ಕುಮಟಾ: ಸಾರ್ವಜನಿಕರ ಬೇಡಿಕೆಯ ಮೇರೆಗೆ ಮಣಿಪಾಲ ಆರೋಗ್ಯ ಕಾರ್ಡ್ ನೋಂದಾವಣಿಯನ್ನು ನವೆಂಬರ್ 30 ವರೆಗೆ ವಿಸ್ತರಿಸಲಾಗಿದೆ ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಉಪ ವ್ಯವಸ್ಥಾಪಕ ಮೋಹನ ಶೆಟ್ಟಿ ಮಾಹಿತಿ ನೀಡಿದರು.
ಅವರು ಶನಿವಾರ ಪಟ್ಟಣದ ಮಿಲಾಗ್ರಿಸ್ ಬ್ಯಾಂಕ್ನಲ್ಲಿ ಸುದ್ದಿಗೋಷ್ಟಿ ನಡೆಸಿ, ಮಾತನಾಡಿ, 20 ನೆಯ ವರ್ಷದ ಅಂಗವಾಗಿ, ಕಾರ್ಡುಗಳನ್ನು ಸುಲಭವಾಗಿ ನೋಂದಾಯಿಸಲು ಸರಳ ಹಾಗೂ ಪೂರ್ವ ಸಂಖ್ಯಾ ಮುದ್ರಿತ ಕಾರ್ಡ್ನ್ನು ಪರಿಚಯಿಸಲಾಗುತ್ತಿದೆ.
ಸಂಖ್ಯಾ ಮುದ್ರಿತ ಸ್ಮಾರ್ಟ್ ಕಾರ್ಡನ್ನು ಕಾರ್ಡುದಾರರಿಗೆ ಸ್ಥಳದಲ್ಲಿಯೇ ನೀಡಲಾಗುತ್ತದೆ. ಸದಸ್ಯತ್ವ ಶುಲ್ಕಕ್ಕಾಗಿ ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರೂ ಬೇಕಾದರೂ ಸದಸ್ಯತ್ವವನ್ನು ಪಡೆಯಬಹುದು. ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಯಲ್ಲಿ ರಿಯಾಯಿತಿ ರೂಪದಲ್ಲಿ ಅವರ ಹೂಡಿಕೆಯನ್ನು ಸುಲಭವಾಗಿ ಮರಳಿ ಪಡೆಯಬಹುದಾಗಿದೆ ಎಂದರು.
20 ನೆಯ ವರ್ಷದ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯು ಒಂದು ವರ್ಷ ಮತ್ತು ಎರಡು ವರ್ಷದ ಯೋಜನೆಯ ಜೊತೆಗೆ ಕಟೀಲು ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆಯನ್ನು ನೆಕವರ್ಕ್ ಆಸ್ಪತ್ರೆಗಳಲ್ಲಿ ಸೇರ್ಪಡೆಗೊಳಿಸಲಾಗಿದೆ. ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಮಣಿಪಾಲ, ಉಡುಪಿ, ಕಾರ್ಕಳ, ಮಂಗಳೂರು, ಗೋವಾ ಮತ್ತು ಕಟೀಲಿನಲ್ಲಿರುವ ಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ದಂತ ಸೇವೆಗಳ ಪ್ರಯೋಜನಗಳನ್ನು ಪಡೆಯಬಹುದಾಗಿದೆ ಎಂದ ಅವರು, ಕಾರ್ಡಿನ ಸದಸ್ಯತ್ವವು ಒಬ್ಬರಿಗೆ 250 ರೂ, ಕುಟುಂಬಕ್ಕೆ ಅಂದರೆ ಕಾರ್ಡುದಾರ, ಅವರ ಪತ್ನಿ, 25 ವರ್ಷದ ಪಳಗಿನ ಮಕ್ಕಳಿಗೆ 500 ರೂ. ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಪತ್ನಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರಿಗೆ ( ತಂದೆ, ತಾಯಿ,ಅತ್ತೆ ಮತ್ತು ಮಾವ) 650 ರೂ., 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ 400 ರೂ, ಕುಟುಂಬಕ್ಕೆ 700 ರೂಪಾಯಿ ಮತ್ತು ಕುಟುಂಬ ಪ್ಲಸ್ ಯೋಜನೆಗೆ 850 ರೂಪಾಯಿ ನಿಗದಿಗೊಳಿಸಲಾಗಿದೆ ಎಂದ ಅವರು, ಮಣಿಪಾಲ ಆರೋಗ್ಯ ಕಾರ್ಡ್ನ್ನು ಒಂದು ವರ್ಷ ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು ಎಂದು ಹೇಳಿದರು.
ಮಣಿಪಾಲ ಆರೋಗ್ಯ ಕಾರ್ಡುದಾರರಿಗೆ ವೈದ್ಯಕೀಯ ಸಮಾಲೋಚನೆಗೆ ಶೇ.50 ರಷ್ಟು, ಪ್ರಯೋಗಾಲಯ ಪರೀಕ್ಷೆಗೆ ಶೆ.30 ರಷ್ಟು, ಸಾಮಾನ್ಯ ವಾರ್ಡಿನಲ್ಲಿ ಒಳವಿಭಾಗದ ರೋಗಿಯಾದಲ್ಲಿ ಶೇ.25, ಸಿ.ಟಿ.ಎಂ.ಆರ್.ಐ, ಅಲ್ಟ್ರಾಸೌಂಡ್ಗೆ ಶೇ.20 ರಷ್ಟು, ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ತಪಾಸಣೆಯಲ್ಲಿ ಶೇ.20 ರಷ್ಟು, ಜೌಷಧಾಲಯಗಳಲ್ಲಿ ಶೇ.12 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಮಣಿಪಾಲ ಆರೋಗ್ಯ ಕಾರ್ಡು ಕುಮಟಾದ ಸೈಂಟ್ ಮಿಲಾಗ್ರಿಸ್ ಸೌಹಾರ್ದ (9538894589), ಹೊಸ ಬಸ್ ನಿಲ್ದಾಣ ಸಮೀಪ (9606007566), ಚಂದಾವರ (9538200604), ಹಳದೀಪುರ (9606013140), ಅರುಣ ಗುನಗಾ (9448012077, ವಿಶ್ವನಾಥ (9742819071) ಸೈಂಟ್ ಮಿಲಾಗ್ರಿಸ್ ಸೌಹಾರ್ದದ ಎಲ್ಲ ಶಾಖೆಗಳಲ್ಲಿ ನೋಂದಾವಣಿ ಮಾಡಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾರುಕಟ್ಟೆ ವಿಭಾಗದ ಪ್ರತಿನಿಧಿ ರಾಜೇಂದ್ರ ನಾಯ್ಕ, ಸೈಂಟ್ ಮಿಲಾಗ್ರಿಸ್ ಸೌಹಾರ್ದದ ಕುಮಟಾ ಶಾಖೆಯ ವ್ಯವಸ್ಥಾಪಕ ರೋಹಿತ್, ಅಭಿವೃದ್ಧಿ ಅಧಿಕಾರಿ ಗಣೇಶ, ಮಣಿಪಾಲ ಆರೋಗ್ಯ ಕಾರ್ಡ್ ಪ್ರತಿನಿಧಿ ಅರುಣ ಗುನಗಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Leave a Comment