ಹೊನ್ನಾವರ: ವಿಧಾನ ಪರಿಷತ್ತಿಗೆ ೨೮ರಂದು ನಡೆಯುವ ಚುನಾವಣೆಯ ಹಿನ್ನಲೆಯಲ್ಲಿ ಪಶ್ಚಿಮ ಪದವಿದರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರು ಪಟ್ಟಣದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಮೋಹನ ಶೆಟ್ಟಿ ಪಿಯು ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಸ್.ಡಿಎಂ ಪದವಿ ಪ;ಊರ್ವ ಹಾಗೂ ಪದವಿ ಮಹಾವಿದ್ಯಾಲಯಕ್ಕೆ ತೆರಳಿ ಮತ ನೀಡುವಂತೆ ಪ್ರಚಾರ ನಡೆಸಿದರು. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿರುವುದರಿಂದ ಈ ಬಾರಿ ಪದವಿದರ ಕ್ಷೇತ್ರದ ಹಲವು ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದ್ದು, ಪುನಃ ೬ ವರ್ಷಗಳ ಕಾಲ ಆಯ್ಕೆ ಮಾಡಬೇಕೆಂದು ಕೇಳಿಕೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲಧ್ಯಕ್ಷ ರಾಜೇಶ ಭಂಡಾರಿ, ಮುಖಂಡರಾದ ಎಂ.ಜಿ.ನಾಯ್ಕ, ಲೋಕೇಶ ಮೇಸ್ತ, ಎಂ.ಎಸ್.ಹೆಗಡೆ ಕಣ್ಣಿ, ಪ್ರದೀಪ ಮೇಸ್ತ, ಸುರೇಶ ಖಾರ್ವಿ, ದತ್ತಾತ್ರೇಯ ಮೇಸ್ತ, ವಿಜಯ ಕಾಮತ್, ಸುರೇಶ ಹರಿಕಂತ್ರ, ಉಲ್ಲಾಸ ನಾಯ್ಕ ಉಪಸ್ಥಿತರಿದ್ದರು.
Leave a Comment