ಹೊನ್ನಾವರ: ಎಂ.ಪಿ.ಇ ಸೊಸೈಟಿ ನಡೆಸುತ್ತಿರುವ ಸಮೂಹ ವಿದ್ಯಾಸಂಸ್ಥೆಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಪ್ರತಿಭೋತ್ಸವ ಕಾರ್ಯಕ್ರಮ ನ.9ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷರು ಮಾಜಿ ಶಾಸಕ ಎಂ.ಪಿ.ಕರ್ಕಿ ಮಾಧ್ಯಮಗೊಷ್ಟಿಯಲ್ಲಿ ಮಾಹಿತಿ ನೀಡಿದರು.
ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಿಕ್ಷಣ ಸೌಲಭ್ಯ ಕಲ್ಪಿಸಲು ಆರ್ಥಿಕ ನೆರವು ನೀಡುವ ಉದ್ದೇಶದೊಂದಿಗೆ ಎಂ.ಪಿ.ಇ.ಸೊಸೈಟಿಯ ವತಿಯಿಂದ ಸ್ಥಾಪಿಸಲಾಗುವ ವಿದ್ಯಾ ಸಂಜೀವಿನಿ ನಿಧಿ ಲೋಗೋದ ಅನಾವರಣ ಕೂಡ ಇದೇ ಸಂದರ್ಭದಲ್ಲಿ ನಡೆಯಲಿದ್ದು 55ನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಸಂಸ್ಥೆಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಶಿಕ್ಷಣ ಪಡೆದಿದ್ದಾರೆ.ಪದವಿ,ಪದವಿ ಪೂರ್ವ,ಸಿಬಿಎಸ್ಇ ಪಠ್ಯಕ್ರಮದ ಕೇಂದ್ರೀಯ ವಿದ್ಯಾಲಯ ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ ಪ್ರಸ್ತುತ 2500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಪುರಸ್ಕರಿಸುವ ಮೂಲಕ ಸಾಧನೆ ಮಾಡಲು ಉಳಿದ ವಿದ್ಯಾರ್ಥಿಗಳಿಗೂ ಸ್ಪೂರ್ತಿ ನೀಡುವ ಉದ್ದೇಶದೊಂದಿಗೆ ಪ್ರತಿಭೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಅವರು ಹೇಳಿದರು.
ಸಂಸ್ಥೆಯ ಉಪಾಧ್ಯಕ್ಷ ಕೃಷ್ಣಮೂರ್ತಿ ಭಟ್ ಶಿವಾನಿ ಮಾತನಾಡಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಪದವಿ ಕಾಲೇಜಿನ 8 ವಿದ್ಯಾರ್ಥಿಗಳು ವಿಶ್ವದ್ಯಾಲಯಕ್ಕೆ ರ್ಯಾಂಕ್ ಪಡೆದಿದ್ದಾರೆ .ದ್ವಿತೀಯ ಪಿಯು ಪರೀಕ್ಷೆಯಲ್ಲಿ 2 ವಿದ್ಯಾರ್ಥಿಗಳು ರಾಜ್ಯದ ರ್ಯಾಂಕ್ ಪಟ್ಟಿಯಲ್ಲಿದ್ದಾರೆ. ಕೇಂದ್ರೀಯ ವಿದ್ಯಾಲಯದ 4 ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ. ಕ್ರೀಡೆ,ಸಾಂಸ್ಕøತಿಕ ಚಟುವಟಿಕೆಗಳು,ಎನ್ಸಿಸಿಯಲ್ಲಿ ವಿದ್ಯಾರ್ಥಿಗಳು ವಿಶ್ವವಿದ್ಯಾಲಯ,ಅಂತರ್ ಕಾಲೇಜು, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕಾಲೇಜಿಗೆ ಕೀರ್ತಿ ತಂದಿದ್ದು ಒಟ್ಟೂ 38 ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುವುದು’ ಎಂದು ಅವರು ತಿಳಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಪ್ರಸ್ತುತ ವರ್ಷ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಆಚರಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮವನ್ನು ಸಂಸ್ಥೆಯ ಹಬ್ಬದ ರೀತಿಯಲ್ಲಿ ನಡೆಸಲಾಗುವುದು.
ವಿದ್ಯಾ ಸಂಜೀವಿನಿ ವಿದ್ಯಾರ್ಥಿ ಕಲ್ಯಾಣ ನಿಧಿಯ ಮೂಲಕ ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ನೆರವು ನೀಡುವ ಉದ್ದೇಶ ಹೊಂದಲಾಗಿದ್ದು ಸಮಾಜದ ಹಿತದೃಷ್ಟಿಯಿಂದ ಸಂಸ್ಥೆ ಹಮ್ಮಿಕೊಳ್ಳುವ ಎಲ್ಲ ಯೋಜನೆ ಹಾಗೂ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು’ ಎಂದು ಅವರು ಮನವಿ ಮಾಡಿದರು.
ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಸ್ನಾತಕೊತ್ತರ ಕೊರ್ಸಗಳವರೆಗಿನ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಒದಗಿಸುವ ದೃಷ್ಟಿಯಿಂದ ಎಂಪಿಇಇಡಿ ಯುಟೂಬ್ ಚಾನೆಲ್ ಆರಂಭಗೊಂಡಿದ್ದು ಈಗಾಗಲೇ 2ಲಕ್ಷಕ್ಕೂ ಅಧಿಕ ಮಂದಿ ವಿಕ್ಷಿಸಿದ್ದಾರೆ. ಇದು ಶುಲ್ಕ ರಹಿತವಾಗಿದ್ದು ಯಾವುದೇ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿದ್ದರೂ ಇದರ ಪ್ರಯೋಜನ ಪಡೆಯಬಹುದು.
ಶಾಸಕ ದಿನಕರ ಕೆ.ಶೆಟ್ಟಿ ಪ್ರತಿಭೋತ್ಸವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು ಶಾಸಕ ಸುನೀಲ ಬಿ.ನಾಯ್ಕ ವಿದ್ಯಾ ಸಂಜೀವಿನಿ ನಿಧಿಯ ಲೋಗೋ ಅನಾವರಣಗೊಳಿಸುವರು.ಡಾ.ಎಂ.ಪಿ.ಕರ್ಕಿ ಸಭೆಯ ಅಧ್ಯಕ್ಷತೆ ವಹಿಸುವರು’ ಎಂದು ಅವರು ತಿಳಿಸಿದರು.
ಎಂಪಿಇ ಸೊಸೈಟಿಯ ಕಾರ್ಯದರ್ಶಿ ಎಸ್.ಎಂ.ಭಟ್ಟ,ಖಜಾಂಚಿ ಉಮೇಶ ನಾಯ್ಕ,ಜಂಟಿ ಕಾರ್ಯದರ್ಶಿ ಪ್ರೊ.ಜಿ.ಪಿ.ಹೆಗಡೆ,ಸದಸ್ಯ ನಾಗರಾಜ ಕಾಮತ,ಪದವಿ ಕಾಲೇಜಿನ ಪ್ರಾಚಾರ್ಯರಾದ ಡಾ.ವಿಜಯಲಕ್ಷ್ಮಿ ಎಂ.ನಾಯ್ಕ,ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಂ.ಎಚ್.ಭಟ್ಟ,ಸೆಂಟ್ರಲ್ ಸ್ಕೂಲ್ನ ಮುಖ್ಯ ಶಿಕ್ಷಕಿ ಕಾಂತಿ ಭಟ್ಟ,ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಎಂ.ಆರ್.ನಾಯಕ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Leave a Comment