ಭಟ್ಕಳ: ತಾಲೂಕಿನಲ್ಲಿ ಕಳ್ಳರ ಹಾವಳಿ ಮಿತಿ ಮೀರಿದ್ದು ಹಲವು ಕಡೆಗಳಲ್ಲಿ ಕಳ್ಳತನವಾದ ಪ್ರಕರಣ ಬೆಳಕಿಗೆ ಬಂದಿದೆ.
ನಗರದ ಕಿದ್ವಾಯಿ ರೋಡ್ ಹಾಗೂ ಹೆಬಳೆ ಫೀರದೋಸ ನಗರದಲ್ಲಿ ಕ್ಳತನವಾದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಕಿದ್ವಾಯಿ ರೋಡಿನ ಮಸೀದಿ ಸಮೀಪ ಅದ್ನಾನ್ ರುಕ್ನುದ್ದೀನ ಎಂಬುವವರ ಮನೆಯ ಬಚ್ಚಲು ಮನೆಯ ಕಿಡಿಕಿ ಒಡೆದು ಒಳ ಪ್ರವೇಶಿಸಿದ ಕಳ್ಳರು 1 ಲಕ್ಷ ರೂ ನಗದು ಹಣವನ್ನು ಕದ್ದೊಯ್ದಿದ್ದಾರೆ. ಮನೆಯಲ್ಲಿ ಯಾರೂ ಇರದ ಸಮಯದಲ್ಲಿ ಈ ಕಳ್ಳತನ ನಡೆದಿದ್ದು ಮನೆಯ ಮಾಲಕನು ತನ್ನ ಅಂಗಡಿಯಲ್ಲಿ ವ್ಯಾಪಾರವಾಗಿದ್ದ ಹಣವನ್ನು ಮನೆಯಲ್ಲಿ ಇಟ್ಟಿದ್ದು ಮನೆಯ ಸದಸ್ಯರು ಮನೆಯಿಂದ ಹೊರಗಡೆ ಹೋಗಿದ್ದಾಗ ಈ ಘಟನೆ ನಡೆದಿದೆ.
ಅದರಂತೆ ತಾಲೂಕಿನ ಹೆಬಳೆಯ ಫೀರದೋಸ ನಗರದ ಸೈಯದ್ ಇಬ್ರಾಹಿಂ ಎಂಬುವರ ಮನೆಯಲ್ಲಿ ಯಾರೂ ಇರದ ಸಮಯದಲ್ಲಿ ಮನೆಗೆ ನುಗ್ಗಿದ ಕಳ್ಳರು 30 ಸಾವಿರ ರೂ ಹಣ ಕದ್ದು ಪರಾರಿಯಾಗಿದ್ದಾರೆ. ಈ ಸಂಭಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ,
Leave a Comment