• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಚತುಷ್ಪಥವೇನೋ ಸಿದ್ಧವಾಯಿತು..ಶಾಲೆಯ ಮಕ್ಕಳ ಕಾರಿಡಾರ್ ಸಮಸ್ಯೆಗೆ ಪರಿಹಾರ ಕಲ್ಪಿಸುವುದು ಯಾವಾಗ..?

October 28, 2020 by Lakshmikant Gowda Leave a Comment

ತಾಲೂಕಿನ ಕೆಳಗಿನೂರು ಗ್ರಾಮದ ಅಭಿತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಜಗಾರ ಅಭಿತೋಟ, ಹೊಳ್ಳಾಕುಳಿ ಭಾಗದ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಮಕ್ಕಳೇ ಹೆಚ್ಚಾಗಿ ಓದುತ್ತಿದ್ದಾರೆ. ಈ ಭಾಗದಲ್ಲಿ ಹಾದು ಹೋದ ರಾಷ್ಟ್ರೀಯ ಹೆದ್ದಾರಿ 66 ಚತುಷ್ಪಥವಾಗಿ ಬದಲಾದ ನಂತರ ಊರಿನ ಮಕ್ಕಳು ರಸ್ತೆ ದಾಟಿ ಶಾಲೆಗೆ ಹೋಗುವುದೇ ದುಸ್ತರವಾಗಿ ಪರಿಣಮಿಸಿದೆ. ಹೆದ್ದಾರಿಯ ಒಂದು ಅಂಚಿಗೆ ಗುಡ್ಡದ ಭಾಗದಲ್ಲಿ ಶಾಲೆಯಿದ್ದರೆ ಇನ್ನೊಂದ ಭಾಗದಲ್ಲಿರುವ ಊರುಗಳಿಂದ ವಿದ್ಯಾರ್ಥಿಗಳು ಬರುತ್ತಾರೆ.

watermarked 03 27


ಚತುಷ್ಪಥವಾಗುವ ಪೂರ್ವದಿಂದಲೂ ಈ ಸಮಸ್ಯೆ ಇತ್ತಾದರೂ ರಸ್ತೆ ಹೆಚ್ಚು ಅಗಲವಾಗಿಲ್ಲದ ಕಾರಣ ವಾಹನ ಓಡಾಟವಿಲ್ಲದ ಸಮಯ ನೋಡಿ ರಸ್ತೆ ದಾಟುತ್ತಿದ್ದರು. ಆದರೆ ಈಗ ರಸ್ತೆ 40 ಮೀಟರ್ ಅಗಲವಾಗಿದ್ದು ಒಂದು ಕಡೆಯಿಂದ ಇನ್ನೊಂದು ಕಡೆ ಹೋಗುವಷ್ಟರಲ್ಲಿ ವಾಹನ ಬರುತ್ತದೆ. ಅಪಘಾತ ಸಾಧ್ಯತೆ ಅಧಿಕವಾಗಿದ್ದು ಶಾಲೆಗೆ ಮಕ್ಕಳನ್ನು ಕಳುಹಿಸುವುದಕ್ಕೇ ಪಾಲಕರು ಯೋಚಿಸುವ ಸ್ಥಿತಿ ನಿರ್ಮಾಣವಾಗಿದೆ.
ಈ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯವರು, ಗ್ರಾಮಸ್ಥರು ಶಿಕ್ಷಕರು ವಿದ್ಯಾರ್ಥಿಗಳ ಓಡಾಟಕ್ಕೆ ಅನುಕೂಲವಾಗುವಂತೆ ಮೇಲ್ಸೇತುವೆ ನಿರ್ಮಿಸಿಕೊಡಿ ಎಂದು ಹಲವು ಬಾರಿ ಐ.ಆರ್.ಬಿಗೆ ಮನವಿ ಮಾಡಿಕೊಂಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅನಾಹುತ ಸಂಭವಿಸಿದಾಗ ಸಾಂತ್ವನ ಹೇಳಲು, ಪರಿಹಾರ ನೀಡಲು ಮುಂದೆ ಬರುವ ಜನಪ್ರತಿನಿಧಿಗಳು, ಅಧಿಕಾರಿಗಳು ಮೊದಲೇ ಎಚ್ಚುತ್ತುಕೊಂಡು ಐ.ಆರ್.ಬಿ ಕಂಪನಿಯವರಿಗೆ ತಾಕೀತು ಮಾಡಿ ತಕ್ಷಣ ಇಲ್ಲಿ ಮೇಲ್ಸೇತುವ ನಿರ್ಮಿಸಿಕೊಡುವ ಕೆಲಸ ಮಾಡಬೇಕಿದೆ.

watermarked IMG 20201027 WA0016 1

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News, Trending Tagged With: border collision, children from the village, quadrupled east problem, the vehicle comes. Accident risk, To facilitate student travel, vehicular traffic, ಅಂಚಿಗೆ ಗುಡ್ಡದ ಭಾಗ, ಅಭಿತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಊರಿನ ಮಕ್ಕಳು ರಸ್ತೆ ದಾಟಿ ಶಾಲೆ, ಕೆಳಗಿನೂರು ಗ್ರಾಮ, ಚತುಷ್ಪಥವಾಗುವ ಪೂರ್ವದಿಂದಲೂ ಈ ಸಮಸ್ಯೆ, ವಾಹನ ಓಡಾಟ, ವಾಹನ ಬರುತ್ತದೆ. ಅಪಘಾತ ಸಾಧ್ಯತೆ, ವಿದ್ಯಾರ್ಥಿಗಳ ಓಡಾಟಕ್ಕೆ ಅನುಕೂಲ, ಹಿಂದುಳಿದ ಕುಟುಂಬದ ಮಕ್ಕಳೇ

Explore More:

About Lakshmikant Gowda

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...