• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸುವರ್ಣ ತ್ರಿ ಭುಜ ಬೋಟ್ ನಾಪತ್ತೆ ಪ್ರಕರಣ; ಕಣ್ಮರೆಯಾಗಿದ್ದ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷರೂ . ಪರಿಹಾರ ವಿತರಿಸಲಿರುವ ಸಿಎಂ

November 20, 2020 by bkl news Leave a Comment

ಭಟ್ಕಳ: ಎರಡು ವರ್ಷಗಳ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ಕಣ್ಮರೆಯಾಗಿದ್ದ ಸುವರ್ಣ ತ್ರಿ ಭುಜ ಬೋಟ್ ಹಾಗೂ ಅದರಲ್ಲಿನ 7 ಮಂದಿ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಧನ ನೀಡಬೇಕೆಂದು ಸಲ್ಲಿಸಿದ ಮನವಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸ್ಪಂದಿಸಿ ಶನಿವಾರದಂದು ವಿಧಾನಸೌಧದಲ್ಲಿ ಕಣ್ಮರೆಯಾದ ಮೀನುಗಾರರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಲಿದ್ದಾರೆ. 

IMG 20201120 WA0079


ಕಳೆದ ಎರಡು ವರ್ಷದ ಹಿಂದೆ ಡಿಸೆಂಬರ್ 16 ರಂದು ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಸಹಿತ 7 ಮಂದಿ ಮೀನುಗಾರರು ಆಕಸ್ಮಿಕವಾಗಿ ಕಣ್ಮರೆಯಾಗಿದ್ದು ಅವರ ಕುಟುಂಬಕ್ಕೆ ಅವರೇ  ಆಧಾರ ಸ್ಥಂಭವಾಗಿದ್ದರು. ಆದರೆ ಅವರ ಪತ್ತೆ ಇನ್ನು ಆಗದ ಹಿನ್ನೆಲೆಯಲ್ಲಿ ಬಡ ಕುಟುಂಬಕ್ಕೆ ಜೀವನ ನಡೆಸಲು ಅನೂಕೂಲವಾಗುವ‌ ನಿಟ್ಟಿನಲ್ಲಿ 
ಹಿಂದೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಹಾಗೂ ಉಡುಪಿ ಶಾಸಕ ರಘುಪತಿ ಭಟ್ ಅವರೊಂದಿಗೆ ಮತ್ತು ಕುಮಟ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಜೊತೆಗೆ ಭಟ್ಕಳ ಶಾಸಕ ಸುನೀಲ ನಾಯ್ಕ ಅವರ ನಿಯೋಗದ ತಂಡವೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ “ಸುವರ್ಣ ತ್ರಿಭುಜ” ಬೋಟ್ ಮುಳುಗಡೆಯಾಗಿ ಕಣ್ಮರೆಯಾದ 7 ಜನ ಮೀನುಗಾರರ ಕುಟುಂಬಕ್ಕೆ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ತಲಾ ರೂ. 10 ಲಕ್ಷ ಪರಿಹಾರ ಘೋಷಣೆ ಮಾಡುವಂತೆ ಮನವಿ ಮಾಡಲಾಗಿತ್ತು. 
ಅದರಂತೆ ರಾಜ್ಯ ಸರಕಾರಕ್ಕೆ ಸಚಿವರು ಸಹಿತ ಉಡುಪಿ, ಕುಮಟಾ, ಭಟ್ಕಳ ಶಾಸಕರು ಒತ್ತಾಯ ಮಾಡುತ್ತಾ ಬಂದ ಹಿನ್ನೆಲೆ ಕುಟುಂಬಕ್ಕೆ ಸದ್ಯ ಸರಕಾರವೂ ಭಾರಿ ದೊಡ್ಡ  ಮೊತ್ತದ ಪರಿಹಾರವೂ ಸಿಗುವಂತಾಗಿದ್ದು ಮೀನುಗಾರಿಕಾ ಸಚಿವರ, ಉಡುಪಿ, ಕುಮಟಾ ಹಾಗೂ ಪ್ರಮುಖವಾಗಿ ಭಟ್ಕಳ ಶಾಸಕರ ಪಾತ್ರ ಮೆಚ್ಚುವಂತಹದ್ದಾಗಿದೆ. 

IMG 20201120 WA0080


ಸದ್ಯ ಸಚಿವರು, ಶಾಸಕರುಗಳ ನಿಯೋಗದ ಮನವಿಗೆ ಸ್ಪಂದಿಸಿದ  ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸಂತ್ರಸ್ತ  ಕುಟುಂಬಗಳಿಗೆ ಇದೇ ಶನಿವಾರ ವಿಧಾನಸೌಧದಲ್ಲಿ ತಲಾ 10 ಲಕ್ಷ ರೂಪಾಯಿಯ ಚೆಕ್ ನ್ನು  ಹಸ್ತಾಂತರಿಸಲಿದ್ದಾರೆ. ಈ ಹಿನ್ನೆಲೆ ಗುರುವಾರದಂದು ಈ ಬಗ್ಗೆ 7 ಕುಟುಂಬಗಳಿಗೆ ಮೀನುಗಾರಿಕಾ ಇಲಾಖೆ ಅಧಿಕಾರಿಗಳು ಸವಿವರವಾಗಿ ಮಾಹಿತಿ ನೀಡಿದ್ದು ಬೆಂಗಳೂರಿಗೆ ಕುಟುಂಬಸ್ಥರು ತೆರಳಲಿದ್ದಾರೆ. 
ಈ ಹಿಂದೆ ಕೇಂದ್ರ ಸರ್ಕಾರದಿಂದ 10 ಲಕ್ಷ ರೂಪಾಯಿ ಪರಿಹಾರ ಧನವು ಸಂತ್ರಸ್ತ ಕುಟುಂಬಗಳಿಗೆ ನೀಡಲಾಗಿತ್ತು.
ಡಿಸೆಂಬರ್ 13 ರಂದು ಉಡುಪಿಯ ಮಲ್ಪೆಯಿಂದ ಹೊರಟ ಸುವರ್ಣ ತ್ರಿಭುಜ ಬೋಟ್ ಮಹಾರಾಷ್ಟ್ರದ ರತ್ನಗಿರಿ ಪ್ರದೇಶದ ಸಮುದ್ರದಲ್ಲಿ ಡಿಸೆಂಬರ್ 15 ರ ರಾತ್ರಿ 1 ಘಂಟೆ ವರೆಗೆ ಸಂಪರ್ಕದಲ್ಲಿತ್ತು. ನಂತರ ಸಂಪರ್ಕ ಕಳೆದುಕೊಂಡಿತ್ತು. ಸಹಜವಾಗಿ ಮೀನುಗಾರರು ಅಪಾಯದಲ್ಲಿ ಸಿಲುಕಿದಾಗ ಜಿಪಿಎಸ್ ಅಥವಾ ಮೊಬೈಲ್ ಸಂಪರ್ಕ ದಲ್ಲಿ ಒಬ್ಬರಿಗೊಬ್ಬರು ಸಂಪರ್ಕದಲ್ಲಿರುತ್ತಾರೆ. ಆದರೆ ಸುವರ್ಣ ತ್ರಿಭುಜ ಬೋಟ್ ನ ಯಾವೊಬ್ಬ ಮೀನುಗಾರರೂ ಬೇರೆ ಮೀನುಗಾರರ ಸಂಪರ್ಕ ಮಾಡಿಲ್ಲ. ಇದಲ್ಲದೇ ಜಿಪಿಎಸ್ ಮೊಬೈಲ್ ಸಿಗ್ನಲ್ ಸಹ ಸಂಪರ್ಕ ಕಳೆದುಕೊಂಡಿತ್ತು. ಈ ಕಾರಣದಿಂದ ಯಾವುದೋ ಕಡಲಗಳ್ಳರು ಬೋಟನ್ನು ಅಪಹರಿಸಿರಬಹುದು ಎಂದು ಹೇಳಲಾಗಿತ್ತು.

IMG 20201120 WA0078

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News

Explore More:

About bkl news

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...