ಜಿಲ್ಲಾಧ್ಯಕ್ಷ ತಿಲಕ ಗೌಡ, ತಾಲೂಕ ಅಧ್ಯಕ್ಷ ತಿಮ್ಮಪ್ಪ ಗೌಡ, ಭಟ್ಕಳ ತಾಲೂಕ ಅಧ್ಯಕ್ಷ ಪುಂಡಲೀಕ ನಾಯ್ಕ, ಜನವಾದಿ ಮಹಿಳಾ ಸಂಘಟನೆಯ ಕಲ್ಯಾಣಿ ಗೌಡ, ಚಂದ್ರಕಲಾ ಪಟಗಾರ, ದೇವಿ ಗೌಡ, ಕಾವ್ಯ ಗೌಡ, ರೈತ ಸಂಘಟನೆಯ ಮಂಜುನಾಥ ಗೌಡ, ಅಣ್ಣಪ್ಪ ಗೌಡ ಹಾಜರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: .ಒತ್ತಡ ತೀವ್ರ, Jungle has become a state, There is no cost to laws, ಎಸ್.ಎಪ್.ಐ ಸಂಘಟನೆ, ಕಾನೂನುಗಳಿಗೆ ಬೆಲೆಯೇ ಇಲ್ಲ, ಜಂಗಲ್ ರಾಜ್ಯವಾಗಿ ಮಾರ್ಪಟ್ಟಿದೆ, ಜನವಾದಿ ಮಹಿಳಾ ಸಂಘಟನೆ, ಡಿ.ವೈ.ಎಪ್.ಐ, ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ, ಸಿ.ಐ.ಟಿ.ಯು

Explore More:

About Lakshmikant Gowda

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...