• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗ್ರಾಹಕರು ನೀಡಿದ ಆಭರಣ ಯಾವುದಾದರೂ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ್ದಾಗಿದ್ದರೆ ಬ್ಯಾಂಕ್, ಸಹಕಾರಿ ಸಂಸ್ಥೆಗಳ ಸಿಬ್ಬಂದಿ ವಿರುದ್ಧವೂ ಕ್ರಮ;ಸಿಪಿಐ ಸುರೇಶ ಯಳ್ಳೂರ

November 8, 2020 by Shridhar Vaidika Leave a Comment

ಯಲ್ಲಾಪುರ:
ಯಾರಾದರೂ ಬಂಗಾರ, ಆಭರಣ ಅಡವಿಡಲು, ಮಾರಾಟ ಮಾಡಲು ಬಂದರೆ ಅವರ ಕುರಿತು ಸರಿಯಾದ ಮಾಹಿತಿ ಇಲ್ಲದೇ ಹಣ ನೀಡಬಾರದು. ಒಂದು ವೇಳೆ ಪರಿಶೀಲನೆ ಮಾಡದೇ ಹಣ ನೀಡಿದಲ್ಲಿ, ಗ್ರಾಹಕರು ನೀಡಿದ ಆಭರಣ ಯಾವುದಾದರೂ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ್ದಾಗಿದ್ದರೆ ಬ್ಯಾಂಕ್, ಸಹಕಾರಿ ಸಂಸ್ಥೆಗಳ ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಐ ಸುರೇಶ ಯಳ್ಳೂರ ಹೇಳಿದರು.

police


ಅವರು ತಾ.ಪಂ ಸಭಾಭವನದಲ್ಲಿ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ತಾಲೂಕಿನ ಸಹಕಾರಿ ಸಂಘಗಳು ಹಾಗೂ ಬ್ಯಾಂಕ್‍ಗಳ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಮ್ಮ ಸಂಸ್ಥೆ, ಎಟಿಎಂಗಳ ಎದುರು 24 ತಾಸು ಕಾರ್ಯನಿರ್ವಹಿಸುವ ಉತ್ತಮ ಗುಣಮಟ್ಟದ ಸಿಸಿ ಕ್ಯಾಮರಾ ಅಳವಡಿಸಬೇಕು. ಸೆಕ್ಯುರಿಟಿ ಗಾರ್ಡ್ ನೇಮಿಸಿಕೊಳ್ಳಬೇಕು. ಸುಭದ್ರ ಸ್ಟ್ರಾಂಗ್ ರೂಂ ಲಾಕರ್, ಬಾಗಿಲು ಅಳವಡಿಸುವುದು, ಅಲ್ಲಿಯೂ ಕ್ಯಾಮರಾ ಅಳವಡಿಸಬೇಕು. ಉನ್ನತ ಗುಣಮಟ್ಟದ ಮೋಷನ್ ಡಿಟೆಕ್ಷನ್ ಕ್ಯಾಮರಾ ಅಳವಡಿಸಬೇಕು. ಡಿವಿಆರ್ ಮತ್ತು ಎನ್‍ವಿಆರ್‍ಗಳು ಕಳ್ಳರಿಗೆ ಕಾಣದಂತೆ ಇಡಬೇಕು. ವ್ಯವಹಾರಕ್ಕಾಗಿ ಬರುವ ಗ್ರಾಹಕರ ಸ್ಪಷ್ಟ ಮಾಹಿತಿ ದಾಖಲಿಸಿಕೊಳ್ಳಬೇಕು. ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಇಲಾಖೆಗೆ ಮಾಹಿತಿ ನೀಡಬೇಕೆಂದರು. ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಹಕಾರಿ ಸಂಘಗಳು, ಬ್ಯಾಂಕ್‍ಗಳು ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಿಕೊಳ್ಳುವ ಅಗತ್ಯತೆಯಿದೆ ಎಂದು ಎಚ್ಚರಿಸಿದರು.
ಯುಕೆ ಸೌಹಾರ್ದ ಸಹಕಾರಿಯ ಅಧ್ಯಕ್ಷ ಪ್ರಮೋದ ಹೆಗಡೆ, ಹಿತ್ಲಳ್ಳಿಯ ಎಲ್‍ಎಸ್‍ಎಂಪಿ ಸೊಸೈಟಿ ಅಧ್ಯಕ್ಷ ಡಿ. ಟಿ. ಹೆಗಡೆ, ಮಾವಿನಮನೆ ಸಹಕಾರಿ ಸಂಘದ ಅಧ್ಯಕ್ಷ ಸುಬ್ಬಣ್ಣ ಬೋಳ್ಮನೆ, ಮರ್ಚಂಟ್ ಕೊ ಆರೇಟಿವ್‍ನ ಮುಖ್ಯಕಾರ್ಯನಿರ್ವಾಹಕ ನಾಗರಾಜ ಮದ್ಗುಣಿ, ಶ್ರೀಮಾತಾ ವಿವಿಧೋದ್ದೇಶಗಳ ಸೌಹಾರ್ದ ಸಹಕಾರಿಯ ಶಾಖಾ ವ್ಯವಸ್ಥಾಪಕ ಸಿ. ಎಸ್. ಪತ್ರೆಕರ್, ನಿರ್ದೇಶಕ ಕೆ. ಎಸ್. ಭಟ್ಟ ಆನಗೋಡ, ಕುಂದರಗಿ ಸೇವಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಾಹಕ ನರೇಂದ್ರ ಭಟ್ಟ, ಆನಗೋಡ ಸೇವಾ ಸಹಕಾರಿ ಸಂಘದ ಸುಬ್ರಾಹ ಹೆಗಡೆ ಮಳಗಿಮನೆ, ಎಲ್‍ಎಸ್‍ಎಂಪಿ ಸೊಸೈಟಿ ಮುಖ್ಯಕಾರ್ಯನಿರ್ವಾಹಕ ಎಂ. ಎಸ್. ಹೆಗಡೆ ಸೇರಿದಂತೆ ವಿವಿಧ ಸಹಕಾರಿ ಸಂಘಗಳು ಹಾಗೂ ಬ್ಯಾಂಕ್‍ಗಳ ಪ್ರಮುಖರು ಭಾಗವಹಿಸಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Yellapur Tagged With: ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ್ದಾಗಿದ್ದರೆ, ಉತ್ತಮ ಗುಣಮಟ್ಟದ ಸಿಸಿ ಕ್ಯಾಮರಾ, ಗ್ರಾಹಕರು ನೀಡಿದ ಆಭರಣ, ಬ್ಯಾಂಕ್, ಸಹಕಾರಿ ಸಂಸ್ಥೆ

Explore More:

About Shridhar Vaidika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...