ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ರಾಜ್ಯ ಸರಕಾರವು ಕೊಡುವ ರಾಜ್ಯೋತ್ಸವ ಪ್ರಶಸ್ತಿಗೆ ಯಲ್ಲಾಪುರ ತಾಲೂಕಿನ ಎನ್.ಎಸ್.ಹೆಗಡೆ ಕುಂದರಗಿ ಅವರು ಆಯ್ಕೆಯಾಗಿರುವುದು ಜಿಲ್ಲೆಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.
ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಎನ್.ಎಸ್.ಹೆಗಡೆ ಶಿಕ್ಷಣ ಕ್ಷೇತ್ರ, ಸಹಕಾರಿ, ಧಾರ್ಮಿಕ ಕ್ಷೇತ್ರ ಹಾಗೂ ಇನ್ನಿತರ ಹಲವಾರು ಕ್ಷೇತ್ರಗಳಲ್ಲಿ ತಮ್ಮದೆ ಆದ ಸೇವೆಯನ್ನು ನೀಡುತ್ತಾ ಬಂದಿದ್ದಾರೆ.
ಸಮಾಜದ ಸರ್ವತೋಮುಖ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿ, ಜಿಲ್ಲೆಯ ರೈತರ ಕಷ್ಟಗಳಿಗೆ ಹೆಗಲಾದ ಕುಂದರಗಿ ಅವರ ಸಮಾಜ ಸೇವೆಯನ್ನು ಪರಿಗಣಿಸಿ ಈ ಬಾರಿ ಕೊಡುವ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಲಿದ್ದಾರೆ. *
Leave a Comment