ಯಲ್ಲಾಪುರ:
ತಾಲೂಕಿನ ತೂಕದಬೈಲ್ ಸಮೀಪದ ಅಪ್ಪಿಕೋಡಿಯಲ್ಲಿ ಗುರುವಾರ ವ್ಯಕ್ತಿಯೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ವಸಂತ ತಮ್ಮಾ ಕುಣಬಿ(45) ಎಂದು ಗುರುತಿಸಲಾಗಿದೆ. ವಿಪರೀತ ಕುಡಿಯುವ ಚಟ ಹೊಂದಿದ ಈತ ಸರಿಯಾಗಿ ಕೆಲಸಕ್ಕೆ ಹೋಗದೇ ತಿರುಗುತ್ತಿದ್ದ ಎನ್ನಲಾಗಿದೆ. ಇದಕ್ಕೆ ಕುಟುಂಬದವರು ಕುಡಿತ ಬಿಡುವಂತೆ ಬುದ್ಧಿ ಹೇಳಿದ್ದನ್ನು ಮನಸ್ಸಿಗೆ ಹಚ್ಚಿಕೊಂಡು ಮನೆಯ ಸಮೀಪದ ಕಾಡಿನಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment