ಹೊನ್ನಾವರ; ತಾಲೂಕಿನ ಮಹಿಮೆ ಗ್ರಾಮದ ಜಲಗಾರ ಮಂಜುನಾಥ ನಾರಾಯಣ ನಾಯ್ಕ(58) ತಮ್ಮದೇ ಮನೆಯ ತೋಟದಲ್ಲಿ ಅಡಿಕೆ ಮರದಿಂದ ಅಡಿಕೆ ಕೊಯ್ಲು ಮಾಡುವಾಗ ಆಯಾ ತಪ್ಪಿ ಅಡಿಕೆ ಮರದಿಂದ ಕೆಳಕ್ಕೆ ಬಿದ್ದಿದ್ದರು. ಕೂಡಲೇ ಚಿಕಿತ್ಸೆಗಾಗಿ ತಾಲೂಕ ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಕುರಿತು ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment