ಹೊನ್ನಾವರ: ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ಪಶ್ಚಿಮ ಪದವಿಧರ ಕ್ಷೇತ್ರದ ಚುನಾವಣಾ ಪ್ರಚಾರವನ್ನು ಉದ್ದೇಶಿಸಿ ಸಚೀವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ವಿಧಾನಪರಿಷತ್ತಿಗೆ ಪ್ರಥಮ ಬಾರಿ ಆಯ್ಕೆಯಾದ ಸಂದರ್ಭದಲ್ಲಿ ಶಿಕ್ಷಕರ ಸಮಸ್ಯೆ ಬಗ್ಗೆ ಸದನದ ಬಾವಿಗಿಳಿದು ಪ್ರತಿಭಟನೆ ಮೂಲಕ ನ್ಯಾಯ ಒದಗಿಸಿದಂತಹ ಹೋರಾಟಗಾರರನ್ನು ಮತ್ತೊಮ್ಮೆ ಆಯ್ಕೆ ಮಾಡಬೇಕಿದೆ.
ತಾನು ಆಯ್ಕೆಯಾದ ಕ್ಷೇತ್ರಕ್ಕೆ ನ್ಯಾಯ ಒದಗಿಸಿದಂತಹ ಸಂಕನೂರು ಮತ್ತೊಮ್ಮೆ ನಮ್ಮ ಪಕ್ಷದ ಚಿಹ್ನೆಯಡಿಯಲ್ಲಿ ಸ್ಪರ್ಧೆ ಮಾಡುತ್ತಿದ್ದು ಪಕ್ಷದ ಕಾರ್ಯಕರ್ತರ ಶ್ರಮದಿಂದ ಮತ್ತೊಮ್ಮೆ ಅತಿ ಹೆಚ್ಚಿನ ಮತಗಳ ಅಂತರದಿಂದ ಆಯ್ಕೆಯಾಗುವ ವಿಶ್ವಾಸವಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿರುದರಿಂದ ಪದವಿಧರರ ಸಮಸ್ಯೆ ಬಗೆಹರಿಸಲು ಇನ್ನು ಹೆಚ್ಚಿನ ಸೌಲಭ್ಯ ಕ್ಷೇತ್ರಕ್ಕೆ ತರಲು ಮತ್ತೊಮ್ಮೆ ಆಯ್ಕೆಯಾಗಲು ಎಲ್ಲರೂ ಬೆಂಬಲಿಸುವಂತೆ ಮನವಿ ಮಾಡಿದರು.
ಶಾಸಕ ದಿನಕರ ಶೆಟ್ಟಿ ಮಾತನಾಡಿ ಸರಳ ಸಜ್ಜನಿಕೆಯಿಂದ ಕೂಡಿರುವ ಎಸ್.ವಿ.ಸಂಕನೂರ ನಮ್ಮ ಪಕ್ಷದ ಅಭ್ಯರ್ಥಿಯಾಗಿದ್ದು, ಈ ಹಿಂದೆ ಪಕ್ಷ ಅಧಿಕಾರ ಇಲ್ಲದಿದ್ದರೂ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಇನ್ನೂ ಹೆಚ್ಚಿನ ಕೆಲಸ ನಿರ್ವಹಿಸಲು ಮತ್ತೊಮ್ಮೆ ಆಯ್ಕೆ ಮಾಡಬೇಕಿದೆ. ಹೊನ್ನಾವರದವರು ಬಿಜೆಪಿಗೆ ಸದಾ ಬೆಂಬಲಿಸುತ್ತಿದ್ದು, ಈ ಬಾರಿ ಪದವಿಧರರು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಈಗಾಗಲೇ ಎಲ್ಲಮತದಾರರನ್ನು ಭೇಟಿ ಮಾಡಿದ್ದು, ಅತಿ ಹೆಚ್ಚಿನ ಸಂಖ್ಯೆಯ ಮತಗಳು ನಮ್ಮ ಪಕ್ಷಕ್ಕೆ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಬಿಜೆಪಿ ತಾಲೂಕ ಅಧ್ಯಕ್ಷ ರಾಜೇಶ ಭಂಡಾರಿ, ಮುಖಂಡರಾದ ಶಿವಾನಿ ಶಾಂತರಾಮ, ಎಂ.ಜಿ.ನಾಯ್ಕ, ಉಮೇಶ ನಾಯ್ಕ, ಸುಬ್ರಾಯ ನಾಯ್ಕ, ಮಂಜುನಾಥ ನಾಯ್ಕ, ಸುರೇಶ ಹರಿಕಂತ್ರ, ಗಣಪತಿ ನಾಯ್ಕ ಬಿಟಿ ಸೇರಿದಂತೆ ಪಟ್ಟಣ ಪಂಚಾಯತ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
Leave a Comment