ಭಟ್ಕಳ: ಕಳೆದ 2016ರಲ್ಲಿ ಲಾರಿಯನ್ನು ಚಲಾಯಿಸಿಕೊಂಡು ಹೋಗುವಾಗ ಇಬ್ಬರು ಮಹಿಳೆಯರಿಗೆ ಅಪಘಾತ ಪಡಿಸಿ ಅವರ ಸಾವಿಗೆ ಕಾರಣನಾಗಿದ್ದ ಲಾರಿಯ ಚಾಲಕನನ್ನು ಇಲ್ಲಿನ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಧೀಶ ಆರ್. ನಾಗೇಂದ್ರ ಅವರು ದೋಷಮುಕ್ತ ಗೊಳಿಸಿ ತೀರ್ಪು ನೀಡಿದ್ದಾರೆ.
ಕಲೆದ ಜನವರಿ 2016ರಲ್ಲಿ ಚಿಕ್ಕಬಳ್ಳಾಪುರದ ಮಂಡಿಕಲ್ ನಿವಾಸಿಗಳು ಕುಟುಂಬ ಸಮೇತ ಪ್ರವಾಸಕ್ಕೆ ಬಂದಿದ್ದು ಭಟ್ಕಳದ ಶಂಶುದ್ಧೀನ್ ಸರ್ಕಲ್ ಹತ್ತಿರವಿರುವ ಪೆಟ್ರೋಲ್ ಬಂಕ್ ಹತ್ತಿರ ರಸ್ತೆ ದಾಟುತ್ತಿರುವಾಗ ಶಿರಾಲಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿಯಾಗಿ ದಾರಮ್ಮ ಮತ್ತು ಲಗ್ಮಕ್ಕ ಎನ್ನುವವರಿಗೆ ತೀವ್ರ ಗಾಯವಾಗಿ ಅವರು ಮೃತ ಪಟ್ಟಿದ್ದರು.
ಪೊಲೀಸರು ಲಾರಿ ಚಾಲಕನ ಅಜಾರೂಕತೆ ಮತ್ತು ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರಕರಣವನ್ನು ದಾಖಲಿಸಿಕೊಂಡು ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸುಧೀರ್ಘ ವಿಚಾಣೆಯ ನಂತರ ಆರೋಪಿಯ ವಿರುದ್ಧ ಆರೋಪವನ್ನು ಸಾಬೀತು ಪಡಿಸುವಲ್ಲಿ ವಿಫಲರಾಗಿದ್ದಾರೆ ಎನ್ನುವ ಆರೋಪಿ ಪರ ವಕೀಲ ಆರ್. ಆರ್. ಶ್ರೇಷ್ಟಿಯವರ ವಾದವನ್ನು ಎತ್ತಿ ಹಿಡಿದ ನ್ಯಾಯಾಧೀಶರು ಆರೋಪಿಯನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದ್ದಾರೆ.
Leave a Comment