ಹೊನ್ನಾವರ – ತಾಲೂಕಿನ ಹಳದಿಪುರ ಬಳಿ ಬಡಗಣಿ ಹೊಳೆಯಲ್ಲಿ ಹಾಸನ ಮೂಲದ ಯುವಕನೊಬ್ಬನ ಶವ ಪತ್ತೆಯಾಗಿದೆ.
ಮೃತ ದುರ್ದೈವಿಯನ್ನು ಹಾಸನ ಜಿಲ್ಲೆಯ ಅರಸೀಕೆರೆಯ ಬಾಣಾವರ ದೊಡ್ಡೇನಹಳ್ಳಿ ಮೂಲದ ನಾಗರಾಜ ಡಿ.ಕೆ ಎಂದು ಗುರುತಿಸಲಾಗಿದೆ. ದಿನಾಂಕ 07-11-2020 ರಂದು ಬ್ಯಾಂಕ್ ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಿಬರುತ್ತೇನೆ ಎಂದು ಮನೆಯಿಂದ ಹೋಗಿದ್ದವ ಮನೆಗೆ ಬಾರದ ಹಿನ್ನಲೆಯಲ್ಲಿ ಹಾಸನ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸು ದಾಖಲಾಗಿತ್ತು. ದಿನಾಂಕ 10-11-2020ರಂದು ಮಂಗಳವಾರ ಬಡಗಣಿ ಹೊಳೆಯಲ್ಲಿ ಅಪರಿಚಿತ ಯುವಕನೊಬ್ಬನ ಶವ ತೇಲುತ್ತಿರುವುದನ್ನು ಕಂಡ ಸ್ಥಳಿಯರು ಹೊನ್ನಾವರ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಘಟನಾ ಸ್ಥಳಕ್ಕೆ ದಾವಿಸಿದ ಪೊಲೀಸರು ನೀರಿನಲ್ಲಿ ತೇಲುತ್ತಿದ್ದ ಶವವನ್ನು ದಡಕ್ಕೆ ತಂದು ಪರಿಶೀಲಿಸಿದಾಗ ಹಾಸನ ಮೂಲದವನೆಂದು ಪತ್ತೆಯಾಗಿದೆ. ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋಗಿದ್ದ ವ್ಯಕ್ತಿ ಹೊನ್ನಾವರಕ್ಕೆ ಬಂದು ಆತ್ಮಹತ್ಯೆಮಾಡಿಕೊಂಡಿರುವುದು ಯಾಕೆ ಎನ್ನುವ ಅನುಮಾನ ಕಾಡುತ್ತಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Leave a Comment